ನಮ್ಮ ಬಗ್ಗೆ

ನಮ್ಮ ಬಗ್ಗೆ – About Us

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷ್ಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ

ಸಾಮಾಜಿಕ ಮಾಧ್ಯಮ

ಶಿವಲಿಂಗಕ್ಕೆ ಅರ್ಧಪ್ರದಕ್ಷಿಣೆ ಏಕೆ ಹಾಕುತ್ತಾರೆ ?

ಶಿವಲಿಂಗಕ್ಕೆ ಅರ್ಧಪ್ರದಕ್ಷಿಣೆಯನ್ನು ಏಕೆ ಹಾಕುತ್ತಾರೆಂಬ ಮಾಹಿತಿ ಇದೆ ಓದಿ

ಪಾಣಿಪೀಠದಿಂದ ಉತ್ತರ ದಿಕ್ಕಿನ ಕಡೆಗೆ ಮಂದಿರದ ವಿಸ್ತಾರದ ಕೊನೆಯವರೆಗೆ ಹೋಗುವ ಹರಿನಾಳಕ್ಕೆ ಸೋಮಸೂತ್ರವೆನ್ನುತ್ತಾರೆ.

ಶಿವಲಿಂಗದ ಎದುರು ನಿಂತಾಗ ಬಲಬದಿಗೆ ಅಭಿಷೇಕದ ನೀರು ಹೋಗುವ ಹರಿನಾಳವಿರುತ್ತದೆ.

ಪ್ರದಕ್ಷಿಣೆಯ ಮಾರ್ಗವು ಅಲ್ಲಿಂದ ಆರಂಭವಾಗುತ್ತದೆ. ಪ್ರದಕ್ಷಿಣೆ ಹಾಕುವಾಗ ಹರಿನಾಳದಿಂದ ಆರಂಭಿಸಿ ತಮ್ಮ ಎಡಬದಿಯಿಂದ ಹರಿನಾಳದ ಇನ್ನೊಂದು ಬದಿಯವರೆಗೆ ಹೋಗಬೇಕು.

ನಂತರ ಹರಿನಾಳವನ್ನು ದಾಟದೇ ಹಿಂತಿರುಗಿ ಪುನಃ ಹರಿನಾಳದ ಮೊದಲ ಬದಿಯವರೆಗೆ ಬಂದು ಪ್ರದಕ್ಷಿಣೆ ಪೂರ್ಣಗೊಳಿಸಬೇಕು.

  ನವರಾತ್ರಿಯ 5ನೇ ದಿನ - ಸ್ಕಂದ ಮಾತಾ ಪೂಜಾ ವಿಧಾನ

🕉ಪ್ರದಕ್ಷಿಣೆ ಫಲ🕉

ಪ್ರದಕ್ಷಿಣೆ ಯಾಕೆ ಹಾಕುತ್ತೇವೆ ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ.
ಭಗವಂತನ ಬಳಿ ನಿನ್ನ ಬಿಟ್ಟರೆ ನಮ್ಮನ್ನು ಕಾಯುವವರು ಯಾರು ಇಲ್ಲ, ನೀನು ತೋರಿಸಿದ ಮಾರ್ಗದಲ್ಲಿ ನಡೆಯುತ್ತೇವೆ ಎಂಬುದು ಈ ಪ್ರದಕ್ಷಿಣೆ ಅರ್ಥ.
ದೇವಸ್ಥಾನದಲ್ಲಿ ಪ್ರದಕ್ಷಿಣೆಯನ್ನು ಎಷ್ಟು ಬಾರಿ ಮಾಡಿದರೆ ಏನು ಫಲ ಎಂಬುದನ್ನು ತಿಳಿಯೋಣ.

ದೇವಸ್ಥಾನದಲ್ಲಿ 5 ಬಾರಿ ಪ್ರದಕ್ಷಿಣೆ ಮಾಡಿದರೆ ಜಯ ಸಿಗುತ್ತದೆ.

7ಬಾರಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿದರೆ ಶತ್ರುಗಳನ್ನು ಪರಜಯ ಮಾಡಬಹುದು.

9 ಬಾರಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿದರೆ ಸಂತಾನಪ್ರಾಪ್ತಿಯಾಗುತ್ತದೆ.

  ಹಸಿವು ಮತ್ತು ಶ್ರೀಮಂತರ ಕತೆ

11 ಬಾರಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿದರೆ ಆಯುಷ್ಯ ವೃದ್ದಿಯಾಗುತ್ತದೆ.

ದೇವಸ್ಥಾನಕ್ಕೆ 13 ಬಾರಿ ಪ್ರದಕ್ಷಿಣೆ ಹಾಕಿದರೆ ಪ್ರಾರ್ಥನೆ ಸಿದ್ದಿಯಾಗುತ್ತದೆ.

15 ಬಾರಿ ಪ್ರದಕ್ಷಿಣೆ ಹಾಕುವುದರಿಂದ ಧನ ಪ್ರಾಪ್ತಿಯಾಗುತ್ತದೆ.

17 ಬಾರಿ ಪ್ರದಕ್ಷಿಣೆ ಮಾಡಿದರೆ ಧನ ವೃದ್ದಿಯಾಗುತ್ತದೆ.

19 ಬಾರಿ ಪ್ರದಕ್ಷಿಸಿದರೆ ರೋಗ ನಿವಾರಣೆಯಾಗುತ್ತದೆ.

ದೇವಸ್ಥಾನಕ್ಕೆ ಬೆಳಗಿನ ಜಾವ ಪ್ರದಕ್ಷಿಣೆ ಹಾಕಿದರೆ ರೋಗ ನಿವಾರಣೆಯಾಗುತ್ತದೆ.

ಮಧ್ಯಾಹ್ನ ಪ್ರದಕ್ಷಿಣೆ ಹಾಕಿದರೆ ಇಷ್ಟಾರ್ಥ ಸಿದ್ದಿಯಾಗುತ್ತದೆ.

ಸಂಜೆ ಸಮಯದಲ್ಲಿ ಪ್ರದಕ್ಷಿಣೆ ಮಾಡುವುದರಿಂದ ಪಾಪ ದೂರವಾಗುತ್ತದೆ.

ರಾತ್ರಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿದರೆ ಮೋಕ್ಷ ಸಿದ್ದಿಯಾಗುತ್ತದೆ.

  ಭಾರತದಲ್ಲಿ ತೆರಿಗೆ ಕೊಡುವವರು ಯಾರು ? Who are the Tax Payers in India ?

Leave a Reply

Your email address will not be published. Required fields are marked *

Translate »