ನಮ್ಮ ಬಗ್ಗೆ

ನಮ್ಮ ಬಗ್ಗೆ – About Us

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷ್ಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ

ಸಾಮಾಜಿಕ ಮಾಧ್ಯಮ

ಯುಗಾದಿ ಹಬ್ಬದ ಪೂಜಾ , ಪಂಚಾಂಗ ಶ್ರವಣ ಹಾಗೂ ಸಂಪ್ರದಾಯ ವಿಧಿ ವಿಧಾನ

ಯುಗಾದಿ…!

ಯುಗ,ಯುಗಗಳು ಕಳೆದ ರೂ ಯುಗಾದಿ ಮರಳಿ ಬರುತಿದೇ, ಹೊಸ ವರುಷ ಕೇ ಹೊಸ ಪೀಳಿಗೆಗೆ ಹೊಸತು ಹೊಸತು ತರುತಿದೆ.

ಚೈತ್ರ ಮಾಸದ ಮಹತ್ವ
ಯುಗಾದಿ ಹಬ್ಬದ ಮಹತ್ವ

ಚೈತ್ರಮಾಸಕ್ಕೆ ವಿಷ್ಣು ನಿಯಾಮಕ
ಚೈತ್ರ ಶುಕ್ಲ ಪ್ರತಿಪತ್ತಿನoದು ಯುಗಾದಿ ಹಬ್ಬದ ದಿನ ನೂತನ ವರ್ಷಾರಂಭ

ಈ ದಿನ ಅರುಣೋದಯದ ಕಾಲದಲ್ಲಿಯೇ ಎದ್ದು ಭಗವಂತನ ನಾಮಸ್ಮರಣೆಯನ್ನು ಮಾಡುತ್ತಾ -ದೇವರ ಮನೆಗೆ ಹೋಗಿ ದೇವರ ಮುoದೆ ಇಟ್ಟಿರುವ ಪಂಚಾoಗ ,ತರಕಾರಿಗಳು -ಧಾನ್ಯಗಳು ,ಫಲ-ತಾoಬೂಲಗಳು ಎಣ್ಣೆ ನೆಲ್ಲಿಕಾಯಿ ಮುoತಾದ ವಸ್ತುಗಳನ್ನು ಹೊಸ ಕನ್ನಡಿಯ ಮೂಲಕ ನೋಡಬೇಕು .ಯಾವ ಯಾವ ವಸ್ತುಗಳನ್ನು ಕನ್ನಡಿಯ ಮೂಲಕ ನೋಡುವೇವೋ ಅವುಗಳನ್ನು ಬಿoಬರೂಪಿ ಪರಮಾತ್ಮನು ದೊರಕಿಸಿಕೋಡುವನು. ಮುಖಪ್ರಕ್ಷಾಲನೆಯನ್ನು ಮಾಡಿ ಗಜೇoದ್ರ ಮೋಕ್ಷಪಾರಯಣ ಮಾಡಬೇಕು

ಯುಗಾದಿಯಂದು ಪ್ರತಿಯೋಬ್ಬನು
ಅಭ್ಯoಜನ ಮಾಡಲೇಬೇಕು . ಈ ಮೊದಲು ಪೂಜಕನು ಸ್ನಾನ ಮಾಡಿ ಭಗವoತನಿಗೆ ಎಣ್ಣೆ ಸೀಗೆಪುಡಿ -ಬಿಸಿನಿರಿನಿoದ ಅಭ್ಯoಜನವನ್ನು ಮಾಡಿಸಬೇಕು . ಭಗವಂತನಿಗೆ ಮಾಡಿ ಉಳಿದ ಎಣ್ಣೆ -ಸೀಗೆಪುಡಿಗೆ ಬೇರೆ ಎಣ್ಣೆ ,ಸೀಗೆಪುಡಿಯನ್ನು ಬೆರೆಸಿ ಪ್ರತಿಯೋಬ್ಬರು ಹಚ್ಚಿಕೊoಡು ನಂತರ ಸ್ನಾನ ಮಾಡಬೇಕು.

ಸಪ್ತಚಿರoಜೀವಿಸ್ಮರಣೆ

ಎಣ್ಣೆಯನ್ನು ಹಚ್ಚಿಕೊಳ್ಳುವಾಗ ಅಶ್ವತ್ಥಾಮಾದಿ ಸಪ್ತ ಚಿರoಜೀವಿಗಳನ್ನು ಮಾರ್ಕoಡೇಯನನ್ನು ಈ ಕೆಳಗೆ ಕೊಟ್ಟಿರುವ ಮಂತ್ರವನ್ನು ಹೇಳಿ ಸ್ಮರಿಸಬೇಕು .

अश्वत्तामा बलिर्व्यास: हनूमांश्च विभीषण: । कृप: परशुरामश्च सप्तैते चिरंजीविन: ।

ಅಶ್ವತ್ತಾಮಾ ಬಲಿರ್ವ್ಯಾಸ: ಹನೂಮಾಂಶ್ಚ ವಿಭೀಷಣ: | ಕೃಪ: ಪರಶುರಾಮಶ್ಚ ಸಪ್ತೈತೇ ಚಿರಂಜೀವಿನ: |

ಅಭ್ಯoಜನವನ್ನು ಮಾಡಿದ ನಂತರ ಭಗವಂತನ ವಿಶೇಷ ಪೂಜೆಯನ್ನು ಮಾಡಿ ನಂತರ ಹೊಸಬಟ್ಟೆಯನ್ನು ಧರಿಸಿ ನಿoಬಕ ದಳ ಬಕ್ಷಣ
(ಬೇವು -ಬೆಲ್ಲ)ವನ್ನು ಮಾಡಬೇಕು

ಬೇವು ಬೆಲ್ಲ ಭಕ್ಷಣೆ ಮಾಡುವಾಗ ಹೇಳಬೇಕಾದ ಮ oತ್ರ

शतायुर्वज्रदेहाय सर्वसंपत्कराय च सर्वारिष्टविनाशाय निंबकदळभक्षणम

ಶತಾಯುರ್ವಜ್ರದೇಹಾಯ ಸರ್ವಸಂಪತ್ಕರಾಯ ಚ | ಸರ್ವಾರಿಷ್ಟವಿನಾಶಾಯ ನಿಂಬಕದಳಭಕ್ಷಣಮ್ |

ನೂರು ವರ್ಷಆಯುಸ್ಸು -ವಜ್ರದಂತೆ ಧೃಢವಾದ ಶರೀರ ಸರ್ವಸಂಪತ್ತು ಸರ್ವರಿಷ್ಟನಾಶ ಇವುಗಳಿಗಾಗಿ ಯುಗಾದಿಯoದು ಬೇವು ಬೆಲ್ಲಗಳ ಭಕ್ಷಣೆ ಮಾಡಬೇಕು
*ನಂತರ ಪಂಚಾoಗ ಶ್ರವಣಮಾಡಬೇಕು

ಪಂಚಾಂಗ ಶ್ರವಣ ಎಂದರೇನು ಮತ್ತು ಅದರ ಮಹತ್ವ ಏನು?

  ​ಯೋಗಿನಿ ಏಕಾದಶಿ ವ್ರತ ಕಥೆ​

ಜ್ಯೋತಿಷಿಯ ಪೂಜೆಯನ್ನು ಮಾಡಿ ಅವರಿಂದ ಅಥವಾ ಉಪಾಧ್ಯಾಯರಿಂದ ಹೊಸ ವರ್ಷದ ಪಂಚಾಂಗವನ್ನು ಅರ್ಥಾತ್ ವರ್ಷಫಲದ ಶ್ರವಣವನ್ನು ಮಾಡಬೇಕು. ಈ ವರ್ಷಫಲದ ಶ್ರವಣದ ಫಲ ಹೇಳಲಾಗಿದೆ, ಅದು ಮುಂದಿನಂತಿದೆ. ತಿಥಿಯ ಶ್ರವಣದಿಂದ ಲಕ್ಷ್ಮೀಯು ಲಭಿಸುತ್ತಾಳೆ, ವಾರದ ಶ್ರವಣದಿಂದ ಆಯುಷ್ಯವು ವೃದ್ಧಿಯಾಗುತ್ತದೆ, ನಕ್ಷತ್ರಶ್ರವಣದಿಂದ ಪಾಪನಾಶ ವಾಗುತ್ತದೆ, ಯೋಗಶ್ರವಣದಿಂದ ರೋಗಗಳ ನಿವಾರಣೆಯಾಗುತ್ತದೆ, ಕರಣ ಶ್ರವಣದಿಂದ ಇಚ್ಛಿತ ಕಾರ್ಯವು ಸಾಧ್ಯವಾಗುತ್ತದೆ. ಇವು ಪಂಚಾಂಗ ಶ್ರವಣದ ಉತ್ತಮ ಫಲಗಳಾಗಿವೆ. ಇದರ ನಿತ್ಯಶ್ರವಣದಿಂದ ಗಂಗಾಸ್ನಾನದ ಫಲವು ಲಭಿಸುತ್ತದೆ.’

ಬೇವಿನ ಪ್ರಸಾದ

ಪಂಚಾಂಗಶ್ರವಣದ ನಂತರ ಕಹಿ ಬೇವಿನ ಪ್ರಸಾದ ಹಂಚಬೇಕು. ಈ ಪ್ರಸಾದವನ್ನು ಬೇವಿನ ಹೂವು,ಚಿಗುರೆಲೆಗಳು, ನೆನೆಸಿದ ಕಡಲೆಕಾಳು ಅಥವಾ ಬೇಳೆ, ಜೇನು, ಜೀರಿಗೆ ಮತ್ತು ಸ್ವಲ್ಪ ಇಂಗು ಇವೆಲ್ಲವನ್ನು ಬೆರೆಸಿ ತಯಾರಿಸುತ್ತಾರೆ.

ಭೂಮಿಯನ್ನು ಊಳುವುದು:

ಯುಗಾದಿಯಂದು ಭೂಮಿಯನ್ನು ಊಳಬೇಕು. ಭೂಮಿಯನ್ನು ಊಳುವಾಗ ಕೆಳಗಿನ ಮಣ್ಣು ಮೇಲೆ ಬರುತ್ತದೆ. ಮಣ್ಣಿನ ಸೂಕ್ಷ್ಮ-ಕಣಗಳ ಮೇಲೆ ಪ್ರಜಾಪತಿ ಲಹರಿಗಳ ಸಂಸ್ಕಾರವಾಗಿ ಬೀಜ ಮೊಳಕೆಯೊಡೆಯುವ ಭೂಮಿಯ ಸಾಮರ್ಥ್ಯವು ಅನೇಕ ಪಟ್ಟು ಹೆಚ್ಚಾಗುತ್ತದೆ. ಭೂಮಿಗೆ ಉಪಯೋಗಿಸಲ್ಪಡುವ ಸಲಕರಣೆ ಮತ್ತು ಎತ್ತುಗಳ ಮೇಲೆ ಪ್ರಜಾಪತಿ ಲಹರಿಗಳನ್ನು ಉತ್ಪನ್ನ ಮಾಡುವ ಮಂತ್ರಸಹಿತ ಅಕ್ಷತೆಗಳನ್ನು ಹಾಕಬೇಕು. ಹೊಲದಲ್ಲಿ (ಗದ್ದೆಯಲ್ಲಿ) ಕೆಲಸ ಮಾಡುವವರಿಗೆ ಹೊಸ ಬಟ್ಟೆಗಳನ್ನು ಕೊಡಬೇಕು. ಈ ದಿನ ಹೊಲದಲ್ಲಿ ಕೆಲಸ ಮಾಡುವ ಜನರ ಮತ್ತು ಎತ್ತುಗಳ ಭೋಜನದಲ್ಲಿ ಕುಂಬಳಕಾಯಿ, ಹೆಸರುಬೇಳೆ, ಅಕ್ಕಿ, ಹೂರಣ ಮುಂತಾದ ಪದಾರ್ಥಗಳಿರಬೇಕು.

ದಾನ :

ಯಾಚಕರಿಗೆ ಅನೇಕ ವಿಧದ ದಾನವನ್ನು ಕೊಡಬೇಕು, ಉದಾ. ಅರವಟ್ಟಿಗೆಯನ್ನು (ಜಲ ಮಂದಿರ) ನಿರ್ಮಿಸಿ ನೀರಿನ ದಾನವನ್ನು ಮಾಡಬೇಕು. ಇದರಿಂದ ಪಿತೃಗಳು ಸಂತುಷ್ಟರಾಗುತ್ತಾರೆ.

ಈ ದಿನ ಅನೇಕ ವಿಧದ ಮಂಗಲ ಹಾಡುಗಳನ್ನು ಮತ್ತು ಪುಣ್ಯಪುರುಷರ ಕಥೆಗಳನ್ನು ಕೇಳುತ್ತಾ ಈ ದಿನವನ್ನು ಆನಂದದಿಂದ ಕಳೆಯಬೇಕು. ಈಗಿನ ಕಾಲದ ಹಬ್ಬವೆಂದರೆ ಮೋಜು ಮಜಾ ಮಾಡುವ ದಿನವೆಂಬ ಸಂಕಲ್ಪನೆ ಬರುವಂತಾಗಿದೆ, ಆದರೆ ಹಿಂದೂ ಧರ್ಮದ ಶಾಸ್ತ್ರೀಯ ಪದ್ಧತಿಯ ಹಬ್ಬವೆಂದರೆ ‘ಹೆಚ್ಚೆಚ್ಚು ಚೈತನ್ಯ ಪಡೆಯುವ ದಿನ’ವಾಗಿರುತ್ತದೆ. ಆದ್ದರಿಂದ ಹಬ್ಬದಂದು ಸಾತ್ತ್ವಿಕ ಆಹಾರ, ಸಾತ್ತ್ವಿಕ ಬಟ್ಟೆ ಹಾಗೂ ಇತರ ಧಾರ್ಮಿಕ ಕೃತಿ ಇತ್ಯಾದಿಗಳನ್ನು ಮಾಡುವುದರೊಂದಿಗೆ ಸಾತ್ತ್ವಿಕವಾದ ಸುಖದಾಯಕ ಕೃತಿಗಳನ್ನು ಮಾಡಲು ಶಾಸ್ತ್ರವು ಹೇಳಿದೆ. ಈ ರೀತಿ ಯುಗಾದಿಯನ್ನು ಆಚರಿಸುವುದರಿಂದ ಆರೋಗ್ಯ, ಕೃಷಿ ಮುಂತಾದವು ಹೆಚ್ಚಾಗುತ್ತದೆ.

  ವಾದಿರಾಜ ಜಯಂತಿ

ಪಂಚಾಂಗ ಶ್ರವಣ ಮಾಡುವ ರೂಡಿ.

ಇದು ಯುಗಾದಿ ಹಬ್ಬದ ವೈಶಿಷ್ಟ್ಯ ಅಂಶ ಹಾಗೂ ಸಂಪ್ರದಾಯ. ಅಂದು ಮದ್ಯಾಹ್ನ ಅಥವಾ ಸಂಜೆ ದೇವಸ್ಥಾನಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಂಚಾಂಗ ಪಠಣ ಸಾಮೂಹಿಕ ಶ್ರವಣ ನಡೆಯುತ್ತದೆ. ಇದು ಮಹಾಭಾರತದ ಕಾಲದಿಂದಲೂ ನಡೆದುಕೊಂಡು ಬಂದಿದೆ ಎಂದು ತಿಳಿದು ಬಂದಿದೆ. ಭವಿಷ್ಯ ಪುರಾಣದಲ್ಲಿ ಧರ್ಮರಾಯನನ್ನು ಕುರಿತು ಹೀಗೆ ಹೇಳಲಾಗಿದೆ.

‘ಮಹಾಬಾಹೋ, ಚೈತ್ರ ಶುದ್ಧ ಪಾಡ್ಯಮಿ ಪುಣ್ಯಕರವಾದದು. ಆ ದಿನ ಬೇವಿನ ಚಿಗುರನ್ನು ತಿಂದು, ತಿಥಿ, ನಕ್ಷ ತ್ರ, ಶಕವರ್ಷ, ವರ್ಷಾಧಿಪತಿಗಳು, ರಸಧಾನ್ಯಾಧಿಪತಿಗಳು, ಮೇಘಾಧಿಪತಿ ಮೊದಲಾದವರ ಬಗ್ಗೆ ಕೇಳಿ ತಿಳಿದುಕೊಳ್ಳ -ಬೇಕು. ಹೀಗೆ ಕೇಳುವುದರಿಂದ ಮಾನವರಿಗೆ ಅಶುಭಗಳು ನಿವಾರಣೆಯಾಗಿ ಶುಭವಾಗುವುದು ಲಕ್ಷ್ಮೀಪ್ರದವಾಗುವುದು’ ಎಂದು ಹೇಳಿದೆ.

ಮತ್ತೊಂದು ಶ್ಲೋಕದಲ್ಲಿ ಹೇಳಿರುವಂತೆ ಈ ಶುಭದಿನದಂದು ಪಂಚಾಂಗವನ್ನು ಕೇಳುವವರಿಗೆ ಅಧಿಕಫಲ. ಶಾಶ್ವತ ಸುಖ, ಅಪಾರ ಐಶ್ವರ್ಯ, ಅತುಳ ಯಶಸ್ಸು, ಪಾಪನಾಶನ – ಈ ಸತ್ಪಲಗಳು ಲಭಿಸುತ್ತವೆ. ಪಂಚಾಂಗ ಪಠಣದಿಂದ ಪ್ರತಿಯೊಂದು ಮಾಸದ ಫಲ, ರಾಶಿಫಲ, ದ್ವಾದಶಾದಿತ್ಯರು ಮಳೆ-ಬೆಳೆ ಮೊದಲಾದ ವಿಚಾರಗಳನ್ನು ಮುಂಚಿತವಾಗಿಯೇ ತಿಳಿಯುವುದರಿಂದ ಆ ವರ್ಷದಲ್ಲಿ ನಡೆಸಬೇಕಾದ ವ್ಯವಹಾರ ವಹಿವಾಟುಗಳನ್ನು ನಡೆಸುವ ಮುಂದಾಲೋಚನೆಗೆ ಮಾರ್ಗದರ್ಶನ ಸ್ಫೂರ್ತಿ ದೊರೆತಂತಾಗುತ್ತದೆ.

ಚಂದ್ರದರ್ಶನ

ಪಾಡ್ಯದ ನಂತರ ಬಿದಿಗೆಯ ದಿನ. ಸ್ನಾನ ಪೂಜಾದಿಗಳನ್ನು ಮಾಡಿ ಸಂಜೆ ಚಂದ್ರ ದರ್ಶನ ಮಾಡಿ ನಮಸ್ಕರಿಸುವ ಸಂಪ್ರದಾಯ. ಚಂದ್ರನನ್ನು ನೋಡಿದ ಕೂಡಲೇ ‘ಕ್ಷೀರ ಸಮುದ್ರದಲ್ಲಿ ಹುಟ್ಟಿದವನೇ ಶ್ರೀ ಲಕ್ಷ್ಮೀದೇವಿಯ ಸಹೋದರನೇ, ಶಿವನ ಜಟೆಯಲ್ಲಿರುವವನೇ, ಬಾಲಚಂದ್ರ ನಿನಗೆ ನಮಸ್ಕಾರ’ ಎಂದು ಭಕ್ತಿಯಿಂದ ಪ್ರಾರ್ಥಿಸಿ ಹೊಸ ಬಟ್ಟೆಯ ಒಂದು ನೂಲನ್ನು ಅವನಿಗೆ ಅರ್ಪಿಸುವ ಸಂಪ್ರದಾಯ. ಚಂದ್ರದರ್ಶನ ಮಾಡಿ ಹಿರಿಯರಿಗೆ ನಮಸ್ಕರಿಸುವುದು, ಮಿತ್ರರಿಗೆ ಶುಭವನ್ನು ಹಾರೈಸುವುದು ರೂಢಿಯಲ್ಲಿದೆ. ಯುಗಾದಿಯಂದು ಪಾಡ್ಯ ಬರುವಾಗ ಹೊಸ ಸಂವತ್ಸರದ ಉದಯ ಮಾತ್ರವಲ್ಲದೆ ತಿಥಿ, ವಾರ, ನಕ್ಷ ತ್ರಾದಿಗಳು ಉದಯಿಸುತ್ತವೆ. ಆದ್ದರಿಂದ ಪಾಡ್ಯಮಿಯಂದು ಹಬ್ಬದ ಆಚರಣೆ ಮತ್ತು ಬಿದಿಗೆಯಂದು ಚಂದ್ರನ ದರ್ಶನ ವಿಧಿಸಿದ್ದಾರೆ. ಇದು ಎಲ್ಲರ ಆಯುರಾರೋಗ್ಯ ಅಭಿವೃದ್ಧಿಗೆ ಕಾರಣವಾಗಿದೆ.

  ಚಾಂದ್ರಮಾನ ಯುಗಾದಿ ಹಬ್ಬ ಇತಿಹಾಸ ಮತ್ತು ಆಚರಣೆ ಮತ್ತು ವೈಜ್ಞಾನಿಕ ವಿಶ್ಲೇಷಣೆ

ಪಾಡ್ಯದ ಗುಡಿ

ಕರ್ನಾಟಕದ ಕೆಲವು ಪ್ರದೇಶಗಳೂ ಸೇರಿದಂತೆ ಗುಜರಾತ್‌, ಮಹಾರಾಷ್ಟ್ರ -ಗಳಲ್ಲಿ ಪಾಡ್ಯದ ವಿಶಿಷ್ಟ ಸಂಪ್ರದಾಯ ಪ್ರಚಲಿತವಿದೆ. ಪಾಡ್ಯದ ಗುಡಿ ಎಂದರೆ ಧ್ವಜ ಕಟ್ಟುವುದು. ಈ ಬಗ್ಗೆ ಮಹಾಭಾರತದಲ್ಲಿಯೂ ಉಲ್ಲೇಖವಿದೆ. ಇದಕ್ಕೆ ಇಂದ್ರ ಧ್ವಜ ಎಂದು ಕರೆಯಲಾಗುತ್ತದೆ.

ಪುರುವಂಶದ ವಸುರಾಜನು ಇಂದ್ರನನ್ನು ಒಲಿಸಿಕೊಂಡು ಯುದ್ಧದಲ್ಲಿ ಜಯಗಳಿಸಿ ಪುಷ್ಪಹಾರವನ್ನು ಪಡೆದನಂತೆ. ವಸುರಾಜ ಈ ಪುಷ್ಪಹಾರದೊಂದಿಗೆ ತನ್ನ ನಗರ ಪ್ರವೇಶಮಾಡಿದ್ದು ಚೈತ್ರ ಶುದ್ಧಪ್ರತಿ ಪಡೆಯೆಂದು. ಇಂದ್ರನ ಗೌರವಾರ್ಥ ವಸುರಾಜನ ನಗರಿಯಲ್ಲಿ ಅಂದು ನಡೆದ ಉತ್ಸವ ಇಂದು ಇಂದ್ರಧ್ವಜದ ಪೂಜೆಯಲ್ಲಿ ಉಳಿದುಕೊಂಡು ಬಂದಿದೆ.

ಪಂಚಾಂಗ ಶ್ರವಣದ ಕಾರಣ
ಯುಗಾದಿ ಎಂದರೆ ಯುಗದ ಆದಿ. ಬ್ರಹ್ಮ(Lord Brahma)ನು ಈ ಬ್ರಹ್ಮಾಂಡವನ್ನು ಸೃಷ್ಟಿಸಿದ ದಿನ. ಒಂದು ಯುಗಾದಿಯಿಂದ ಮತ್ತೊಂದು ಯುಗಾದಿಗೆ ಭೂಮಿಯು ಸೂರ್ಯನ ಸುತ್ತ ಒಂದು ಸುತ್ತನ್ನು ಪೂರ್ಣಗೊಳಿಸುತ್ತದೆ. ಇದನ್ನು ವಿಜ್ಞಾನ ಕೂಡಾ ಅನುಮೋದಿಸುತ್ತದೆ. ಹಾಗಾಗಿಯೇ ಯುಗಾದಿಗೆ ನಾವು ಹೊಸ ವರ್ಷ ಎಂದು ಆಚರಿಸುವುದು. ನಮ್ಮ ಒಂದು ವರ್ಷವೆಂದರೆ ಬ್ರಹ್ಮನಿಗೆ ಒಂದು ದಿನ.

ಪಂಚಾಂಗ ಶ್ರವಣ ಮಾಡುವುದರಿಂದ ಇಡೀ ವರ್ಷದ ಮುನ್ಸೂಚನೆ(prediction) ಸಿಕ್ಕಂತಾಗುತ್ತದೆ. ಏಕೆಂದರೆ ಮೊದಲೇ ಹೇಳಿದಂತೆ ಪಂಚಾಂಗದಲ್ಲಿ ತಿಥಿ, ವಾರ, ನಕ್ಷತ್ರ, ಯೋಗ, ಕರ್ಣದ ಬಗ್ಗೆ ಹೇಳಲಾಗಿರುತ್ತದೆ. ಯಾವ ತಿಥಿಯಲ್ಲಿ ಏನು ಮಾಡಬೇಕು, ಏನು ಮಾಡಬಾರದು, ಯಾವ ವಾರ, ನಕ್ಷತ್ರದಲ್ಲಿ ಏನು ಮಾಡಿದರೆ ಯಶಸ್ಸು ಲಭಿಸುತ್ತದೆ, ಯಾರಿಗೆ ಯಾವ ಯೋಗವಿದೆ ಎಲ್ಲವೂ ವಿವರವಾಗಿರುತ್ತದೆ. ಇವೆಲ್ಲವನ್ನೂ ಸುತ್ತಲಿನ ಗ್ರಹಗಳು ಹಾಗೂ ನಕ್ಷತ್ರಗಳ ಆಧಾರದಲ್ಲಿಯೇ ಲೆಕ್ಕ ಹಾಕಲಾಗಿರುತ್ತದೆ. ಅದರ ಆಧಾರದ ಮೇಲೆ ನಾವು ನಮ್ಮ ಮುಂದಿನ ದಿನಗಳು ಸುಲಲಿತವಾಗಿ ಸಾಗುವಂತೆ ಯೋಜನೆ ರೂಪಿಸಿ ಕೊಳ್ಳಬಹುದು 🙏

Leave a Reply

Your email address will not be published. Required fields are marked *

Translate »