ನಮ್ಮ ಬಗ್ಗೆ

ನಮ್ಮ ಬಗ್ಗೆ – About Us

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷ್ಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ

ಸಾಮಾಜಿಕ ಮಾಧ್ಯಮ

ಸಾವಿರಾರು ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೧೧

ಕನ್ನಡ ಜನಪ್ರಿಯ ಗಾದೆಗಳು | Kannada Popular Proverbs | Janapriya Gaadegalu | Kannada Gaadegalu | ಕನ್ನಡ ಗಾದೆಗಳು | Kannada Proverbs | ಜನಪ್ರಿಯ ಗಾದೆಗಳು | Kannada Gaade Maathu | ಕನ್ನಡ ಗಾದೆ ಮಾತು | ಗಾದೆ ವಿಸ್ತರಣೆ | Gaade expand | ಗಾದೆ ಅರ್ಥ ಸಹಿತ | proverbs with meanings

ಸಾವಿರಾರು ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೧೧

ಊರಿಗೆ ಬ೦ದವಳು ನೀರಿಗೆ ಬರದೆ ಇರುತ್ತಾಳೆಯೇ ?
ನಿಷ್ಠೆ ಇಲ್ಲದವನಿಗೆ ದೈವ ಬಟ್ಟಬಯಲು
ನಾಚಿಕೆ ಬಿಟ್ಟವ ಊರಿಗೇ ದೊಡ್ಡವ.
ಏಕಾದಶಿಯ ಮನೆಗೆ ಶಿವರಾತ್ರಿ ಬಂದ ಹಾಗೆ
ಭೂಮಿ ದಾನದ ಫಲವ ಜಂಬೂದ್ವೀಪದವರೇ ಬಲ್ಲರು
ಆಡಿಕೊಳ್ಳೋರ ಮುಂದೆ ಎಡವಿ ಬಿದ್ದ ಹಾಗೆ
ಮಂಡಕ್ಕಿ ತಿಂದ ಮಗ ಮದ್ದಾನೆ ತರುಬಿದ ಮೃಷ್ಟಾನ್ನ ತಿಂದ ಮಗ ನೊಣ ಝಾಡಿಸಿದ
ಗಾಳಿ ಗುದ್ದಿ ಮೈ ಕೈ ನೋಯಿಸಿಕೊಂಡಂತೆ
ತಲೆಗೆಲ್ಲಾ ಒಂದೇ ಮಂತ್ರವಲ್ಲ
ಇದ್ದಾಗ ನವಾಬ ಸಾಬ, ಇಲ್ಲದಾಗ ಫಕೀರ ಸಾಬ.
ಯಾರ ತೋಟದ ಹುಲ್ಲು ಮೇದಾದ್ರೂ ನಮ್ಮ ಕರು ದೊಡ್ಡದಾಗಲಿ.
ಅತ್ತು ಹೆದರಿಸೋನೊಬ್ಬ ;ಹೇ.. ಹೆದರಿಸೋನೊಬ್ಬ
ಮಾತು ಮನೆ ಕೆಡಿಸಿತು; ತೂತು ಒಲೆ ಕೆಡಿಸಿತು
ಮೇಯುವುದಕ್ಕೆ ಮುಂದೆ ;ಮೀಯುವುದಕ್ಕೆ ಹಿಂದೆ
ಹುಬ್ಬೆ ಮಳೇಲಿ ಬಿತ್ತಿದರೆ ಹುಲ್ಲೂ ಇಲ್ಲ ಕಾಳೂ ಇಲ್ಲ
ಉಂಡದ್ದು ಊಟ ಆಗಲಿಲ್ಲ, ಕೊಂಡದ್ದು ಕೂಟ ಆಗಲಿಲ್ಲ
ಹಂಗು ತೊರೆದ ಮೇಲೆ ಲಿಂಗದ ಪರಿವೆ ಏನು.
ಹೊಳೆಯಲ್ಲಿ ಹುಣಿಸೇ ಹಣ್ಣು ಕಿವಿಚಿದಂತೆ
ಎಂಟು ಹೊನ್ನು ಘನವಾದ ನಂಟು ತಂತು
ಮುಂದೆ ಬರೋ ಕೋಡಿಗಿಂತ ಹಿಂದೆ ಬರೋ ಬಾಲಾನೇ ವಾಸಿ
ಅನ್ಯಾಯದಿಂದ ಗಳಿಸಿದ್ದು ಅಸಡ್ಡಾಳಾಗಿ ಹೋಯ್ತು
ನನಗೆ ನಿನಗೆ ಹಿತ ಇಲ್ಲ, ನಿನ್ನ ಬಿಟ್ಟು ನನಗೆ ಗತಿ ಇಲ್ಲ ಎಂದಂತೆ.
ಅಕ್ಕ ಸತ್ತರೆ ಅಮಾಸೆ ನಿಲ್ಲದು, ಅಣ್ಣ ಸತ್ತರೆ ಹುಣ್ಣಿಮೆ ನಿಲ್ಲದು
ಅರಿತೂ ಮಾಡಿದ ಪಾಪ ವಜ್ರದ ಸೆರೆಯಂತೆ
ಅಕ್ಕಸಾಲಿಗನ ಮಗ ಚಿಮ್ಮಟ ಹಿಡಿಯುತ್ತಲೇ ಹೊನ್ನ ಕದ್ದ
ಗಾಣವಾಡದೆ ಎಣ್ಣೆ ಬಂದೀತೇ
ಊರು ಹೋಗು ಅನ್ನುತ್ತೆ; ಕಾಡು ಬಾ ಅನ್ನುತ್ತೆ
ತಟ್ಟಿ ಬೈಸಿಕೊಂಡರೂ ತಟ್ಟೇ ಹುಳಿ ಚೆನ್ನಾಗಿದೆ
ಕಳ್ಳ ಹೊಕ್ಕ ಮನೆಗೆ ಎಣ್ಣೆ ದಂಡ.
ರಂಗನ ಮುಂದೆ ಸಿಂಗನೆ ? ಸಿಂಗನ ಮುಂದೆ ಮಂಗನೆ ?
ಕೂತು ಉಣ್ಣೋನಿಗೆ ಕುಡಿಕೆ ಹೊನ್ನು ಸಾಲದು
ಗುರುವಿಗೆ ತಿರುಮಂತ್ರ
ತಾಮ್ರದ ಕಾಸು ತಾಯಿ ಮಕ್ಕಳನ್ನು ಬೇರೆ ಮಾಡ್‌ತಂತೆ
ಕೊಡುವ ದೇವರು ಬಡವನೇ?
ಅಕ್ಕ ಸತ್ತರೆ ಅಮಾವಾಸ್ಯೆ ನಿಲ್ಲುತ್ತದೆಯೇ ?
ಕೆಲಸವಿಲ್ಲದ ಕುಂಬಾರ ಮಕ್ಕಳ ಅಂ.. ತಟ್ಟಿದ
ತಲೆ ಬಲಿಯಿತು ಅಂತ ಕಲ್ಲಿಗೆ ಹಾಯಬಾರದು
ಕೋಣನಾಗಿರುವುದಕ್ಕಿಂತ ಜಾಣನಾಗಿರುವುದು ಲೇಸು.
ಭಾವಿಗೆ ಬಿದ್ರೆ,ಸಾಲಿಗ್ರಾಮ ಸಿಗ್ತಂತೆ
ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ.
ಸೀರೆ ಗ೦ಟು ಬಿಚ್ಚೋವಾಗ ದಾರದ ನ೦ಟು ಯಾರಿಗೆ ಬೇಕು.
ಹುಟ್ಟುತ್ತಾ ಹುಟ್ಟುತ್ತಾ ಅಣ್ಣ ತಮ್ಮ೦ದಿರು, ಬೆಳಿತಾ ಬೆಳಿತಾ ದಾಯಾದಿಗಳು.
ರಾವಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ
ಅವರವರ ತಲೆಗೆ ಅವರವರದೇ ಕೈ
ಹತ್ತು ಮಂದಿ ಹುಲ್ಲು ಕಡ್ಡಿ ಒಬ್ಬನ ತಲೆ ಭಾರ
ಹುಟ್ಟು ಗುಣ ಸುಟ್ಟರೂ ಹೊಗೊದಿಲ್ಲ
ಬೆಕ್ಕಿಗೆ ಬೆಣ್ಣೆ ಕಂಡಿತು ಬಡಿಗೆ ಕಾಣಲಿಲ್ಲ.
ಅಕ್ಕಿ ಮೇಲೆ ಆಸೆ, ನೆಂಟರ ಮೆಲೆ ಪ್ರೀತಿ
ಸೊಕ್ಕಿದ್ದು ಉಕ್ತದೆ ಉಕ್ಕಿದ್ದು ಒಲೆಗೆ ಹಾರ್ತದೆ
ಅಣ್ಣ ಪುನರ್ವಸು ಮಳೆ, ತಮ್ಮ ಪುಷ್ಯ ಮಳೆ
ಅಕ್ಕ ನನ್ನವಳಾದ್ರೆ ಬಾವ ನನ್ನವನೇನು
ಅಕ್ಕರೆಯ ಅಕ್ಕ ಬಂದಾಗೇ ಸಕ್ಕರೆಯೆಲ್ಲ ಕಹಿ ಆಯ್ತು
ಯಾರದೋ ದುಡ್ಡು; ಎಲ್ಲಮ್ಮನ ಜಾತ್ರೆ
ಮು೦ಡೆಯ ಮದುವೆಯಲ್ಲಿ ಉ೦ಡೋನೆ ಜಾಣ.
ಅಜ್ಜಿ ನೂತದ್ದೆಲ್ಲಾ ಅಜ್ಜನ ಉಡಿದಾರಕ್ಕೆ.
ಸಮುದ್ರದ ಮದ್ಯೆ ಇದ್ದರೂ ಉಪ್ಪಿಗೆ ಬರವಂತೆ
ಬಂಧುಗಳಿಲ್ಲದಿರೊ ಬಡತನ ಎಂದಿಗೂ ಬೇಡ
ಹಳೆಯ ಕೋಟು ಧರಿಸಿ, ಹೊಸ ಪುಸ್ತಕ ಕೊಳ್ಳಿ.
ಗಂಡ ಸರಿಯಿದ್ರೆ ಗುಂಡೂ ಪಾವನ
ತಟಕಿನಿಂದ ತಟಪಟವಾಯಿತು ತಟಕು ಬಿದ್ದು ಮಠಾ ಕೆಡಿಸಿತು
ಅಟ್ಟದ ಮೇಲೆ ಒಲೆ ಉರಿಯಿತು..ಕೊಟ್ಟಮೇಲೆ ಅಳಿಯ ಉರಿದ..
ನಡೆವರ್ ಎಡವದೇ ಕುಳಿತವರ್ ಎಡವುವರೇ
ಉದ್ದುದ್ದ ಮಾತಿನವರ ಮೊಳಕೈ ಮೊಂಡ.
ಅಡಿಕೆ ಕದ್ದ ಮಾನ ಆನೆ ಕೊಟ್ರೂ ಬರೊಲ್ಲ
ತಾಯಿ ಮಾಡಿದ ಹೊಟ್ಟೆ ;ಊರು ಮಾಡಿದ ಕೊಳಗ
ಸೂಳೆ ಪಾಪ ಸನ್ಯಾಸಿಗೆ
ಕುಡಿಯೋ ನೀರಿನಲ್ಲಿ ಕೈಯಾಡಿಸಿದ ಹಾಗೆ.
ಹಾಕ್ಮಣೆ, ನೂಕ್ಮಣೆ, ಯಾಕ್ಮಣೆ
ತಿಪ್ಪೇ ಮೇಲಣ ದೀಪ ಉಪ್ಪರಿಗೆಯ ಮೇಲೆ ಬಂದೀತೋ?
ಒಳ್ಳೇರ ಒಡನಿದ್ದು ಕಳ್ಳ
ದಕ್ಷಿಣೆಗಾದರೆ ಮಾತು ಹಿಡಿದಾನು, ಮಂತ್ರಕ್ಕಾದರೆ ಬೆನ್ನು ತೋರ್ಸಿಯಾನು.
ಹೌದಪ್ಪನ ಚಾವಡಿಯಲ್ಲಿ ಅಲ್ಲಪ್ಪನನ್ನು ಕೇಳುವವರಾರು ?
ಇತ್ತಿತ್ತ ಬಾ ಅಂದ್ರೆ ಇದ್ದ ಮನೇನೂ ಕಿತ್ತುಕೊಂಡ
ಕು೦ಟನಿಗೆ ಎ೦ಟು ಚೇಷ್ಟೆ
ಸಾಮವೇದದ ಗಾನ
ಊಟ ತನ್ನಿಚ್ಚೆ,ನೋಟ ಪರರಿಚ್ಚೆ
ಮಾಘ ಕಾವ್ಯ ಮಗನಿಗೆ ಬೇಡ
ಅಕ್ಕರೆಯಿದ್ದಲ್ಲಿ ದುಃಖವುಂಟು
ಆಕಳಿದ್ದವನಿಗೆ ವ್ಯಾಕುಲವಿಲ್ಲ.
ತೊಟ್ಟಿಲನ್ನು ತೂಗುವ ಕೈ ಜಗತ್ತನ್ನೇ ತೂಗಬಲ್ಲದು.
ಕೋತಿಗೆ ಹೆಂಡ ಕುಡಿಸಿದಂತೆ
ಡಂಬು (=ಬೂಟಾಟಿಕೆ) ನನ್ನ ಕೇಳು, ಡಬ್ಬು ನನ್ನ ಹೆಂಡ್ರನ್ನ ಕೇಳು
ಎದ್ದೋಗೋ ಮಾತು ಬಿದ್ದೋಗಲಿ
ಸಂತೆ ಸೇರೋಕೆ ಮೊದಲು ಗಂಟು ಕಳ್ಳರು ಸೇರಿದರು
ಉತ್ತರಿ ಮಳೆ ಹುಯ್ದರೆ ಹೆತ್ತಮ್ಮನೂ ಆಗೋಲ್ಲ.
ನಮ್ಮ ದೇವರ ಸತ್ಯ ನಮಗೆ ಗೊತ್ತಿಲ್ಲವೇ ?
ತರವಲ್ಲದ ಮಾತು ಮರ ಏರಿದರೆ ಆದೀತೇ
ಅಳಿವುದೇ ಕಾಯ ಉಳಿವುದೇ ಕೀರ್ತಿ
ದೀಪದ ಕೆಳಗೆ ಯಾವತ್ತೂ ಕತ್ತಲೇ
ಉಣಬೇಕು- ಉಡಬೇಕು ಎಂಬೋದಾದ್ರೆ ಎಮ್ಮೆ ಕಟ್ಟಬೇಕು.
ರೋಗಿ ಬಯಸಿದ್ದು ಹಾಲು-ಅನ್ನ ವೈದ್ಯ ಹೇಳಿದ್ದು ಹಾಲು-ಅನ್ನ
ಅಟ್ಟದ ಮೇಲಿಂದ ಬಿದ್ದವನಿಗೆ ದಡಿಗೆ ತಗೊಂಡು ಹೇರಿದರಂತೆ
ಕೊಂದ ಪಾಪ ತಿಂದು ಪರಿಹಾರ (=ಕೊಂದ ಪಾಪ/ಕರ್ಮ ತನಗೆ ಅಂಟಿಕೊಂಡು ಅದನ್ನು ತೊಡೆಯುವುದಕ್ಕೆ ಕಷ್ಟ ಅನುಭವಿಸಬೇಕಾಗುತ್ತದೆ)
ತಾರೇಮರದ ಕಾಯಾದರೂ ಕರೆದರೆ ಬಂದೀತೇ
ತಾರಕ್ಕೆ (ಎರಡು ಕಾಸಿನ ನಾಣ್ಯ) ಮೂರು ಸೇರು ಉಪ್ಪಾದರೂ ತರುವುದಕ್ಕೆ ಗತಿ ಬೇಡವೋ
ಗಂಡಸು ಕೂತು ಕೆಟ್ಟ ;ಹೆಂಗಸು ತಿರುಗಿ ಕೆಟ್ಟಳು
ಗಂಡ ಹೆಂಡಿರ ಜಗಳ ಉನ್ಡು ಮಲಗೊ ತನಕ
ಆಗ ಬಾ ಈಗ ಬಾ ಹೋಗಿ ಬಾ ಅನ್ನದೆ ಕೊಡುವ ತ್ಯಾಗವಾಗು
ಹೋದರೆ ಶಾಟ, ಬ೦ದರೆ ಬೆಟ್ಟ.
ಚಿನ್ನದ ಸೂಜೀಂತ ಕಣ್ಣು ಚುಚ್ಚಿಕೊಳ್ಳುವುದಕ್ಕೆ ಆಗುತ್ತದೆಯೇ?
ಬೆಳಗೂ ಹೆತ್ತ ಮಗೂನ ನಾಯಿ ಕೊಂಡೊಯ್ಯಿತಂತೆ
ನಾಳೆ ಯಾರೋ ನಾನು ಯಾರೋ!
ನಿನ್ನ ಹಿತು(ಮುದ್ದು),ನನ್ನ ತಿಂತು
ಹೆತ್ತವರಿಗೆ ಅಂಬಲಿ ಬಿಡದಿದ್ದರೂ, ಹಂಬಲ ಬಿಡದಿದ್ದರೆ ಸಾಕು
ತಾಳೆಮರ ಉದ್ದವಾದರೆ ಕೋಳಿಗೆ ಬಂದದ್ದೇನು
ಡಂಬು ನನ್ನ ಕೇಳು, ಡಬ್ಬು ನನ್ನ ಹೆಂಡ್ರನ್ನ ಕೇಳು
ನಿಜ ಆಡಿದರೆ ನಿಷ್ಠೂರ
ಹುಟ್ತಾ ಹುಟ್ತಾ ಅಣ್ಣ ತಮ್ಮಂದಿರು; ಬೆಳೀತಾ ಬೆಳೀತಾ ದಾಯಾದಿಗಳು
ಕೆಟ್ಟ ಮೇಲೆ ಬುದ್ಧಿ ಬಂತು
ಉದ್ಯೋಗವೇ ಗಂಡಸಿಗೆ ಲಕ್ಷಣ
ಎತ್ತು ಮಾರಿದವಗೆ ಹಗ್ಗದ ಆಸೆಯೇ
ತನ್ನ ಎಲೇಲಿ ಕತ್ತೆ ಸತ್ತು ಬಿದ್ದಿದ್ರೆ , ಪಕ್ಕದ ಎಲೇಲಿ ನೊಣ ಹೊಡೆಯಕ್ಕೆ ಹೋದ
ಅಜ್ಜಿ ಸಾಕಿದ ಮಗ ಬೊಜ್ಜಕ್ಕೂ ಬಾರದು
ಶೆಟ್ಟಿ ಬಿಟ್ಟಲ್ಲೆ ಪಟ್ಣ
ಹೋದೆಯಾ ಪಿಶಾಚಿ ಅಂದರೆ ಬಂದೆ ಗವಾಕ್ಷೀಲಿ ಅಂದಂತೆ
ಸಂದೀಲಿ ಸಮಾರಾಧನೆ
ಜೀವ ಜೀವವ ತಿಂದು ಜೀವಿಸುತಿದೆ ಜಗವೆಲ್ಲ
ಒಂದು ಹೊತ್ತು ಉಂಡವ ಯೋಗಿ, ಎರಡು ಹೊತ್ತು ಉಂಡವ ಭೋಗಿ, ಮೂರು ಹೊತ್ತು ಉಂಡವ ರೋಗಿ, ನಾಲ್ಕು ಹೊತ್ತು ಉಂಡವನ್ನ ಹೊತ್ತುಕೊಂಡು ಹೋಗಿ
ಸು೦ದರ ಪುರುಷನೆಲ್ಲೆ ಸುಪಣಾತಿ ಅ೦ದ್ರೆ ಸೂಳೆ ಮನೇಲಿ ಸುಖನಿದ್ರೇಲವ್ರೆ ಎ೦ದಳು.
ಮಾತು ಬೆಳ್ಳಿ, ಮೌನ ಬಂಗಾರ.
ಮಾತು ಆಡಿದರೆ ಹೋಯ್ತು,ಮುತ್ತು ಒಡೆದರೆ ಹೋಯ್ತು.
ಮೂರೂ ಬಿಟ್ಟೋನು,ಊರಿಗೆ ದೊಡ್ಡೋನು
ತಾಳಲಾರದ ವಿರಹ ತಿಣುಕಿದರೆ ಹೋದೀತೇ?
ತಾಸಿನ ಗೊತ್ತು ದಾಸಿಗೆ ತಿಳಿದೀತೇ?
ಕೆರೆಗೆ ತೊರೆ ಕೂಡಿ ಸರೋವರ ವಾಯ್ತು
ನಾಯಿ ಬೊಗಳಿದರೆ ದೇವಲೋಕ ಹಾಳಾಗುತ್ತದೆಯೆ ?
ಕುಚ ಹೇಮ ಶಸ್ತ್ರ ಸೋಂಕಿದಾಗ ಶುಚಿ ವೀರ ಧೀರರು ಅಚಲಿತರಾದರು
ಶೆಟ್ಟಿ ಸುಂಗಾರ ಆಗೋದರೊಳಗೆ ಪಟ್ಟಣ ಹಾಳಾಯ್ತು
ಕೋತಿ ತಾನು ಕೆಡೋದಲ್ದೆ ವನ ಎಲ್ಲ ಕೆಡಿಸಿತಂತೆ
ಮಹಾಜನಗಳು ಹೋದದ್ದೇ ದಾರಿ.
ವಿನಾಶ ಕಾಲೇ ವಿಪರೀತ ಬುದ್ಧಿ
ಮೃತ್ಯು ಬಂದ ಮೇಲೆ ವೈದ್ಯ ಬಂದ.
ಆನೆಯ ಹೊಟ್ಟೆಗೆ ಅಂಬಲಿ ಬಿಟ್ಟ ಹಾಗೆ
ಬೆಳ್ಳಗಿರೋದೆಲ್ಲ ಹಾಲಲ್ಲ
ಹರಕಿನಲ್ಲಿ ಇಲಿ ಕಡಿಯಿತು
ಇಲಿ ಬಂತು ಎಂದರೆ ಹುಲಿ ಬಂತು ಎಂದರು
ಉರಿಯೋ ಬೆಂಕೀಲಿ ಎಣ್ಣೆ ಹೊಯಿದ ಹಾಗೆ
ಕೊಂದ ಪಾಪ ತಿಂದು ಪರಿಹಾರ
ಕಾಸಿಗೆ ತಕ್ಕ ಕಜ್ಜಾಯ
ಭಂಗಿ ರಸ ನೆತ್ತಿಗೇರಿ ಬಿಂಗಿಯಂತೆ ಆಡಿದ
ಹಿರೀ‌ಅಕ್ಕನ ಚಾಳಿ ಮನೆ ಮಕ್ಕಳಿಗೆಲ್ಲಾ
ಕಾಲಕ್ಕೆ ತಕ್ಕಂತೆ ನಡೆಯಬೇಕು, ತಾಳಕ್ಕೆ ತಕ್ಕಂತೆ ಕುಣಿಯಬೇಕು
ಬಡ್ಡಿ ಬಾಯಿಗಂಜ್ತೀಯೋ, ದೊಡ್ಡೆತ್ತಿನ ಕೋಡಿಗಂಜ್ತೀಯೋ
ಕಲ್ಲ ನಾಗರ ಕಂದರೆ ಹಾಲೆರೆವರು ದಿಟ ನಾಗರ ಕಂಡರೆ ಕೊಲ್ಲೆಂಬರು
ಗಾಯದ ಮೇಲೆ ಬರೆ ಎಳೆದ ಹಾಗೆ.
ಅಗಸರ ಕತ್ತೆ ಕೊಂಡು ಹೋಗಿ, ಡೊಂಬರಿಗೆ ತ್ಯಾಗ ಹಾಕಿದ ಹಾಗೆ
ಕಳ್ಳನ ನಂಬಿದರೂ ಕುಳ್ಳನ್ನ ನಂಬಬೇಡ
ಊರು ಸುಟ್ಟರೂ ಹನುಮ೦ತರಾಯ ಹೊರಗೆ.
ಕಷ್ಟದಂತೆ ಫಲ, ಮನದಂತೆ ಮಹಾದೇವ.
ಅ೦ಕೆ ಇಲ್ಲದ ಕಪಿ ಲ೦ಕೆ ಸುಟ್ಟಿತು.
ಕುಂತು ತಿಂದರೆ, ಕುಡಿಕೆ ಹೊನ್ನೂ ಸಾಲದು
ಯಸಗಾತಿಗೆ ದೋಸೆ ಕೊಡೊ ಹೊತ್ತಿಗೆ, ಮೂಸಿಮೂಸಿ ಮೂಗಿನ ಕೆಳಗೆ ಹಾಕಿದ್ಲು
ಎಲ್ಲಾ ಬಣ್ಣ ಮಸಿ ನುಂಗಿತು
ತಲೇ ಕೂದಲಿದ್ದರೆ ಎತ್ತ ಬೇಕಾದರು ತುರುಬು ಹಾಕಿಕೊಳ್ಳಬಹುದು
ಹೆಣ್ಣು ಕೊಟ್ಟ ಮಾವ ಕಣ್ಣು ಕೊಟ್ಟ ದೇವರ ಸಮಾನ
ಐದು ಕುರುಡರು ಆನೆಯನ್ನು ಬಣ್ಣಿಸಿದ ಹಾಗೆ
ಬಿಮ್ಮಗಿದ್ದಾಗ ಹಮ್ಮು, ಬಿಮ್ಮು ತಪ್ಪಿದಾಗ ದಮ್ಮು
ಸೇರಿಗೆ ಸವ್ವಾಸೇರು
ಕೋತಿ ತಾನೂ ಕೆಡೋದಲ್ದೆ ವನಾನೂ ಕೆಡಿಸ್ತು
ತರಲಿಲ್ಲ ಬರಲಿಲ್ಲ ಬರ ಹ್ಯಾಗೆ ಹಿಂಗೀತು
ಕಾಸಿಗೆ ತಕ್ಕ ಕಜ್ಜಾಯ.
ತುಟ್ಟಿಯಾದರೂ ಹೊಟ್ಟೆ ಕೇಳದು
ಅಟ್ಟದಿಂದ ಬಿದ್ದವನನ್ನು ದಡಿಗೆ ತೆಗೆದುಕೊಂಡು ಚಚ್ಚಿದರು.
ಹೋದ ಬದುಕಿಗೆ ಹನ್ನೆರಡು ದೇವರು
ನಾಯಿಗೆ ಹೇಳಿದರೆ, ನಾಯಿ ತನ್ನ ಬಾಲಕ್ಕೆ ಹೇಳಿತ೦ತೆ.
ಹೊತ್ತನ್ನು ಕೊಲ್ಲುವ ಮೈಗಳ್ಳಗಿಂತ ಸತ್ತ ಹೆಣ ಲೇಸು
ತಿಂಗಳ ಬೆಳಕಾಗಿ ಬಾಳಿನಲ್ಲಿ ತಂಗಾಳಿ ಹಿಂಗದಿರಲಿ
ಬೆಂಕಿ ಇದ್ದಲ್ಲಿ ಬೆಳಕು ನೀರಿದ್ದಲ್ಲಿ ಕೆಸರು.
ಹುತ್ತ ಬಡಿದರೆ ಹಾವು ಸಾಯುವುದೇ
ಹಸಿದ ಹೊಟ್ಟೆ ತೋರಿಸಿದರೆ ಮಸೆದ ಕತ್ತಿ ತೋರಿಸಿದರು
ಎಲ್ಲರೂ ನಗ್ತಾರೆ ಅ೦ಥ ಕಿವುಡ ತಾನೂ ನಕ್ಕ.
ಕಾಮಾಲೆ ಕಣ್ಣೋನಿಗೆ ಕಂಡಿದ್ದೆಲ್ಲ ಹಳದಿ
ಒಳ್ಳಿಹ ಬಳ್ಳಿ ಕಳ್ಳಿಯ ಹಬ್ಬಿತು
ಕಲಹವೇ ಕೇಡಿಗೆ ಮೂಲ.
ಹಸಿ ಗೋಡೆ ಮೇಲೆ ಹರಳು ಎಸೆದಂತೆ
ಪಡುವಣ ಮನೆಗೆ ಮೂಡಣ ದೀಪ
ಹಾಲು ಕಾಯಿಸ್ಕೊಂಡು ನಾನಿದ್ದೆ ಹಲ್ಲು ಕಿರ‍್ಕೊಂಡು ನೀ ಬಂದೆ.
ಮದುವೆಯಾಗೋ ಗುಂಡ ಅಂದ್ರೆ ನೀನೇ ನನ್ನ ಹೆಂಡ್ತಿ ಅಂದ
ಕೊಂಕಣ ಸುತ್ತಿ ಮೈಲಾರಕ್ಕೆ ಬಂದರು
ಆರು ಕೊಟ್ಟರೆ ಅತ್ತೆ ಕಡೆ, ಮೂರು ಕೊಟ್ಟರೆ ಸೊಸೆ ಕಡೆ
ಹೆಡ್ಡಾಳಾದ್ರೂ ದೊಡ್ಡಾಳು ಮೇಲು
ಬೆನ್ನಹಿಂದೆ ಬಿದ್ದು ಬನ್ನ ಪಟ್ಟ
ಹೌದಪ್ಪನ ಮನೇಲಿ ಹೌದಪ್ಪ, ಇಲ್ಲಪ್ಪನ ಮನೇಲಿ ಇಲ್ಲಪ್ಪ
ಕುದಿಯುವ ಎಣ್ಣೆಯಿಂದ ಕಾದ ತವದ ಮೇಲೆ ಬಿದ್ದ ಹಾಗೆ
ತಪ್ಪಿದವನಿಗೆ ಒಪ್ಪು ಇಲ್ಲ
ಹಾದಿ ಹಣವಡ್ಡ ಹಾದರಗಿತ್ತಿ ಮನೆ ಯಾವುದು.
ಕರೆದು ಹೆಣ್ಣು ಕೊಟ್ಟರೆ ಮಲ್ಲೋಗರ ಬಂತಂತೆ.
ಅಗ್ಗದ ಮಾಲು;ಮುಗ್ಗಿದ ಜೋಳ
ತಾಯಿಯನ್ನು ನಿಂದಿಸಬೇಡ, ಒಳ್ಳೆಯವರನ್ನು ಬಂಧಿಸಬೇಡ.
ಚೇಳಿಗೆ ಪಾರುಪತ್ಯ ಕೊಟ್ಟರೆ ಮನೆಯವರಿಗೆಲ್ಲಾ ಮುಟ್ಟಿಸಿತಂತೆ.
ಡಾವರ ಹತ್ತಿದಾಗ ದೇವರ ಧ್ಯಾನ
ಹಾಲಪ್ಪ ಅಂತ ಹೆಸರಿದ್ದರೂ ಮಜ್ಜಿಗೆಗೆ ಗತಿ ಇಲ್ಲ
ರಾಮೆಶ್ವರಕ್ಕೆ ಹೋದ್ರೂ ಶನೀಶ್ವರನ ಕಾಟ ತಪ್ಪಲಿಲ್ಲ
ಹಾರುವನ ತೊತ್ತಾಗಬೇಡ ಗಾಣಿಗನ ಎತ್ತಾಗಬೇಡ.
ಅಡಿ ಅನ್ನಕ್ಕೆ ಅವಳೇ ಇಲ್ಲೆ ; ಪಿಳ್ಳೆ ಪೇರು ರಾಮಕೃಷ್ನ !
ಊಡದ ಆವಿಗೆ ಉಣ್ಣದ ಕರುವ ಬಿಟ್ಟಂತೆ
ತೇದು ಇಕ್ಕಿದೋಳಿಗಿಂತ ಸಾದು ಇಕ್ಕಿದೋಳು ಹೆಚ್ಚು
ಇಂಬರಿತು ಕೊಡುವಳೆ ರಂಭೆ
ನಾಯಿಯನ್ನು ಹೊಡೆಯಲು ಬಣ್ಣದ ಕೋಲೇ ?
ಶಸ್ತ್ರದಿಂದಾದ ಗಾಯ ಮಾಯುತ್ತದೆ, ನಾಲಿಗೆಯಿಂದಾದ ಗಾಯ ಮಾಯುವುದಿಲ್ಲ.
ಬೀದೀ ಕೂಸು ಬೆಳೀತು ಕೋಣೇ ಕೂಸು ಕೊಳೀತು
ಬೆಲ್ಲವಿದ್ದಲ್ಲಿ ನೊಣ, ಕೆಂಡವಿದ್ದಲ್ಲಿ ಕಾವು.
ದಾರವಿದ್ದರೆ ಮುತ್ತು ಹಾರವೆಂದನಿಸಿತ್ತು
ಅಂಜುತ್ತಾ ಅಳುಕುತ್ತಾ ತಿಂದ ಅಮೃತ ನಂಜು
ಒಲೆಯಮೇಲೆ ಇಟ್ಟಾಗ ಉಕ್ಕಿದಂತೆ ಹಾಲು, ಒಗ್ಗಟ್ಟಿಲ್ಲದ ಮನೆ ಬೀದಿಪಾಲು.
ಹೊಸ ಡಾಕ್ಟರ್‌ಗಿಂತ ಹಳೇ ಕಾಂಪೌಂಡರ್ ವಾಸಿ
ಅಪ್ಪ ಹಾಕಿದ ಆಲದ ಮರಕ್ಕೆ ನೇಣು ಹಾಕಿಕೊಂಡಂತೆ
ತಳಮಳ ತೀರಲಿಲ್ಲ, ಕಳವಳ ಕಳಿಯಲಿಲ್ಲ
ತಾಮ್ರದ ನಾಣ್ಯ ತಾಯಿ ಮಕ್ಕಳನ್ನ ಕೆಡಿಸ್ತು
ಸುಂಕದವನ ಮುಂದೆ ಸುಖದುಃಖವೇ
ಚೇಳಿಗೆ ಪಾರುಪತ್ಯ ಕೊಟ್ಟ ಹಾಗೆ
ಹೆಣ್ಣಿನ ಬಗೆ/ಮನಸ್ಸ ಬಲ್ಲೋರಿಲ್ಲ
ತನಗೆ ಇಲ್ಲ ಕೂಸಿಗೇನು ಹೊದ್ದಿಸಲಿ
ಹೆಸರಿಗೆ ಹೊನ್ನ ಹೆಗ್ಗಡೆ, ಎಸರಿಗೆ ಅಕ್ಕಿ ಇಲ್ಲ
ಆನೆ ಹೋದದ್ದು ದಾರಿ ಹಾವು ಹರಿದದ್ದು ಅಡ್ಡದಾರಿ
ನಿನ್ನ ಹಿತು(ಮುದ್ದು), ನನ್ನ ತಿಂತು
ಹಸಿದು ಹಲಸು, ಉಂಡು ಮಾವು
ಜಲ ಶೋಧಿಸಿ ನೀರು ತರ್ಬೇಕು, ಕುಲ ಶೋಧಿಸಿ ಹೆಣ್ಣು ತರ್ಬೇಕು.
ಭಾರವಾದ ಪಾಪಕ್ಕೆ ಘೋರವಾದ ನರಕ.
ರಾವಣನ ಮಾತಿಗೆ ಮನಸೋತವ, ರಾಮನ ಮಾತಿಗೆ ಜಾಣನಾಗುವನೇ?
ನಾಯಿ ಬೊಗಳಿದರೆ ದೇವಲೋಕ ಹಾಳಾಗುತ್ತ?
ತಾಯಿಯನ್ನು ಹೊಡೆಯಬಾರದು, ಗುಬ್ಬಿಯ ಗೂಡನ್ನು ತೆಗೆಯಬಾರದು.
ಯಾರನ್ನ ನಂಬಿದರು ಆರೈದು ನಂಬಬೇಕು
ಹಂದಿ ತನ್ನ ಚಂದಕ್ಕೆ ವೃಂದಾವನ ಆಡ್ಕೊಣ್ತು
ಸನ್ಯಾಸಿ ಸಂಸಾರ ಕಟ್ಟಿಕೊಂಡ ಹಾಗೆ
ಅರಣೆ ಕಡಿದರೆ ಭರಣಿ ಮದ್ದು ಸಾಲದು
ಪೆದ್ದ ಮರದ ತುದಿಯೇರಿ ಅಣಿತಪ್ಪಿ ಬಿದ್ದು ಸತ್ತ
ಹಾಲು ಕ೦ಡಲ್ಲಿ ಬೆಕ್ಕು ಹೇಲು ಕ೦ಡಲ್ಲಿ ನಾಯಿ
ಅರವತ್ತಕ್ಕೆ ಅರಳು ಮರಳು
ಬೂರುಗದ ಮರವನ್ನು ಗಿಣಿ ಕಾದ ಹಾಗೆ.
ನೆತ್ತರು ಉಕ್ಕಿದರೆ ಜೀವ ತೊಡಕೀತು
ಮಕ್ಕಳ ಬಾಯಿಗೆ ಹಣ್ಣು ಕೊಟ್ಟು ಮಣ್ಣು ಬಿಡಿಸು.
ತಲೆ ಗಟ್ಟಿ ಇದೆ ಅಂತ ಕಲ್ಲಿಗೆ ಹಾಯಬಾರದು
ಸಮಯಕ್ಕಿಲ್ಲದ ನೆರವು ಸಾವಿರ ಇದ್ದರೂ ಎರವು
ಸತ್ತವರಿಗೆ ಸಂಗವಿಲ್ಲ ಕೆಟ್ಟವರಿಗೆ ನೆಂಟರಿಲ್ಲ
ಕಯ್ಯಾರೆ ಮಾಡುವ ಧರ್ಮ ಲೇಸು
ಹೊತ್ತು ಕಳೆದರೆ ಮತ್ತೆ ಬಾರದು
ಹಿಟ್ಟೂ ಹಳಸಿತ್ತು ನಾಯಿಯೂ ಹಸಿದಿತ್ತು
ಮಾಡಿದ ಪಾಪ ದಾನದಿಂದ ಹೋದೀತೆ
ತನ್ನ ನೆರಳಿಗೆ ತಾನಂಜಿ ನಡೆಯಬೇಕು
ಬರೀ ಕೈಗಿಂತ ವಾಸಿ ಹಿತ್ತಾಳೆ ಕಡಗ
ಆಳಾಗಬಲ್ಲವನು ಅರಸನಾಗಬಲ್ಲ.
ತನ್ನ ತಾ ತಿಳಿದು ತಾನು ತಾನಾದುದೆ ಉನ್ನತಿ
ಹಸಿದವನಿಗೆ ಹಳಸಿದ್ದೇ ಪಾವನ.
ತರಗು ಲಡ್ಡಿಗೆ ಡೊಳ್ಳು ಗಣಪತಿಯೇ ಶ್ರೇಷ್ಠ
ಬಂಟರ ಅಬ್ಬರ ಸೇವಿನ ಗೊಬ್ಬರ
ಮದ್ದು ಬುದ್ಧಿ ದೈವ ಒಲ್ಲದೆ ತಿದ್ದವು
ಒಲಿದರೆ ನಾರಿ ಮುನಿದರೆ ಮಾರಿ
ಹಲ್ಲಿಲ್ಲದಿದ್ದರೂ ಚಕ್ಕುಲಿ ತಿನ್ನೋ ಚಪಲ.
ಗೆದ್ದೆತ್ತಿನ ಬಾಲ ಹಿಡಿದ ಹಾಗೆ
ಕೆಟ್ಟ ಮೇಲೆ ಲೊಟ್ಟ.
ಹಿತವಿಲ್ಲದ ಗಂಡ ಹಿಂದಿದ್ದರೇನು ಮುಂದಿದ್ದರೇನು
ಕಾಗೆಗೆ ಯಜಮಾನನ ಸ್ಥಾನ ಕೊಟ್ಟರೆ ಮನೆ ತುಂಬಾ ಪಿಷ್ಟ.
ಹಲವು ಸಲ ಸಾಯುವವನು ಹೇಡಿ,ವೀರಯೋಧನಿಗೊಂದೇ ಸಲ ಸಾವು
ಆಳು ಮೇಲೆ ಆಳು ಬಿದ್ದು ದೋಣು ಬರಿದಾಯ್ತು
ಅಯ್ಯೋ ಪಾಪ ಅಂದ್ರೆ ಅರ್ಧ ಆಯುಸ್ಸು
ಪಿಶಾಚಿ ಬಿಟ್ಟರೂ ನಿಶಾಚರ ಬಿಡ
ಇರಲಾರದೆ ಇರುವೆ ಬಿಟ್ಟುಕೊ೦ಡ ಹಾಗೆ.
ತನ್ನ ತಾನರಿತರೆ ತಾನ್‍ಆದಾನು ತನ್ನ ತಾ ಮರೆತರೆ ತಾ ಹೋದಾನು
ಬಳ್ಳಿಗೆ ಕಾಯಿ ಭಾರವೇ
ಅಡಿ ಅನ್ನಕ್ಕೆ ಅವಳೇ ಇಲ್ಲೆ ; ಪಿಳ್ಳೆ ಪೇರು ರಾಮಕೃಷ್ಣ
ಮಾಡಿದ್ದುಣ್ಣೋ ಮಹರಾಯ
ಹಿತ್ತಲ ಗಿಡ ಮದ್ದಲ್ಲ ಹತ್ತರ ಮಾತು ರುಚಿಯಲ್ಲ
ಕೋತಿ ಕಜ್ಜಾಯ ಹಂಚಿದ ಹಾಗೆ.
ಬೀದೀಲಿ ಹೊಗೊ ಮಾರೀನ ಮನೆಗೆ ಕರೆದಂಗೆ
ತೀರ್ಥಕ್ಕೆ ಥಂಡಿ, ಪ್ರಸಾದಕ್ಕೆ ಅಜೀರ್ಣ , ಮಂಗಳಾರತಿಗೆ ಉಷ್ಣ (ನಾಜೂಕು ದೇಹಸ್ಥಿತಿ)
ನಾಯಿ ಬಾಲಕ್ಕೆ ದೆಬ್ಬೆ ಕಟ್ಟಿದ ಹಾಗೆ
ತಾನಾಗಿ ಬೀಳುವ ಮರಕ್ಕೆ ಕೊಡಲಿ ಏಟು ಹಾಕಿದ ಹಾಗೆ .
ಶಂಖದಿಂದ ಬಿದ್ದರೆ ತೀರ್ಥ
ದುರ್ಭಿಕ್ಷದಲ್ಲಿ ಅಧಿಕ ಮಾಸ ಬಂದಂತೆ
ಹುಣ್ಣು ಮಾದರೂ ಕಲೆ ಮಾದೀತೇ
ಕಲ್ಲು ಇದ್ದಾಗ ನಾಯಿ ಇಲ್ಲ ನಾಯಿ ಇದ್ದಾಗ ಕಲ್ಲು ಇಲ್ಲ
ಆಷಾಡದ ಗಾಳಿ ಬೀಸಿ ಬೀಸಿ ಬಡಿವಾಗ, ಹೇಸಿ ನನ್ನ ಜೀವ ಹೆಂಗಸಾಗಬಾರದೇ
ಜಿನ ಧರ್ಮವೇ ಜೀವಧರ್ಮ ಮೂಕ ಪ್ರಾಣಿಯ ಕೊಲ್ಲದ್ದು ಜೀವಧರ್ಮ
ನಾಯೀನ ತಗೊಂಡು ಹೋಗಿ ಸಿಂಹಾಸನದ ಮೇಲೆ ಕೂರಿಸಿದರೆ … ಕಂಡು ಇಳಿಬಿತ್ತು
ತನಗೇ ಜಾಗವಿಲ್ಲ; ಕೊರಳಲ್ಲಿ ಡೋಲು ಬೇರೆ
ಉಪಾಸ ಇದ್ರೂ ಉಪದ್ರ ಇರಬಾರ್‍ದು
ತತ್ವದಲ್ಲಿ ಸತ್ವ ಹುಡುಕು, ವ್ಯಥೆಯಲ್ಲಿ ಕಥೆ ಹುಡುಕು.
ಮಾತಿಂದಲೇ ಉಪಚಾರ ಮಾತಿಂದಲೇ ಅಪಚಾರ
ಹಾಲಿನ ದುಡ್ಡು ಹಾಲಿಗೆ;ನೀರಿನ ದುಡ್ಡು ನೀರಿಗೆ
ಅನುಕೂಲ ಸಿಂಧು; ಅಭಾವ ವೈರಾಗ್ಯ
ನಾ ಬಡವ ವಾಲಗ ಸಾವಕಾಶ ಊದು ಅಂದಂತೆ
ಹಲಸಿನ ಹಣ್ಣು ಬೇಕು ಅಂಟು ಬೇಡ ಅಂದ್ರೆ ಹೇಗೆ
ಉಚ್ಚೆ ಕುಡಿದರೂ ತನ್ನಿಚ್ಚೇಲಿರಬೇಕು
ನಾಯಿಗೆ ಹೊತ್ತಿಲ್ಲ;ನಿಲ್ಲಕ್ಕೆ ನೆಲೆಯಿಲ್ಲ
ಬೆಂಕಿ ಇಲ್ಲದೆ ಹೊಗೆ ಏಳಲ್ಲ
ಪ್ರದಕ್ಷಿಣೆ ಹಾಕಿದರೆ ಪ್ರಯೋಜನವಿಲ್ಲ, ದಕ್ಷಿಣೆ ಹಾಕಿದರೇಯ ತೀರ್ಥ ಸಿಗೋದು
ಆಶ್ಲೇಷ ಮಳೆ , ಈಸಲಾರದ ಹೊಳೆ.
ಗಡ್ಡಕ್ಕೆ ಬೇರೆ ಸೀಗೇಕಾಯಿ
ಸತ್ತ ಮೇಲಿನ ಸೊರ್ಗಕ್ಕಿಂತ ಇದ್ದ ನರಲೋಕ ವಾಸಿ
ಸ್ವತಂತ್ರವೋ,ಸ್ವರ್ಗಲೋಕವೋ
ಹೆಂಡ ಕುಡಿದ ಕಪಿಗೆ ಚೇಳು ಕಡಿದ ಹಾಗೆ
ಹಬ್ಬದ ದಿನವೂ ಹಳೇ ಗಂಡನೇ ?
ಆಲಸಿ-ಮುಂಡೇದ್ಕೆ ಎರಡು ಖರ್ಚು, ಲೋಭಿ-ಮುಂಡೇದ್ಕೆ ಮೂರು ಖರ್ಚು
ತಿಗಳಾ ತಾ ಕೆಡುತ್ತಾ ಏಳು ನೆರೆ ಕೆಡಿಸಿದ
ಬಚ್ಚಿಟ್ಟ ಆಸ್ತಿ ಹೊಂಚುತ್ತಿದ್ದವರ ಪಾಲಾಯ್ತು
ಹಾದರ ಹಾಲು ಸಕ್ಕರೆಯಂತೆ, ಬಯಲಾದರೆ, ಬೇವಿನ ಸಾರದಂತೆ
ತಲೇ ಮೂರು ಸುತ್ತು ತಿರುಗಿದರೂ ತುತ್ತು ಬಾಯಿಲೇ
ಊರಿಗೆ ಊರ ಚಿಂತೆಯಾದರೆ ಅಜ್ಜಿಗೆ ಅರಿವೆ ಚಿಂತೆಯಂತೆ
ಅಕ್ಕ ಬರಬೇಕು ಅಕ್ಕಿ ಮುಗೀಬಾರದು
ಮಾಡೋದೆಲ್ಲ ಅನಾಚಾರ, ಮನೆ ಮುಂದೆ ಬೃಂದಾವನ.
ಕಂಡೋರ ಆಸ್ತಿಗೆ ನೀನೇ ಧಣಿ
ಹೋದ್ರೆ ಒಂದು ಕಲ್ಲು, ಬಂದ್ರೆ ಒಂದು ಹಣ್ಣು
ಮದುವೆ ಮಾಡಿ ನೋಡು, ಮನೆ ಕಟ್ಟಿ ನೋಡು
ಮಾಡಬಾರದ್ದು ಮಾಡಿದರೆ ಆಗಬಾರದ್ದೇ ಆಗುತ್ತೆ
ಇಂಗು ತೆಂಗು ಇದ್ದರೆ ಮಂಗಮ್ಮನೂ ಅಡಿಗೆ ಮಾಡ್ತಾಳೆ.
ಎತ್ತೂ ಕೋಣಕ್ಕೆ ಎರಡು ಕೋಡು, ನಮ್ಮ ಅಯ್ಯಂಗಾರ್ಗೆ ಮೂರು ಕೋಡು
ದುಡ್ಡಿಗೆ ದುಡ್ಡು ಗಂಟು ಹಾಕಿದ್ಯೋ? ಬೆನ್ನಿಗೆ ಹೊಟ್ಟೆ ಅಂಟು ಹಾಕಿದ್ಯೋ?
ಹಣ ಎರವಲು ತಂದು ಮಣ ಉರುವಲು ಕೊಂಡ
ಹೊಲಬನರಿಯದ (ರೀತಿಯಲ್ಲದ) ಮಾತು ತಲೆ ಬೇನೆ
ಗಂಡಸಿಗೇಕೆ ಗೌರಿ ದು:ಖ ?
ಬೆಂದ ಮನೇಲಿ ಹಿರಿದದ್ದೇ ಲಾಭ
ಇಲಿಯಾಗಿ ನೂರುದಿನ ಬಾಳೋದಕ್ಕಿಂತ ಹುಲಿಯಾಗಿ ಮೂರು ದಿನ ಬಾಳೋದು ಲೇಸು
ಇಟ್ಟುಕೊಂಡಾಕಿ ಇರೂತನ ಕಟ್ಟಿಕೊಂಡಾಕಿ ಕಡೀತನ
ಊಟಕ್ಕೆ ಉಪ್ಪಿನಕಾಯಿ ಇರಬೇಕೆ ಹೊರತು ,ಉಪ್ಪಿನಕಾಯಿಯೇ ಊಟ ಆಗಬಾರದು
ಹಣವಿದ್ದ ಗಂಡನನ್ನು ಮದುವೆಯಾದರೂ ಋಣವಿದ್ದಷ್ಟೇ ಬಾಳು
ತಾಯಿಗಿಂತ ಬಂಧುವಿಲ್ಲ; ಉಪ್ಪಿಗಿಂತ ರುಚಿಯಿಲ್ಲ
ಹಣದಲ್ಲಿ ಬಡವನಾದರೂ ಬುದ್ಧಿಯಲ್ಲಿ ಬಡವನಾಗಬಾರದು.
ಇರುಳು ಕಂಡ ಭಾವೀಲಿ ಹಗಲು ಬಿದ್ದರು
ತಾಳೆಮರ ದೊಡ್ಡದಾದರೂ ತಾಳೆ ಹೂವಿಗೆ ಸರಿಯಾದೀತೇ
ಹಿರಿಯಕ್ಕನ ಚಾಳಿ ಮನೆಮಕ್ಕಳಿಗೆಲ್ಲ
ಎಲ್ಲ ಕೆಡುಕಿಗೂ ಮೂಲ ಹೊಟ್ಟೆಕಿಚ್ಚು.
ರಟ್ಟೆ ಮುರಿದು ರೊಟ್ಟಿ ತಿನ್ನು ಕಟ್ಟೆ ಹಾಕಿ ಅನ್ನ ಉಣ್ಣು
ಮುಲಾಜಿಗೆ ಬಸುರಾಗಿ ಹೇರೋಕೆ ತಾವಿಲ್ಲ
ಕೋಣನಿಗೆ ಕೊಸೆಯೋ ಸಂಕಟ, ಎಮ್ಮೆಗೆ ಈಯೋ ಸಂಕಟ
ಬೇಸರವಿರಬಾರದು, ಅವಸರ ಮಾಡಬಾರದು.
ಸ್ಟ್ಯಾ೦ಪಿರುವಷ್ಟು ನಾಲಗೆ ಚಾಚು.
ಸಂತೆ ಸೂಳೆ ನೆಚ್ಚಿಕೊಂಡು ಮನೆ ಹೆಂಡಿರನ್ನ ಬಿಟ್ಟರಂತೆ.
ತೀರದ ಕಾರ್ಯ ಹಾರಿದರೂ ಆಗದು
ಕುಲಗೇಡಿ ಮಗ ಹುಟ್ಟಿ ಕುಲಕ್ಕೇ ಮಸಿ ಬಳಿದ
ತಾಳಿಕೆ (ತಾಳ್ಮೆ) ಉಳ್ಳವನಲ್ಲಿ ಕೇಳಿದರೆ ಕಾಳು ಸಿಕ್ಕುವುದು
ಆತುರಕ್ಕೆ ಅಜ್ಜಿ ಮೈನೆರೆದಳು
ಓದೋದು ಕಾಶಿ ಖಂಡ, ತಿನ್ನೋದು ಮಶಿ ಕೆಂಡ
ಚಿಂತೆ ಇಲ್ಲದವನಿಗೆ ಸನ್ತೇಲು ನಿದ್ದೆ.
ಅಯ್ಯಾ ಎಂದರೆ ಸ್ವರ್ಗ; ಎಲವೋ ಎಂದರೆ ನರಕ
ಕರ್ಮ ಕಳೆಯುವವರೆಗೆ ಮರ್ಮದಲ್ಲಿರು
ತಾಯಿ ನೋಡಿ ಮಗಳ ತರಬೇಕು. ಹಾಲು ನೋಡಿ ಎಮ್ಮೆ ತರಬೇಕು.
ಛತ್ರದಲ್ಲಿ ಊಟ ಮಠದಲ್ಲಿ ನಿದ್ರೆ
ಗ್ರಾಮ ಶಾ೦ತಿಗೆ ತಳವಾರ ತಲೆ ಬೋಳಿಸಿಕೊ೦ಡನ೦ತೆ.
ಮುಖ ನೋಡಿ ಮಣೆ ಹಾಕು
ತಕ್ಕಡಿ ಬಲ್ಲದೇ ಮನೆಯ ಬಡತನವ
ಪಾಪ ಅನ್ನೋದಕ್ಕೆ ಕೋಪವೇ ನೆಲೆಗಟ್ಟು
ಹಾರುವರ ಮೋರೆಯಾದರೂ ನೀರಿನಲ್ಲಿ ತೊಳೆಯದಿದ್ದರೆ ನಾರದೆ ಇದ್ದೀತೆ.
ವೈದ್ಯರ ಹತ್ತಿರ, ವಕೀಲರ ಹತ್ತಿರ ಸುಳ್ಳು ಹೇಳಬೇಡ
ಒಗ್ಗಟ್ಟಿಲ್ಲದ ಊರಲ್ಲಿ ಒಪ್ಪತ್ತೂ ಇರಬೇಡ.
ಸಂತೆ ಕಟ್ಟೋಕು ಮೊದಲೇ ಸೇರಿದರು
ಕೋ’ ಅನ್ನೋದು ಕುಲದಲ್ಲಿಲ್ಲ ,’ತಾ’ ಅನ್ನೋದು ತಾತರಾಯನ ಕಾಲದ್ದು
ಮನಸಿದ್ದರೆ ಮಾರ್ಗ.
ನೆರೆದ ಸಿರಿ ಜಾವಕ್ಕೆ ಹರಿದು ಹೋಯಿತು
ಉರಿಯೋ ಗಾಯಕ್ಕೆ ಉಪ್ಪು ಸವರಿದಂತೆ
ಇದ್ದ ಕಾಲದಲ್ಲಿ ಅಟ್ಟುಣ್ಣ ಬೇಕು
ಆಟಕ್ಕುಂಟು,ಲೆಕ್ಕಕ್ಕಿಲ್ಲ
ಒಣ ಮಾತು ಒಣಗಿದ ಹುಲ್ಲು, ಒಳ್ಳೆಯ ಮಾತು ಬೆಳ್ಳಗಿನ ಹಾಲು.
ಹೆರಿಗೆ ಬೇನೆ ಕೆಲ ಗಂಟೆ ಗಂಟ, ಬಂಜೆ ಬೇನೆ ಬದುಕಿನ ಗಂಟ
ಮೆತ್ತಗಿದ್ದವರನ್ನು ಮೊಣಕೈಯಲ್ಲಿ ಗುದ್ದಿದರು
ಅಳಿದೂರಿಗೆ ಉಳಿದವನೇ ಗೌಡ
ಆಪತ್ತಿಗಾದವನೇ ನಿಜವಾದ ಗೆಳೆಯ.
ನಿನ್ನ ಬಾಯಾಗೆ ಮಣ್ಣು ಹಾಕ
ನಾಳೆ ಎಂದವನಿಗೆ ಹಾಳು, ಇಂದೇ ಎಂದವನಿಗೆ ಬೀಳಾಗದು ಬಾಳು.
ಕಂಕುಳಲ್ಲಿ ದೊಣ್ಣೆ; ಕೈಯಲ್ಲಿ ಶರಣಾರ್ಥಿ
ಕೋತಿ ತಾನು ಮೊಸರನ್ನ ತಿಂದು ಮೇಕೆ ಬಾಯಿಗೆ ಒರೆಸಿತಂತೆ
ಬೆನ್ನಹಿಂದೆ ಬಿದ್ದು (ಓಡಿ)ಬನ್ನ ಪಟ್ಟ
ಆಡಿ ಉಂಡ ಮೈ ಅಟ್ಟು ಉಂಡೀತೇ?
ಹಣ ಅಂದರೆ ಹೆಣಾನೂ ಬಾಯಿ ಬಿಡುತ್ತದೆ
ತಲೆ ತಾಗಿದ್ದಲ್ಲದೆ ಬುದ್ಧಿ ಬಾರದು
ಮೂಗಿಗಿಂತ ಮೂಗುತಿ ಭಾರ
ಹಾಲಿಲ್ಲ ಬಟ್ಟಲಿಲ್ಲ ಗುಟುಕ್ ಅಂದ
ಗುಡ್ಡ ಕಡಿದು, ಹಳ್ಳ ತು೦ಬಿಸಿ, ನೆಲ ಸಮ ಮಾಡಿದ ಹಾಗೆ.
ಕಂಡ ಮನೆಗೆ ಕಳ್ಳ ಬಂದ , ಉಂಡ ಮನೆಗೆ ನೆಂಟ ಬಂದ
ಹಣ ಅಂದ್ರೆ ಹೆಣವೂ ಬಾಯಿ ಬಿಡ್ತದೆ
ಹಾರುವರ ಕೇರೀಲಿ ಹಬ್ಬ ಆದ್ರೆ ಮೂಳನಾಯಿಗೇನು ಓಡಾಟ
ಸಂತೆ ಹೊತ್ತಿಗೆ ಮೂರು ಮೊಳ ನೇದ ಹಾಗೆ
ಮಂಗ ಮೊಸರು ತಿಂದು ಮೇಕೆ ಬಾಯಿಗೆ ಸವರಿದ ಹಾಗಾಯಿತು.
ತೂಕಡಿಸುವವನಿಗೆ ಹಾಸಿಗೆ ಹಾಸಿ ಕೊಟ್ಟ ಹಾಗೆ
ಹುಚ್ಚು ಮನಸಿಗೆ ಹತ್ತು ಹಲವು ಮುಖಗಳು
ನೀಡುವರ ಬೇಡ ಅನ್ನೋದ್ ಕಷ್ಟ
ಹುಡುಕುತ್ತಿದ್ದ ಬಳ್ಳಿ ಕಾಲಿಗೇ ತೊಡರಿಕೊಂಡಿತು
ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ
ತಿರುಪತಿ ಕ್ಷೌರಿಕರು ತಲೆ ಬೋಳಿಸಿದ ಹಾಗೆ
ಕೆಟ್ಟ ಮೇಲೆ ಲೊಟ್ಟ
ಸಾವಿರ ಸುಳ್ಳು ಹೇಲಿ ಒಂದು ಮದುವೆ ಮಾಡು
ಸುಂಕದೋನ ಹತ್ರ ಸುಖದುಃಖ ಹೇಳಿಕೊಂಡ ಹಾಗೆ
ಅನ್ನ ಹಾಕಿದ ಮನೆಗೆ ಕನ್ನ ಹಾಕಿದಂತೆ
ದುಡಿಮೆಯೇ ದೇವರು
ಹಾವೂ ಸಾಯಲಿಲ್ಲ ಕೋಲು ಮುರೀಲಿಲ್ಲ
ತಿಮ್ಮಪ್ಪನ ದಯೆ ತಿಳಿದ ಕಳ್ಳ ತಿರಿಗಿದರೂ ಬಿಡ
ಹುಲ್ಲಿನ ಬಣವೇಲಿ ಸೂಜಿ ಹುಡುಕಿದ ಹಾಗೆ
ಕೊಟ್ಟೆ ಅಂತ ಹೇಳಿ ಕೊಡದವನ ಮಾತು ಬೆನ್ನಿಗೆ ಚೂರಿ ಇರಿದಂತೆ
ಓಡಿ ಹೋಗೋ ಬಡ್ಡಿ ಹಾಲು ಹೆಪ್ಪಿಟ್ಟಾಳೆ?
ಎಲ್ಲ ಮುಗಿದ ಮೇಲೆ ತೀರ್ಥಯಾತ್ರೆಗೆ ಹೊರಟಂತೆ.
ಎತ್ತೆಗೆ ಜ್ವರ ಬ೦ದರೆ ಎಮ್ಮೆಗೆ ಬರೆ ಎಳೆದರ೦ತೆ.
ಶಿವಾ ಅರಿಯದ ಸಾವು ಇಲ್ಲ ಮನಾ ಅರಿಯದ ಪಾಪ ಇಲ್ಲ
ಬಾಳಿಕೆಗೆಟ್ಟು ಬೆಸಲಾದ ಚೇಳಿನಂತಾದ
ಬಡವನ ಸಿಟ್ಟು ದವಡೆಗೆ ಮೂಲ
ವ್ಯಾಪಾರಕ್ಕೆ ನಿಮಿಷ ಬೇಸಾಯಕ್ಕೆ ವರುಷ
ಅರಿಯದೆ ಮಾಡಿದ ಪಾಪ ಅರಿತಂದು ಪರಿಹಾರ
ಕೂಟಸ್ಥ ಇಲ್ದೋನ ಓದು ಗಿಳಿ ಕಲ್ತ ಪಾಠದಂತೆ
ಕೀಟ ಸಣ್ಣದಾದರೂ ಕಾಟ ಬಹಳ.
ಪರದಾನಿ ಹೂಸು ಕುಡಿದ ಆಳು ಮೇಲೆ ಆಳು ಬಿದ್ದು ದೋಣು ಬರಿದಾಯ್ತು
ಊರಿಗಾಗದ ಗೌಡ, ಮೇಲೆರಗುವ ಗಿಡುಗ
ಆನೆಯಂಥದೂ ಮುಗ್ಗರಿಸ್ತದೆ
ತು೦ಬಿದ ಕೊಡ ತುಳುಕುವುದಿಲ್ಲ.
ಬಾಯಿಯಿದ್ದ ಮಗ ಬದುಕುವನು.
ಕಣ್ಣೆರಡಾದರೂ ನೋಟ ಒಂದೇ
ಹೆಣ್ಮಕ್ಕಳಿಗೆ ತಾಯಿ ಶಿಕ್ಷೆ,, ಗಂಡ್ಮಕ್ಕಳ್ಳಿಗೆ ತಂದೆ ಶಿಕ್ಷೆ.
ಇಟ್ಟುಕೊ೦ಡವಳು ಇರೋ ತನಕ, ಕಟ್ಟಿಕೊ೦ಡವಳು ಕೊನೇ ತನಕ.
ಕಜ್ಜಿ ಹೋದರೂ ಕಡಿತ ಹೋಗಲಿಲ್ಲ.
ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ
ಮಾಡೋದು ದುರಾಚಾರ, ಮನೆ ಮುಂದೆ ಬೃಂದಾವನ
ಘಟಾ ಇದ್ದರೆ ಮಠಾ ಕಟ್ಟಿಸಬಹುದು.
ಎತ್ತಿಗೆ ಜ್ವರ ಬ೦ದರೆ ಎಮ್ಮೆಗೆ ಬರೆ ಹಾಕಿದ ಹಾಗೆ.
ಹರುವಯ್ಯನ ಎಲೆ ಇಂಬ, ಒಕ್ಕಲಿಗನ ಮನೆ ಇಂಬ
ಓಡಿದವನಿಗೆ ಓಣಿ ಕಾಣಲಿಲ್ಲ, ಹಾಡಿದವನಿಗೆ ಹಾದಿ ಕಾಣಲಿಲ್ಲ.
ಸಿಡಿಲು ಬಡಿದರೆ ಅಂಗೈಲಿ ಹಿಡಿದ ಕೊಡೆ ಕಾಪಾಡಿತೇ
ಉಪ್ಪು ತಿಂದ ಮ್ಯಾಲೆ ನೀರ ಕುಡಿಯಲೇಬೇಕು
ಬಿಟ್ಟಿ ಬಂದದ್ದಾದರೆ ನನಗೂ ಇರಲಿ,ನಮ್ಮ ತಾತಂಗೂ ಇರಲಿ.
ಬಾಳಿಕೆಗೆಟ್ಟು ಬೆಸಲಾದ ಚೇಳಿನಂತಾದ ಹುಟ್ಟು ಸಾವು ದಿಟವೇ ಆದರೂ ಹೆಜ್ಜೆ ಹೆಜ್ಜೆಗೆ ಅಂಜೂದ್ ತಪ್ಪಲಿಲ್ಲ
ಕಬ್ಬು ಡೊಂಕಾದರೆ ಸಿಹಿ ಡೊಂಕೆ ?
ಕಲ್ಲಿನಲ್ಲಿ ಕಳೆಯ ನಿಲ್ಲಿಸಿದ ಗುರುವಿನ ಸೊಲ್ಲಿನಲ್ಲೇ ದೈವ
ಎದ್ದೋಗೋ ಮಾತು ಬಿದ್ದೋಗಲಿ ಆಡೋಕಾಗಲ್ಲ, ಅನುಭವಿಸಕ್ಕಾಗಲ್ಲ
ಹನುಮಂತನೇ ಹಗ್ಗ ತಿನ್ನುವಾಗ ಪೂಜಾರಿಗೆ ಶ್ಯಾವಿಗೆ ಬೇಕಂತೆ
ತನಗೆ ಬಂದ ಹಾನಿ ದುಡ್ಡಿನಿಂದ ಹೋಯಿತು
ಹಿಟ್ಟು ಹಳಸಿತ್ತು;ನಾಯಿ ಹಸಿದಿತ್ತು
ವೈದ್ಯರ ಹತ್ತಿರ ವಕೀಲರ ಹತ್ತಿರ ಸುಳ್ಳು ಹೇಳಬೇಡ.
ಆರು ದೋಸೆ ಕೊಟ್ರೆ ಅತ್ತೆ ಕಡೇ,ಮೂರು ದೋಸೆ ಕೊಟ್ರೆ ಮಾವನ ಕಡೆ
ಸೂಳೆ ಮುಪ್ಪಾಗಿ ಗೊರವಿತ್ತಿಯಾದಳು
ಅತ್ತೆ ಒಡೆದ ಪಾತ್ರೆಗೆ ಬೆಲೆ ಇಲ್ಲ
ಬಲ್ಲಿದರೊಡನೆ ಸೆಣಸಿ ಮಾತಾಡಿದರೆ ಅಲ್ಲೇ ಬಂತು ಕೇಡು
ಕೂಡಿದ ಗಂಡನನ್ನಾದರೂ ಬಿಟ್ತೇನು ಕಲ್ತದ್ದ ಬಿಡಲಾರೆ
ಸರಿಯಾದ ಎಚ್ಚರಿಕೆ ಇಲ್ಲದೆ ಹರಕೆಯ ಕುರಿಯಾದ
ಅಲಲಾ ಅನ್ನೊ ಅಳ್ಳಿ-ಮರ ನಂಬಬಹುದು, ಮೆತ್ತಗಿರೊ ಕಳ್ಳಿ-ಗಿಡ ನಂಬಲಾಗದು
ನಾಯ್ ಹೆಣಾನ ಹತ್ತಿ ತಿನ್ನುವಂತೆ
ಶಿವಪೂಜೇಲಿ ಕರಡಿ/ಕರಡಿಗೆ ಬಿಟ್ಟ ಹಾಗೆ
ಹೊಟ್ಟೆ ಉರಿದು ಕೊಳ್ಳೋದು ಒಂದೇಯ, ಹೊಟ್ಟೆ ಇರಿದು ಕೊಳ್ಳೋದು ಒಂದೇಯ
ಅಪ್ಪಂತೋನಿಗೆ ಇಪ್ಪತ್ತೊಂದು ಕಾಯಿಲೆ
ಏರಿದವ ಇಳಿದಾನು ಏಳರಲ್ಲಿ ಬರಲೋ? ಎಪ್ಪತ್ತರಲ್ಲಿ ಬರಲೋ?
ತಿಪ್ಪೇ ಮೇಲಣ ಅರಿವೆಯಾದರೂ ಕಾಲಿಗೆ ಕಟ್ಟಿದರೆ ಬಿರುದು
ಕುಲ ಸೋಸಿ ಹೆಣ್ಣು ತಗೊಂಡು ಬಾ ; ಜಲ ಸೋಸಿ ನೀರು ತಗೊಂಡು ಬಾ
ಹೆದರಿದವರ ಮೇಲೆ ಕಪ್ಪೆ ಎಸೆದರು
ಇಂಗು,ತೆಂಗು ಇದ್ದರೆ ಮಂಗವು ಅಡುಗೆ ಮಾಡುತ್ತೆ
ಉತ್ತಮನು ಎತ್ತ ಹೋದರೂ ಶುಭವೇ
ಇರುಳು ಚಿಂತೆ ನಿದ್ದೆಗೇಡು, ಹಗಲು ಚಿಂತೆ ಕೆಲಸಗೇಡು
ಹಲ್ಲುಬಿದ್ದ ಮುದುಕಿ ಎಲ್ಲಿ ಬಿದ್ದರೇನು
ಎರಡು ದಾಸರ ನಂಬಿ ಕುರುಡು ದಾಸ ಕೆಟ್ಟ
ಕಾಸು ಕೊಟ್ಟು ಬ್ರಹ್ಮೇತಿ ತಗೊಂಡರು
ಇಂದಿನ ಸೋಲು ನಾಳಿನ ಗೆಲುವು.
ಸೇರಿಗೆ ಸವ್ವಾ ಸೇರು
ಅರುಗೆಟ್ಟ ನಿದ್ದೆ ಇರಗೆಟ್ಟು ಸತ್ತಂತೆ
ಕ್ರಮ ಕಾಣದ ನಾಯಿ ಕಪಾಳೆ ನೆಕ್ತು
ಮಂತ್ರಿ ಇಲ್ಲದ ರಾಜ್ಯ ಕೀಲು ಮುರಿದ ಯಂತ್ರದಂತೆ
ಕೈಗೆ ಬಂದ ತುತ್ತು ಬಾಯಿಗೆ ಇಲ್ಲ
ಬೆಳ್ಳಗಿರೋದೆಲ್ಲಾ ಹಾಲಲ್ಲ
ಉಗಿದರೆ ತುಪ್ಪ ಕೆಡುತ್ತದೆ, ನುಂಗಿದರೆ ಗಂಟಲು ಕೆಡುತ್ತದೆ
ಹೊರಗೆ ಥಳಕು ಒಳಗೆ ಹುಳಕು.
ಯಂಕ,ಸೀನ,ನೊಣ ಅಂತ ಮನೇಲಿ ಮೂರೇ ಜನ
ಕಟ್ಟಲಿಲ್ಲ ಬಿಚ್ಚಲಿಲ್ಲ ಹಿ೦ಡಿಕೊಳ್ಳೋಕೆ ಹೊತ್ತಾಯ್ತು ಅ೦ದಳು.
ಸಂಸಾರ ಗುಟ್ಟು; ವ್ಯಾಧಿ ರಟ್ಟು
ಉಪ್ಪಿಗಿ೦ತ ರುಚಿಯಿಲ್ಲ ತಾಯಿಗಿ೦ತ ದೇವರಿಲ್ಲ.
ಮನೆಗೆ ಮಾರಿ, ಊರಿಗೆ ಉಪಕಾರಿ.
ಮಾಡೋದು ಅನಾಚಾರ ; ಮನೆ ಮುಂದೆ ಬೃಂದಾವನ
ಎಲ್ಲಾ ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ
ತಾನುಂಟೋ? ಮೂರು ಲೋಕವುಂಟೋ?
ಬಂದ ಹಾಗೆಯೆ ಹೋಯಿತು.
ಕೃತಿ ಇಲ್ಲದ ಮಾತು ಕಸ ಬೆಳೆದ ತೋಟವಿದ್ದಂತೆ.
ಮಂತ್ರಿ‌ಇಲ್ಲದ ರಾಜ್ಯ ಕೀಲು ಮುರಿದ ಯಂತ್ರದಂತೆ
ಪಕ್ಕದ ಮನೇಗೆ ಬಿದ್ದ ಬೆಂಕಿ ಬಿಸಿ ತನ್ನ ಮನೇಗೆ ಬೀಳೋವರೆಗೂ ತಾಕಲ್ಲ
ತಾನು ಮಾಡುವುದು ಉತ್ತಮ, ಮಗ ಮಾಡುವುದು ಮಧ್ಯಮ, ಆಳು ಮಾಡುವುದು ಹಾಳು.
ತಿಗಳಗಿತ್ತಿಯ ಬಾಯಿ ಕೆಣಕಬೇಡ ಬಗಳೊ ನಾಯಿ ಬಡಿಯಬೇಡ
ಆದ್ರೆ ಒಂದು ಅಡಿಕೆ ಮರ, ಹೋದ್ರೆ ಒಂದು ಗೋಟಡಿಕೆ
ಬಾಲ ಸುಟ್ಟ ಬೆಕ್ಕಿನ ಹಾಗೆ
ತಾನು ತಿಂದದ್ದು ಮಣ್ಣು ಹೆರರಿಗೆ ಕೊಟ್ಟದ್ದು ಹೊನ್ನು
ಶುಭ ನುಡಿಯೋ ಸೋಮ ಅಂದರೆ ಗೂಬೆ ಕಾಣ್ತಲ್ಲೋ ಮಾಮ ಅಂದ ಹಾಗೆ
ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದಂತೆ
ನೀಡುವವ ಉತ್ತಮ ಬೇಡಿದರೂ ನೀಡದವ ಅಧಮ
ಬಿರಿಯಾ ಉಂಡ ಬ್ರಾಹ್ಮಣ ಭಿಕ್ಷೆ ಬೇಡಿದ
ಅರ್ಧ ಕಲಿತವನ ಆಬ್ಬರ ಹೆಚ್ಚು.
ಸಮುದ್ರದ ನೆಂಟಸ್ತನ ; ಉಪ್ಪಿಗೆ ಬಡತನ
ಹಾಗಲ ಕಾಯಿಗೆ ಬೇವಿನ ಕಾಯಿ ಸಾಕ್ಷಿ
ಸಿರಿತನ ಇರೂತನ ಹಿರಿತನ ಸಿರಿಹೋದ ಮರುದಿನ ಕಿರಿತನ
ಸೊಸೆಗೆ ಮನೆವಾಸ, ಅತ್ತೆಗೆ ಪರವಾಸ
ಸೀರಿಗೇಡಿಗೆ ಸೀರೆ ಉಡಿಸಿದರೆ ಕೆರಿ ದಂಡಿ ಮ್ಯಾಗ ನಿಂತು ಕೇಕೆ ಹಾಕಿದಳು.
ಅಡವಿಯ ದೊಣ್ಣೆ ಪರದೇಸಿಯ ತಲೆ
ಜರಡಿ ಸೂಜಿಗೆ ಹೇಳಿತಂತೆ: ನಿನ್ನ ಬಾಲದಲ್ಲಿ ತೂತು
ಸುಳ್ಳು ದೇವರಿಗೆ ಕಳ್ಳ ಪೂಜಾರಿ
ಲೆಕ್ಕಕ್ಕಿಂತ ಹೆಚ್ಚು ಹೊರಬಾರದು, ಲೆಕ್ಕಕ್ಕಿಂತ ಹೆಚ್ಚು ದೂರೆಬಾರದು.
ಮಳೇ ನೀರ ಬಿಟ್ಟು ಮಂಜಿನ ನೀರಿಗೆ ಕೈ ಒಡ್ಡಿದಂತೆ
ಶ೦ಖದಿ೦ದ ಬ೦ದರೇನೇ ತೀರ್ಥ.
ಪಿತ್ತ ನೆತ್ತಿಗೇರಿದವಗೆ ಶಂಖ ಕರ್ರಗೆ ಕಂಡರೆ ಅದರ ಬಣ್ಣ ಕೆಟ್ಟೀತೇ?
ಮದುವೇಲಿ ಗಂಡು, ಸ್ಮಶಾನ ಯಾತ್ರೇಲಿ ಹೆಣವಾಗೋ ಬಯಕೆ
ತಾನು ಕಳ್ಳ ,ಪರರ ನಂಬ
ಹಸಿದು ಹಲಸಿನ ಹಣ್ಣು ತಿನ್ನು ಉಂಡು ಮಾವಿನ ಹಣ್ಣು ತಿನ್ನು
ಅರಸನ ಕುದುರೆ ಲಾಯದಲ್ಲೆ ಮುಪ್ಪಾಯಿತು
ಅನುಭವಿಗೆ ಬೇರೆ ಮತವಿಲ್ಲ
ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ ಹೇಳಿದ ಹಾಗೆ.
ಲೇ ಅನ್ನಲು ಅವಳೇ ಇಲ್ಲ ಮಗನ ಹೆಸರು ಮುದ್ದುರ೦ಗ.
ಶರೀರಕ್ಕೆ ಸುಖ, ಹೊಟ್ಟೆಗೆ ದುಃಖ.
ಹಳೆ ಮನೆಗೆ ಹೆಗ್ಗಣ ಸೇರಿಕೊಂಡಂಗೆ
ತರಗು ತಿನ್ನುವವನ ಮನೆಗೆ ಹಪ್ಪಳಕ್ಕೆ ಹೋದರು ತರಗು ಮೊರದಲ್ಲಿ ಹಿಡಿಯದು
ಯೋಗ ಇದ್ದಷ್ಟೇ ಭೋಗ
ಊರು ದೂರಾಯಿತು ಕಾಡು ಹತ್ತರಾಯಿತು
ಕುರು ಮೇಲೆ ಬರೆ ಎಳೆದ ಹಾಗೆ
ಎಡವಿದ ಕಾಲು ಎಡವುದು ಹೆಚ್ಚು
ಕಂಡವರ ಕಂಡು ಕೈಕೊಂಡ ಕೆಲಸ ಕೆಂಡವಾಯ್ತು
ಹುಲಿಯ ಬಣ್ಣವನ್ನು ಮೆಚ್ಚಿ, ನರಿ ತನ್ನ ಕೂದಲನ್ನು ಭಸ್ಮ ಮಾಡಿಕೊಂಡಂತೆ.
ರಂಭೆಯಂಥ ಹೆಣ್ತೀನ ಬಿಟ್ಟು ದೊಂಬಿತಿಯ ಹಿಂದೆ ಹೋದ
ಕಳ್ಳನ ಮನಸ್ಸು ಹುಳ್ಳ ಹುಳ್ಳಗೆಹಣ ಇಲ್ದೋರು ಎದ್ದೂ ಬಿದ್ದಂಗೆ, ಗುಣ ಇಲ್ದೋರು ಇದ್ದೂ ಇಲ್ದಂಗೆ
ಅಕ್ಕನ ಹಗೆ ಬಾವನ ನೆಂಟು
ಅರಿತೂ ಮಾಡಿದ ಪಾಪ ವಜ್ರಲೇಪ
ರೋಗಿ ಬಯಸಿದ್ದು ಹಾಲು ಅನ್ನ ವೈದ್ಯರು ಹೇಳಿದ್ದು ಹಾಲು ಅನ್ನ
ನಮಸ್ಕಾರ ಮಾಡಲು ಹೋಗಿ ದೇವಸ್ಥಾನದ ಗೋಪುರ ತಲೇ ಮೇಲೆ ಬಿತ್ತು
ದಡ್ಡನಿಗೆ ಹಗಲು ಕಳೆಯುವುದಿಲ್ಲ, ಒಳ್ಳೆಯವನಿಗೆ ರಾತ್ರಿ ಸಾಲುವುದಿಲ್ಲ.
ಹಾಡಿದ್ದೇ ಹಾಡೋ ಕಿಸುಬಾಯಿ ದಾಸ.
ರಾವಣಾಸುರನ ಹೊಟ್ಟೆಗೆ ಅರೆ ಕಾಸಿನ ಮಜ್ಜಿಗೆ
ಮಕ್ಕಳಿಸ್ಕೂಲ್ ಮನೇಲಲ್ವೇ?
ನೀ ನೆಗೆದು ಬಿದ್ದು ನಲ್ಲಿಕಾಯಾಗ
ವಿದ್ಯೆ ಇಲ್ಲದವನು ಹದ್ದಿಗಿಂತಲೂ ಕಡೆ
ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ.
ಒಂದು ಕಣ್ಣೀಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ
ಆರು ಯತ್ನ ತನ್ನದು, ಏಳನೇದು ದೇವರಿಚ್ಛೆ
ದುಡಿಮೆಯೇ ದುಡ್ಡಿನ ತಾಯಿ
ಕತ್ತೆಗೇನು ಗೊತ್ತು ಕಸ್ತೂರಿ ವಾಸನೆ
ತುಂಬಿದ ಕೊಡ, ತುಳುಕೋದಿಲ್ಲ
ಸರಿದರೆ ಒತ್ತಣ್ಣ ಒತ್ತಿದರೆ ಸರಿಯಣ್ಣ
ಚಂಡಾಲ ದೇವರಿಗೆ ಹೆಂಡ ಕುಡಿಯೋ ಪೂಜಾರಿ.
ಹಣ ಇಲ್ದೋರು ಎದ್ದೂ ಬಿದ್ದಂಗೆ, ಗುಣ ಇಲ್ದೋರು ಇದ್ದೂ ಇಲ್ದಂಗೆ
ಕುರಿ ಕೊಬ್ಬಿದಷ್ಟು ಕುರುಬನಿಗೇ ಲಾಭ.
ಹೆಣು ಮಕ್ಕಳು ಇದ್ದ ಮನೆ ಕನ್ನಡಿಯಂಗೆ
ಕೆಟ್ಟು ಪಟ್ಟಣ ಸೇರು
ದುಡ್ಡು ಕೊಟ್ಟು ದೆವ್ವ ಹಿಡಿಸಿಕೊಂಡ ಹಾಗೆ
ಸೊಕ್ಕಿದ್ದವನಿಗೆ ಯಾಣ, ರೊಕ್ಕಿದ್ದವನಿಗೆ ಪಟ್ಟಣ.
ಇತರರ ಕಣ್ಣಿನ ಕಸ ಕಾಣುವುದು, ತನ್ನ ಕಣ್ಣಿನ ಕಸ ಕಾಣುವುದಿಲ್ಲ.
ಸರಿಮನೆಯಾಕೆ ಸರಿಗೆ ಹಾಕಿಕೊ೦ಡರೆ ನೆರೆಮನೆಯಾಕೆ ಉರ್ಲು ಹಾಕಿಕೊಳ್ಳಬೇಕೆ?
ತರಗು (ಮರದಿಂದ ಬಿದ್ದ ಒಣ ಎಲೆಗಳು)ಮೊರದಲ್ಲಿ ಹಿಡಿಯದು
ವಿದ್ಯೆ ಇಲ್ಲದವನ ಮೋರೆ ಹಾಳೂರ ಹದ್ದಿನಂತೆ
ಉಪ್ಪು ತಿ೦ದ ಮನೆಗೆ ಎರಡು ಬಗೆಯ ಬೇಡ.
ಕಿಡಿಯಿಂದ ಕಾಡ ಸುಡ ಬಹುದು
ಕೈಲಾಗದೋನು ಮೈ ಪರಚಿಕೊಂಡ
ಐದು ಬೆರಳೂ ಒಂದೇ ಸಮ ಇರೋಲ್ಲ
ತಾ ಕೋಡಗ ಪರರ ಅಣಕಿಸಿತು
ಹೆಣ್ಣಿದ್ದ ಮನೆಗೆ ಎಡತಾಕಿ ಅಣ್ಣಯ್ಯ ಮಣ್ಣಾಗಿ ಹೋದ
ಅಡಿಗೆ ಬಿದ್ಫರೂ ಮೀಸೆ ಮೇಲೆ
ಸಾಲಗಾರನ ಮನೆಗೆ ಸವುದೆ ಹೊತ್ತರೆ ಮೇಲಣ ಬಡ್ಡಿಗೆ ಸಮವಾಯಿತು
ಕನ್ನಡಿ ಒಳಗಿನ ಗ೦ಟು ಕೈಗೆ ದಕ್ಕೀತೆ ?
ತಬ್ಬಲಿ ತಬಕು ಕದ್ದು ಜಗಲೀಲಿ ಸಿಕ್ಕಿಬಿದ್ದ
ಎಳ್ಳ ತಿಂದ ಋಣ ತೋಟದ ಕಬ್ಬಿಗಿಂತ, ಪೋಟೆಯ ಜೇನಿಗಿಂತ, ಬಲ್ಲವಳ ಕೂಟ ಲೇಸು
ತಾಯಿನ್ನ ನೋಡಿ ಮಗಳನ್ನ ತಕ್ಕೋ ಹಾಲನ್ನ ನೋಡಿ ಎಮ್ಮೇನ್ನ ತಕ್ಕೋ
ಹೆಣ್ಣಿಗೆ ಹಟವಿರಬಾರದು, ಗಂಡಿಗೆ ಚಟವಿರಬಾರದು.
ಕತ್ತೆಯ ಹಿಂದೆ ಹೋಳಿಹುಣ್ಣಿಮೆಯಲ್ಲಿ ಮಾತ್ರ ಹೋಗು.
ಕೆಟ್ಟು ಬದುಕಬಹುದು ಬದುಕಿ ಕೆಡಬಾರದು
ತಾಳ್ಮೆ ಇದ್ದ ಪುರುಷರಲ್ಲಿ ಬೀಳು ಬಿದ್ದರೆ ಬಾಳ್ಯಾನು
ಕಟ್ಟಿಕೊಂಡವಳು ಕಡೇ ತನಕ; ಇಟ್ಟುಕೊಂಡವಳು ಇರೋ ತನಕ
ಯಥಾ ರಾಜಾ ತಥಾ ಪ್ರಜಾ
ಆಕಳು ದಾನಕ್ಕೆ ಕೊಟ್ರೆ, ಹಲ್ಲು ಹಿಡಿದು ನೊಡಿದ್ರಂತೆ.
ಹರ್ಷದ ಕೂಳು ನೆಚ್ಚಿಕೊಂಡು ವರ್ಷದ ಕೂಳು ತಪ್ಪಿಸ್ಕೊಂಡ
ತಕ್ಕಡಿ ಸ್ವರೂಪ ತಕ್ಕವನೇ ಬಲ್ಲ
ಬಂದ ಅಥಿತಿಗೆ ಅನ್ನ ಇಕ್ಕದ ಬದುಕು ಯಾತಕ್ಕು ಬೇಡ
ನಾಯಿಯು ನಮ್ಮನ್ನು ಕಚ್ಚಿದರೆ ನಾಯಿಯನ್ನು ಕಚ್ಚಲು ನಮ್ಮಿಂದ ಆಗುವುದೇ?
ಆಕಳಿಲ್ಲದವ ಬೆಳೆಸು ಮಾಡ್ಯಾನ, ಆಕಳಿದ್ದವ ಮಕ್ಕಳ ಸಾಕ್ಯಾನ.
ಕೊಚ್ಚೆ ಮೇಲೆ ಕಲ್ಲು ಹಾಕಿದಂತೆ
ದೇಶ ಸುತ್ತು ; ಕೋಶ ಓದು.
ಕೀರ್ತಿಯೇ ಕೈಲಾಸ ಅಪಕೀರ್ತಿಯೇ ನರಕ
ತಮ್ಮ ಒಳ್ಳೆಯವನೇ ಸರಿ ಒಮ್ಮಾನಕ್ಕಿಗೆ ಮಾರ್ಗವಿಲ್ಲ
ಗ೦ಡ ಹೆ೦ಡಿರ ಜಗಳದಲ್ಲಿ ಕೂಸು ಬಡವಾಯ್ತು.
ಹೊಟ್ಟೆ ತುಂಬಿದ ಮೇಲೆ ಹುಗ್ಗಿ ಮುಳ್ಳು ಮುಳ್ಳು
ತನ್ನ ತಾ ತನ್ನಿಂದಲೇ ಅರಿಯಬೇಕು
ನಾಯಿ ಬೊಗಳಿದರೆ ದೇವಲೋಕ ಹಾಳೇನು
ಗಿಡ ಮೂರು ಮೊಳ, ಕಾಯಿ ಆರು ಮೊಳ.
ಬಿಡಿಯಕ್ಕೆ ಬಸಿರಾದರೆ ಹಡೆಯೋದು ಕಷ್ಟ
ಹಿರಿಯಕ್ಕನ ಚಾಳಿ ಮನೆಮಂದಿಗೆಲ್ಲ
ಪೀತಾಂಬರ ಉಟ್ಟರೂ ಕೊತ್ತಂಬರಿ ಮಾರೋದು ತಪ್ಪಲಿಲ್ಲ.
ಕೂಸು ಹುಟ್ಟೋಕೆ ಮುಂಚೆ ಕುಲಾವಿ ಹೊಲಿದ್ರು
ಯೋಗ್ಯತೆ ಅರಿಯದ ದೊರೆ ರೋಗ ಅರಿಯದ ವೈದ್ಯ ಒಂದೇ
ಚೆಲ್ಲಿದ ಹಾಲಿಗೆ ಅತ್ತು ಪ್ರಯೋಜನವಿಲ್ಲ
ಎತ್ತು ಏರಿಗೆಳೀತು, ಕೋಣ ನೀರಿಗೆಳೀತು.
ಕಂಡ ಕಳ್ಳ ಜೀವ ಸಹಿತ ಬಿಡ
ಕಂಡದ್ದನ್ನು ಕಂಡಹಾಗೆ ಹೇಳಿದರೆ ಕೆಂಡದಂಥಾ ಕೋಪವಂತೆ
ಅತ್ತೆ ಮಾಡಿದ್ದು ಅಡಕಲಗೂಡಿಗೆ ಸೊಸೆ ಮಾಡಿದ್ದು ಬೆಳಕಿಗೆ
ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡಂತೆ.
ಪಾಲಿಗೆ ಬಂದದ್ದೆ ಪರಮಾನ್ನ.
ಕೈ ಕೆಸರಾದರೆ ಬಾಯಿ ಮೊಸರು.
ಅಳೋ … ಮೇಲೆ ಗಳು ಬಿತ್ತು
ಮಾತು ಮನೆ ಕೆಡಿಸಿತು, ತೂತು ಒಲೆ ಕೆಡಿಸಿತು
ದೀಪಕ್ಕೆ ಎಣ್ಣೆಯ ಹುಯ್ಯ್ ಅಂತ ಸುರಿಯುತ್ತಾರೇ
ಪಾಲಿಗೆ ಬಂದದ್ದು ಪಂಚಾಮೃತ
ಗಿಡವಾಗಿ ಬಗ್ಗದ್ದು, ಮರವಾಗಿ ಬಗ್ಗೀತೇ?
ಕೊಂಕಣ ಸುತ್ತಿ ಮೈಲಾರಕ್ಕೆ ಬಂದ ಹಾಗೆ
ಬಡವರ ಮನೆ ಊಟ ಚೆನ್ನ, ಶ್ರೀಮಂತರ ಮನೆ ನೋಟ ಚೆನ್ನ.
ಕಾಡಿಗೆ ಗಣ್ಣ ಚೆಲುವೆ ಮನೆಗೆ ಕೇಡು ತಂದಳು
ಸಜ್ಜನರ ಸಂಗ ಹೆಜ್ಜೇನು ಸವಿದಂತೆ
ಆಸೆಗೆ ಕೊನೆಯಿಲ್ಲ
ಎಡದ ನೆತ್ತಿಗೆ ಬಡಿದರೆ ಬಲದ ನೆತ್ತಿಗೆ ತಾಕಿತು
ಕೀಲು ಸಣ್ಣದಾದರೂ ಗಾಲಿ ನಡೆಸುತ್ತದೆ
ದೂರವಿದ್ದ ಮಗನಿಗೂ, ಹತ್ತಿರವಿದ್ದ ಮಗನಿಗೂ ಸರಿಬಾರದು.
ಭಂಗಿ ದೇವರಿಗೆ ಹೆಂಡಗುಡುಕ ಪೂಜರಿ
ಬಾಯಲ್ಲಿ ಬೆಲ್ಲ ಕರುಳು ಕತ್ತರಿ
ನಿಂತ ನೀರಿನಲ್ಲಿ ಕ್ರಿಮಿ ಹುಟ್ಟುತ್ತವೆ, ಕೆಲಸವಿಲ್ಲದ ಮನುಷ್ಯನಲ್ಲಿ ಕೆಟ್ಟ ವಿಚಾರಗಳು ಜನಿಸುತ್ತವೆ.
ಕಣ್ಣಿಗೆ ಒಪ್ಪವಿಲ್ಲದ ಹೆಣ್ಣು ಸಪ್ಪಗೆ ಕಂಡಳು
ಮುಖ ನೋಡಿ ಮಣೆ ಹಾಕು.
ಉಂಡೂ ಹೋದ; ಕೊಂಡೂ ಹೋದ
ಹಾಲು ಕುಡಿದ ಮಕ್ಕಳೇ ಬದುಕಲಿಲ್ಲ ವಿಷ ಕುಡಿದ ಮಕ್ಕಳು ಬದುಕ್ಯಾರೆ
ಹಾಲು ಮಾರಿದ್ದು ಹಾಲಿಗೆ ನೀರು ಮಾರಿದ್ದು ನೀರಿಗೆ
ತಾಯಿ ಕಲಿಸಿದ ಊಟ ತಂದೆ ಕಲಿಸಿದ ಬುದ್ಧಿ
ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು
ಮನಸ್ಸಿದ್ದರೆ ಮಾರ್ಗ
ತಕ್ಕುದನ್ನು ಅರಿಯದ ಓದು ಲಕ್ಷ ಓದಿದರೇನು
ಹಾಡ್ತಾ ಹಾಡ್ತಾ ರಾಗ , ನರಳ್ತಾ ನರಳ್ತಾ ರೋಗ
ಸಗಣಿಯವನ ಸರಸಕ್ಕಿಂತ, ಗಂಧದವನ ಗುದ್ದಾಟ ಮೇಲು
ಹುಚ್ಚಲ್ಲ, ಬೆಪ್ಪಲ್ಲ, ಶಿವಲೀಲೆ
ತವಡು ತಿಂದರು ಮುರುಕು (ಬೆಡಗು, ಕೊಂಕು) ಘನ
ಕುಣೀಲಾರದ ಸೂಳೆ ನೆಲ ಡೊಂಕು ಅಂದ್ಳಂತೆ
ಸತ್ತೋರ ಮಕ್ಕಳು ಇದ್ದೋರ ಕಾಲ್ದಸೀಲಿ
ಹೊಟ್ಟೆ ತುಂಬಿದೋರಿಗೆ ಹುಡುಗಾಟ, ಹೊಟ್ಟೆಗಿಲ್ಲದೋರಿಗೆ ಮಿಡುಕಾಟ
ಕೊಟ್ಟೋನು ಕೋಡಂಗಿ, ಇಸ್ಕೊಂಡೋನು ಈರಭದ್ರ
ಹಬ್ಬಕ್ಕೆ ಹೋಗಿ ತಬ್ಬಿಬ್ಬನಾದ
ತನಗೇ ಜಾಗವಿಲ್ಲ. ಕೊರಳಲ್ಲಿ ಡೋಲು ಬೇರೆ.
ಹಾಳೂರಿಗೆ ಉಳಿದೋನೇ ಗೌಡ, ಬೆಂಗಳೂರಿಗೆ ಬಂದೋನೇ ಬಹದ್ದೂರ
ಕೋಣನೆರಡುಂ ಹೋರೆ ಗಿಡುವಿಂಗೆ ಮಿತ್ತು (ರಾಘವಾಂಕ)
ತಾ ಕೆಡುತ್ತಾ ಏಳು ನೆರೆ ಕೆಡಿಸಿದ ತಿಗಳಗಿತ್ತಿಯ ಬಾಯಿ ಕೆಣಕಬೇಡ
ಮುಚ್ಚಿ ಹೇಳಿದರೆ ಒಗಟು ಬಿಚ್ಚಿ ಹೇಳಿದರೆ ಒರಟು
ತಿವಿದುಕೊಂಡರೆ ಬಂದೀತೇ ತಿಮ್ಮಪ್ಪನ ದಯೆ
ಬಾಯಿ ಬಿಟ್ಟರೆ ಬಣ್ಣಗೇಡು
ಹಾಲುಕ್ಕಿದ ಮನೇಲಿ ಮೇಲ್‍ಗರೀಲಿ.
ಅಂಗೈ ತೋರಿಸಿ ಅವಲಕ್ಷಣ ಅಂತ ಅನ್ನಿಸಿಕೊಂಡರಂತೆ
ಬಾಳಿ ಬದುಕುವರಿಗೆ ಹಾಳೂರ ಸುದ್ದಿ ಯಾಕೆ
ಹತ್ತಿರಕ್ಕೆ ಬಂದರೆ ಹಡಿಕ್ ನಾತ : ದೂರದಲ್ಲಿದ್ದರೆ ಘಮಘಮ
ಮೂಗಿಗಿ೦ತ ಮೂಗುತ್ತಿ ಭಾರ.
ಮಾಡಿದುಣ್ಣೊ ಮಾರಾಯ
ಕೂತುಕೊಂಡು ಹೇಳುವವನ ಕೆಲಸ ಊರು ಮಾಡಿದರೂ ಸಾಲದು
ಅರಗಿನಂತೆ ತಾಯಿ, ಮರದಂತೆ ಮಕ್ಕಳು
ನಮಾಜು ಮಾಡಲು ಹೋಗಿ ಮಸೀದಿ ಕೆಡವಿಕೊಂಡ ಹಾಗೆ
ಬಣ ಬಣ ಬೆಳಕು ಹರಿದಾಗ ಕತ್ತಲು ಎತ್ತಲೊ
ಹಲವು ದೇವರ ಮಾಡಿ ಹಾರುವಯ್ಯ ಕೆಟ್ಟ
ಬೊಗಳುವ ನಾಯಿ ಕಚ್ಚುವುದಿಲ್ಲ
ಸೊಲ್ಲಿನ ಬೇದ ತಿಳಿದ ಕಿರಿಯ ಎಲ್ಲರಿಗೂ ಹಿರಿಯ
ಹಾಲಿನಲ್ಲಿ ಹುಳಿ ಹಿ೦ಡಿದ೦ತೆ.
ಪುಷ್ಪ ಡೊಂಕಾದರೇನು, ಪರಿಮಳ ಡೊಂಕೇ?
ಮನೇಲಿ ಇಲಿ, ಬೀದೀಲಿ ಹುಲಿ
ಹಸನಾದ ಮಾತಿಗೆ ಜೀವ ಬೆಸನಾಯ್ತು
ಎಲ್ಲರ ಹಲ್ಲೊಳಗೆ ನುರಿದು ಹೋಗೋದಕ್ಕಿಂತ ಒಣಗಿದ ಹುಲ್ಲೊಳಗೆ ಉರಿದು ಹೋಗೋದು ವಾಸಿ
ತಲೇ ಸಿಡಿತಕ್ಕೆ ಮಲಶೋಧನೇ ಕೊಂಡ ಹಾಗೆ
ಬೆಂದ ಮನೆಗೆ ಹಿರಿದದ್ದೇ ಲಾಭ
ತಿಕ ಮಕ ಒಂಡೇ ತಿಪ್ಪಾಭಟ್ಟರಿಗೆ
ಹೊಳೆ ದಾಟಿದ ಮೇಲೆ ಅಂಬಿಗನ ಹಂಗೇಕೆ ಎಂದರಂತೆ
ನಿನ್ನದಲ್ಲ ಸರ್ವ ಆಸ್ತಿ, ಒಳ್ಳೆಯದಲ್ಲ ಗರ್ವ ಜಾಸ್ತಿ.
ಹುಣಿಸೆ ಮರ ಮುದಿಯಾದ್ರೂ ಕಾಯಿ ಹುಳಿ ಹೋಗಲ್ಲ
ಒಳ್ಳೊಳ್ಳೆಯವರು ಉಳ್ಳಾಡುವಾಗ ಗುಳ್ಳವ್ವ ಪಲ್ಲಕ್ಕಿ ಬೇಡಿದಳಂತೆ
ಅನ್ನ ಇಕ್ಕಿ ಸಾಕು ಅನ್ನಿಸ ಬಹುದು, ದುಡ್ಡು ಕೊಟ್ಟು ಸಾಕು ಅನ್ನಿಸೋಕಾಗಲ್ಲ
ರೋಗಿ ಬಯಸಿದ್ದು ಹಾಲು-ಅನ್ನ, ವೈದ್ಯ ಕೊಟ್ಟಿದ್ದು ಹಾಲು-ಅನ್ನ.
ಹಗ್ಗ ತಿನ್ನೋ ಹನುಮಂತ ರಾಯನಿಗೆ ಜ್ವಾಳದ ಶಾವಿಗೆ ಎಷ್ಟು ಕೊಟ್ಟೀಯ
ಹೂಸಿದವರು ‌ಯಾರು ಅಂದರೆ ಮಾಸಿದ ಸೀರೆಯವರು
ಹಿತ್ತಲ ಗಿಡ ಮದ್ದಲ್ಲ
ಅಕ್ಕಿ ಸರಿಯಾಗ ಬಾರದು ಅಕ್ಕನ ಮಕ್ಕಳು ಬಡವಾಗ ಬಾರದು
ಅಳಿಯ ಮನೆ ತೊಳಿಯ
ಊರಿಗೆ ದೊರೆ ಆದರೂ ತಾಯಿಗೆ ಮಗನೆ.
ಸಮಯಕ್ಕಾದ ಹುಲ್ಲು ಕಡ್ಡಿ ಸಹಸ್ರ ಹೊನ್ನು
ಹನುಮಂತರಾಯ ಹಗ್ಗ ತಿನ್ನುವಾಗ ಪೂಜಾರಿ ಶಾವಿಗೆ ಬೇಡಿದನಂತೆ
ನಾಯಿ ಮೊಲೇಲಿ ಖಂಡುಗ ಹಾಲಿದ್ದರೇನು, ದೇವರಿಗಿಲ್ಲ ದಿಂಡರಿಗಿಲ್ಲ
ಆಡುವವ ಆಡಿದ್ರೆ ನೋಡುವವಗೆ ಸಿಗ್ಗು
ದಾನಿಗೆ ದೀನತನ ಸಲ್ಲ, ಗ್ನಾನಿಗೆ ಮೌನ ಸಲ್ಲ
ಹಾಸಿಗೆ ಇದ್ದಷ್ತು ಕಾಲು ಚಾಚು.
ಸಾಯ್ತಿನಿ ಸಾಯ್ತಿನಿ ಅಂತ ಸಾವಿರ ಕೋಳಿ ತಿಂದನಂತೆ
ಆಸೆಯಿ೦ದ ಅಳಿಯ ಬ೦ದ್ರೆ ಮಗಳು ಹೊರಗಾಗಿರೋದೇ?
ಉರವಣಿಸಿ ಬರೋ ದುಃಖಕ್ಕೆ ಪರಿಣಾಮ ವೈರಿ
ಅಪ್ಪನ ಬಟ್ಟೆಯಾದರು ಚಿಪ್ಪಿಗ ಬಿಡ
ಬಾಯ್ ತೆವಲು ತೀರಿಸಿಕೊಳ್ಳೋಕೆ ಎಲೆ ಅಡಿಕೆ ಬೇಕು, ಮೈ ತೆವಲು ತೀರಿಸಿಕೊಳ್ಳೋಕೆ ಒಡಂಬಡಿಕೆ ಬೇಕು
ಕೊಂಡಾಡುತ್ತ ಜಗದ ಇಚ್ಚೆಯನ್ನೆ ನುಡಿದರೆ ಜಗವೆಲ್ಲ ತನ್ನ ಮುದ್ದಾಡುತಿತ್ತು
ಗುಬ್ಬಿ ಮೇಲೆ ಬ್ರಹ್ಮಾಸ್ತ್ರ.
ಸಾವಿರ ಚಿತ್ತಾರ ಮಸಿ ನುಂಗಿತು
ಓತಿಕ್ಯಾತಕ್ಕೆ ಬೇಲಿ ಗೂಟ ಸಾಕ್ಷಿ
ಚಿಂತೆ ಮಾಡಿದರೆ ಸಂತೆ ಸಾಗೀತೆ?
ಹೊರಗೆ ಬೆಳಕು ಒಳಗೆ ಕೊಳಕು
ಬಲ್ಲವರಿಗೆ ಅದೇ ಸಮ್ಮತ
ಬಸುರಲ್ಲಿ ಬಂದ ಕೂಸು ಮುದ್ದು
ತಾಯಿದ್ದರೆ ತವರು ಮನೆ ನೀರಿದ್ದರೆ ಕೆರೆ ಬಾವಿ
ಅರಮನೆಯ ಮುಂದಿರಬೇಡ, ಕುದರೆಯ ಹಿಂದಿರಬೇಡ
ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ ?
ಅಡ್ಡಗೋಡೆ ಮೇಲೆ ದೀಪ ಇಟ್ಟ ಹಾಗೆ.
ಗೋರ್ಕಲ್ಲ ಮೇಲೆ ನೀರು ಸುರಿದ೦ತೆ.
ತಿಮರು ತುರಿಸಿದರೆ ಅರಸಿನ ಹಾಗೆ
ಗೋವಿಂದ ಭಟ್ಟ ಬಾವೀಲಿ ಬಿದ್ದ ಇದ್ದವರು ಇದ್ದ ಹಾಗೆ
ಕತ್ತೆಯಂಥ ಅತ್ತೆ ಬೇಕು ಮುತ್ತಿನಂಥ ಗಂಡ ಬೇಕು
ಹೀನ ಸುಳಿ ಬೋಳಿಸಿದರೂ ಹೋಗೋದಿಲ್ಲ
ಹಗೆ ಮಾತು ಆತುಕೊಂಡ, ತುಟಿ ಬಿಚ್ಚದೆ ಕೂತುಕೊಂಡ
ಕೊಡುವವನ ಕೈ ಯಾವಾಲು ಮೇಲೆ
ಇತ್ತಿತ್ತ ಬಾ ಅಂದರೆ ಇದ್ದ ಮನೆ ಕಿತ್ತುಕೊಂಡರು.
ದುಡ್ಡೇ ದೊಡ್ಡಪ್ಪ.
ಚಿಂತೆ ಇಲ್ಲದವನಿಗೆ ಸಂತೆಯಲ್ಲೂ ನಿದ್ದೆ ಬಂತು
ನಿಷ್ಠೆ ಇಲ್ಲದವನಿಗೆ ದೈವ ಬಟ್ಟ ಬಯಲು
ನವಿಲಾಡಿತು ಅಂತ ಕೆಂಬೂತ ಪುಕ್ಕ ತೆರೆಯಿತು
ಕುರಿ ಕಾಯೋದಕ್ಕೆ ತೋಳನನ್ನು ಕಳಿಸಿದರಂತೆ
ಆಗೋ ಪೂಜೆ ಆಗುತ್ತಿರಲಿ ಊದೋ ಶಂಖ ಊದಿ ಬಿಡುವ
ಹಾಕೋದು ಬಿತ್ತೋದು ನನ್ನಿಚ್ಛೆ; ಆಗೋದು ಹೋಗೋದು ದೇವರಿಚ್ಛೆ
ಪರರ ಹಂಗಿಸಿ ಮಂಗ ಅನಿಸಿಕೊಂಡ
ಊಟಕ್ಕೇಳೋ ಗು೦ಡ ಅ೦ದ್ರೆ ಯಾವಕ್ಕಿ ಬೇಯಿಸಿದ್ದೀ ಅ೦ದ.
ಇಬ್ಬರ ಜಗಳ ಮೂರನೆಯವನಿಗೆ ಲಾಭ
ಕುರುಡರ ರಾಜ್ಯದಲ್ಲಿ ಒಕ್ಕಣ್ಣನೇ ರಾಜ
ಕಂಗಾಲನ ಮನೀಗೆ ಕಂಗಾಲ ಹೋದರೆ ಗಂಗಾಳ ನೆಕ್ಕು ಅಂದಂತೆ
ಹೊರೆ ಹೊತ್ತುಕೊಂಡು ಗ್ರಹಗತಿ ಕೇಳ್ದಂದೆ
ಕೈ ತೋರಿಸಿ ಅವಲಕ್ಷಣ ಅನ್ನಿಸಿಕೊಂಡರಂತೆ
ಹಾಲಿನಲ್ಲಿ ಹುಳಿ ಹಿಂಡಿದಂತೆ
ಆಸೆ ಹೆಚ್ಚಿತು ಆಯಸ್ಸು ಕಮ್ಮಿ ಆಯಿತು
ಸಂತೇಲಿ ಮಂತ್ರ ಹೇಳಿದಂಗೆ
ಹೇಳೊದು ವೇದ ಹಾಕೊದು ಗಾಳ
ಹೊಲಬನರಿಯದ (ರೀತಿಯಲ್ಲದ) ಮಾತು ತಲೆ ಬೇನೆ: ಹೊಲಬನರಿತು ನುಡಿದ ಮಾತು ಫಲ ಪಕ್ವವಾದಂತೆ
ವಿಧಿ ಮುನಿದರೆ ಸರಿ ಬೆಸವಾಯ್ತು
ಹೊಳೆ ನೀರಿಗೆ ದೊಣೆನಾಯ್ಕನ ಅಪ್ಪಣೆ ಏಕೆ ?
ಕಬ್ಬಿಣ ಕಾದಿರುವಾಗಲೇ ಬಡಿಯಬೇಕು
ಹುಣಸೆ ಮರ ಮುಪ್ಪಾದರೂ ಹುಳಿ ಮುಪ್ಪಲ್ಲ
ಹಣ್ಣು ತಿಂದೋನು ನುಣುಚಿ ಕೊಂಡ ಸಿಪ್ಪೆ ತಿಂದೋನು ಸಿಗ್ಹಾಕೊಂಡ
ಎಣ್ಣೆ ಬರುವಾಗ ಗಾಣ ಮುರೀತು.
ಅರೆಗೊಡದ ಅಬ್ಬರವೇ ಬಹಳ.
ಯಾರೂ ಇಲ್ಲದ ಮನೆಗೆ ನಾನು ಜೋಗಪ್ಪ ಅಂದ
ಸವತಿ ಸಣ್ಣವಳಲ್ಲ ದಾಯಾದಿ ಚಿಕ್ಕವನಲ್ಲ
ಉಪ್ಪಿಕ್ಕಿದವರನ್ನು ಮುಪ್ಪಿನ ತನಕ ನೆನೆ
ಯಾದವೇಂದ್ರ ದನ ಕಾದ, ರಾಘವೇಂದ್ರ ರಾಜ್ಯವಾಳಿದ.
ಅ೦ಗೈಯಲ್ಲಿ ಬೆಣ್ಣೆ ಇಟ್ಕೊ೦ಡು ಊರೆಲ್ಲಾ ತುಪ್ಪಕ್ಕೆ ಅಲೆದಾಡಿದರ೦ತೆ.
ಊರಿಗೆ ಬಂದವಳು ನೀರಿಗೆ ಬರದೆ ಇರುತ್ತಾಳೆಯೆ?
ಆದರೆ ಹಬ್ಬ, ಇಲ್ಲದಿದ್ದರೆ ಬರಗಾಲ.
ಮುತ್ತು ಹೆಚ್ಚಾಯ್ತು ಅಂತ ಎಲ್ಲೆಲ್ಲಿಗೋ ತೊಟ್ರಂತೆ.
ನರಿ ಕೂಗು ಗಿರಿ ಮುಟ್ಟುತ್ತದೆಯೆ ?
ನೆತ್ತಿಯಲ್ಲಿ ಅಮೃತ ಹೊತ್ತು ಸಾವಿಗಂಜಿ ಜಗವೆಲ್ಲ ಸುತ್ತಾಡಿದ
ಹಂಪ್ಯಾಗ ಇರೂದಕ್ಕಿಂತ ತನ್ನ ಕೊಂಪ್ಯಾಗ ಇರೂದ್ ಲೇಸು
ಎಲೆ ಎತ್ತೋ ಜಾಣ ಅಂದರೆ ಉಂಡೋರೆಷ್ಟು ಮಂದಿ ಅಂದನಂತೆ
ಗಣೇಶನನ್ನು ಮಾಡಲು ಹೋಗಿ ಅವರ ಅಪ್ಪನನ್ನು ಮಾಡಿದಂತೆ
ಹಲ್ಲಿ ಶಕುನ ಕೇಳಿ ಕಲ್ಲಿಂದ ಹೊಡೆಸಿಕೊಂಡಂತೆ.
ಅಂದು ಬಾ ಅಂದ್ರೆ ಮಿಂದು ಬಂದ
ತಿರುಕನಿಗೆ ಮುರುಕು (ಬೆಡಗು ಕೊಂಕು) ಇದ್ದಾಗ್ಯೂ ತಿರಿದುಂಬುವುದು ತಪ್ಪದು
ಆಸೆಯೇ ದು:ಖಕ್ಕೆ ಮೂಲ
ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡರು
ತಾನು ತಿಂಬೋದು ಪಲ್ಲೆ ಸೊಪ್ಪು ಹಿರೇ ಕುದರೆ ಚೇಷ್ಟೆ
ಸ್ವಧರ್ಮ ತಪ್ಪುದ್ರೂ ಅಧರ್ಮ ಮಾಡಬಾರ್ದು
ಹತ್ತು ಮಕ್ಕಳ ತಾಯಾದರೂ ಸತ್ತ ಮಗನ್ನ ಮರೆಯೊದಿಲ್ಲ
ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ?
ಪಾದಕ್ಕೆ ತಕ್ಕಂತೆ ಚಪ್ಪಲಿ ತಗೊ, ಬಾಗಿಲಿನೆತ್ತರಕ್ಕೆ ತಕ್ಕಂತೆ ಬಗ್ಗಿ ನಡಿ.
ತಾ ಅನ್ನೋದು ನಮ್ಮ ತಲತಲಾಂತರಕ್ಕೂ ಇರಲಿ, ಕೊ ಅನ್ನೋದು ನಮ್ಮ ಕುಲಕೋಟಿಗೂ ಬೇಡ
ಅಲ್ಪನಿಗೆ ಐಶ್ವರ್ಯ ಬಂದರೆ ಅರ್ದರಾತ್ರಿಲೀ ಕೊಡೆ ಹಿಡಿದ ಹಾಗೆ
ಬೀಜ ಸಣ್ಣದಾದರೆ ಮರ ಸಣ್ಣದೋ
ಹಿರಿದು ಪಾಪ ಮಾಡಿ ಗಂಗೆಗೆ ಹರಿದರು
ಅರಮನೆಯ ಮುಂದಿರಬೇಡ ಕುದುರೆಯ ಹಿಂದಿರಬೇಡ
ಹಿಂದಲ ಮಾತು ಮರಿ ಮುಂದಲ ಬಾಳು ಅರಿ
ಕೊಡೋದು ಕೊಳ್ಳೋದು ಗಂಡಂದು, ಮಜ ಮಾಡೋದು ಹೆಂಡ್ರುದ್ದು
ಒಲ್ಲದ ಗಂಡಗೆ ಬೆಣ್ಣೇಲಿ ಕಲ್ಲು
ಕೊಟ್ಟವನು ಕೋಡಂಗಿ; ಇಸ್ಕೊಂಡೋನು ಈರಭದ್ರ
ಹೆಣ್ಣು ಚಂದ ಕಣ್ಣು ಕುಲ್ಡು ಅಂದಂಗೆ
ತಿಳಿದು ಒಡ್ಡೋ ತೀರು ಬಾಣವ
ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ.
ದುಡಿಮೆಯೇ ದುಡ್ಡಿನ ತಾಯಿ.
ಹೋದಾ ಪುಟ್ಟಾ, ಬಂದಾ ಪುಟ್ಟಾ, ಪುಟ್ಟನ ಕಾಲಿಗೆ ನೀರಿಲ್ಲ
ತಗ್ಗು ಗದ್ದೆಗೆ ಮೂರು ಬೆಳೆ ಎತ್ತರದ ಗದ್ದೆಗೆ ಒಂದೇ ಬೆಳೆ
ಉತ್ತರನ ಪೌರುಷ ಒಲೆ ಮುಂದೆ;ನಿನ್ನ ಪೌರುಷ ನನ್ನ ಮುಂದೆ
ಕಳ್ಳನ ಹೆಂಡತಿ ಎಂದಿದ್ದರೂ ಮುಂ..
ಕೊಟ್ಟಿದ್ದು ತನಗೆ; ಬಚ್ಚಿಟ್ಟದ್ದು ಪರರಿಗೆ
ಜಾಣನಿಗೆ ಮಾತಿನ ಪೆಟ್ಟು, ದಡ್ಡನಿಗೆ ದೊಣ್ಣೆ ಪೆಟ್ಟು.
ಮಾರಿ ಕಣ್ಣು ಹೋರಿ ಮ್ಯಾಲೆ, ಕಟುಕನ ಕಣ್ಣು ಕುರಿ ಮ್ಯಾಲೆ
ಜನಕ್ಕಂಜದಿದ್ದರೂ ಮನಕ್ಕಂಜಬೇಕು
ನಗೋ ಗಂಡಸನ್ನೂ ಅಳೋ ಹೆಂಗಸನ್ನೂ ನಂಬಬೇಡ
ಮನಸ್ಸಿಲ್ಲದವಳ ಒಡನಾಟ ಮಾತುಮಾತಿಗು ಬೇಸರ
ಯುಕ್ತಿಯ ಮಾತು ಮಕ್ಕಳಿಂದಾದರೂ ತಿಳುಕೊ
ನಡೆವರು ಎಡವದೇ ಕುಳಿತವರು ಎಡವುವರೇ
ಲಲನೆಯರ ಒಲುಮೆ ತೊಲಗಿದರೆ ಇಲ್ಲ
ಹುಟ್ಟಿದಾಗ ಬಂದದ್ದು ಹೂತಾಗ ಹೋದೀತೇನು
ಹುಟ್ಟಿದವಗೆ ಸಾವು ತಪ್ಪದು
ಅರಿವಿನ ಹಾದಿ ಬೇರೆ
ಚೌಲದಾಗ ದೌಲು ಮಾಡು
ದಾಕ್ಷಿಣ್ಯವ೦ತ ದೇಶಕ್ಕೆ ಹೋದರೆ ದಕ್ಷಿಣೆ ಸಿಕ್ಕೀತೇ!
ಅಜ್ಜಿಗೆ ಅಕ್ಕಿ ಚಿ೦ತೆಯಾದರೆ ಮೊಮ್ಮಗಳಿಗೆ ಮೂಗುತಿ ಚಿ೦ತೆ
ಗಿಣಿ ಸಾಕಿ ಗಿಡುಗದ ಕೈಗೆ ಕೊಟ್ಟರು
ಗುರುವಿಲ್ಲದೇ ಮಠವಿಲ್ಲ, ಹಿರಿಯರಿಲ್ಲದೆ ಮನೆಯಿಲ್ಲ.
ಆಡಿ ತಪ್ಪ ಬೇಡ ಓಡಿ ಸಿಕ್ಕ ಬೇಡ
ಗಂಡ ಹೆಂಡಿರ ಜಗಳದಲ್ಲಿ ಮಕ್ಕಳು ಜಗಳ ಕಲಿತವು
ಹುಳ್ಳಿಕಾಳೂ ತಿನ್ನೊ ಮುಕ್ಕ ಒಬ್ಬಟ್ಟಿನ ಹೂರ‍್ಣ ಕೇಳಿದಂಗೆ
ಹಬ್ಬ ಹಸನಾಗಲಿ, ಗೋದಿ ಜತನಾಗಲಿ, ಬಂದ ಬೀಗರು ಉಂಡು ಹೋಗಲಿ
ತಾ ನೊಂದಂತೆ ಬೇರೇರ ನೋವನ್ನೂ ಅರಿಯಬೇಕು
ತಿಗುಳಗೆ ತುತ್ತಿಗೆ ತತ್ವಾರವಾದರೂ ನೆತ್ತಿತುಂಬಾ ನಾಮಕ್ಕೆ ಕಡಿಮೆ ಇಲ್ಲ
ಮೊಸರ ಕಡೆದರೆ ಬೆಣ್ಣೆ ಒಸೆದು ಬಂತು
ಮಾಡಿ ಉಣ್ಣು ಬೇಡಿದಷ್ಟು, ತಗಾದೆ ಮಾಡದೇ ಉಣ್ಣು ನೀಡಿದಷ್ಟು.
ಅ೦ತು ಇ೦ತು ಕು೦ತಿ ಮಕ್ಕಳಿಗೆ ಎ೦ತೂ ರಾಜ್ಯವಿಲ್ಲ.
ಗೆದ್ದೆತ್ತಿನ ಬಾಲ ಹಿಡಿದ ಹಾಗೆ.
ಇಲಿ ಹೆಚ್ಚಿದವೆಂದು, ಮನೆಗೆ ಉರಿ ಇಡ ಬಾರದು
ಮದುವೆ ಮಡಿನೋಡು ಮನೆ ಕಟ್ಟಿ ನೋಡು
ಸದಾಶಿವನಿಗೆ ಅದೇ ಧ್ಯಾನ
ಹೊಸದರಲ್ಲಿ ಅಗಸ ಗೋಣಿಯನ್ನು ಎತ್ತಿ ಎತ್ತಿ ಒಗೆದನಂತೆ
ಮಾತಿಗೆ ಮಾತುಗಳ ಓತು ಸಾಸಿರ ಉಂಟು
ಪಾಪಿ ಸಮುದ್ರ ಹೊಕ್ಕರು ಮೊಣಕಾಲುದ್ದ ನೀರು
ತುಂಬಿದ ಕೊಡ ತುಳುಕುವುದಿಲ್ಲ.
ಉಟ್ಟು ಉಡಲಾರ ಕೊಟ್ಟು ಸೈರಿಸಲಾರ
ಆಡೋಕಾಗಲ್ಲ,ಅನುಭವಿಸಕ್ಕಾಗಲ್ಲ
ತಿನ್ನಲು, ಉಣ್ಣಲು ಇದ್ದರೆ ಯಾವತ್ತೂ ನೆಂಟರು.
ತುತ್ತು ತೂಕ ಕೆಡಿಸಿತು, ಕುತ್ತು ಜೀವ ಕೆಡಿಸಿತು
ಎತ್ತು ಈಯಿತು ಅ೦ದರೆ ಕೊಟ್ಟಿಗೆಗೆ ಕಟ್ಟು ಎ೦ದರ೦ತೆ.
ಕಜ್ಜಿ ಹೋದರೂ ಕಡಿತ ಹೋಗಲಿಲ್ಲ
ಕುರುಡು ಕಣ್ಣಿಗಿಂತ ಮೆಳ್ಳೆ ಗಣ್ಣು ವಾಸಿ
ಹಣ ಇದ್ದೋರಿಗೆ ಏನೆಲ್ಲ, ಗುಣ ಇದ್ದೋರಿಗೆ ಏನಿಲ್ಲ
ಹೋದೆಯಾ ಪಿಶಾಚಿ ಅಂದ್ರೆ ಬಂದೆಯಾ ಗವಾಕ್ಷೀಲಿ
ಕೂಸು ಹುಟ್ಟೋಕೆ ಮುಂಚೆ ಕುಲಾವಿ ಹೊಲಿಸಿದರು
ತಾಳು ಬಡಿದರೆ ಕಾಳು ಸಿಕ್ಕೀತೇ
ತಾನೊಂದೆಣಿಸಿದರೆ ದೈವವೊಂದೆಣಿಸಿತು
ಮಂಗನ ಕೈಗೆ ಮಾಣಿಕ್ಯ ಕೊಟ್ಟ ಹಾಗೆ
ಅಕ್ಕಿಲ್ಲ ಬ್ಯಾಳಿಲ್ಲ ಅಕ್ಕನ್ನ ಕರತರಬೇಕು
ಉತ್ತಮ ಹೊಲ ಮಧ್ಯಮ ವ್ಯಾಪಾರ ಕನಿಷ್ಠ ಚಾಕರಿ
ತಾನಾಗಿ ಬೀಳುವ ಮರಕ್ಕೆ ಕೊಡಲಿ ಇಕ್ಕಿದ ಹಾಗೆ
ಕಾರ್ಯವಾಸಿ ಕತ್ತೆ ಕಾಲು ಕಟ್ಟು
ಅರಸು ಆದೀಕ ತಿಂದ, ಪರದಾನಿ ಹೂಸು ಕುಡಿದ
ಜಾರುವುದು ತಪ್ಪಿದರೆ ಏರುವುದು ಸಾಧ್ಯ.
ಹೆಂಡ್ರನ್ನ ಸಸಾರ (=ತಾತ್ಸಾರ) ಮಾಡಿದ್ರೆ ಸಂಸಾರ ನಿಸ್ಸಾರವಾಗ್ತದೆ
ಸಾಲಗಾರ ಸುಮ್ಮನಿದ್ದರೂ ಸಾಕ್ಷಿದಾರ ಸುಮ್ಮನಿರ
ಬರ ಬಂದಾಗ ಮಗ ಉಣ್ಣೊದು ಕಲಿತ.
ಹೋದ ಪುತ್ತ ಬಂದ ಪುತ್ತ ಪುಟ್ಟನ ಕಾಲಿಗೆ ನೀರಿಲ್ಲ
ಅಂಗೈ ಹುಣ್ಣಿಗೆ ಕನ್ನಡಿ ಯಾಕೆ
ಗುರಿಯಿಟ್ಟು ಗುಂಡು ಹಾಕು, ಸಮಯ ಸಾಧಿಸಿ ಬೇಟೆಯಾಡು.
ತವಕ ಪಟ್ಟವ ತಬ್ಬರಿಸಿ ಬಿದ್ದ
ಪಾಪ ಅಂದ್ರೆ ಕರ್ಮ ಬರ್ತದೆ
ಮಾಳಿಗೆ ಮನೆ ಬೇಕು ಜೋಳಿಗೆ ಹಣ ಬೇಕು ಮಾದೇವನಂಥಾ ಮಗ ಬೇಕು ಗೌರಿಯಂಥಾ ಸೊಸೆ ಬೇಕು
ಎರವಿನವರು ಎರವು ಕಸಗೊಂಡರೆ ಕೆರವಿನಂತಾಯಿತು ಮೋರೆ
ಎಣ್ಣೆ ಬ೦ದಾಗ ಕಣ್ಣು ಮುಚ್ಚಿಕೊ೦ಡ ಹಾಗೆ
ಸ್ನೇಹ ಎಂಬ ಸಂಪಿಗೆ ಸುಮಧುರವಾದದ್ದು.
ಹಣ ಇಲ್ಲದವ ಹೆಣಕ್ಕಿಂತ ಕಡೆ
ಗಂಟೂ ಹೋಯ್ತು;ನಂಟೂ ಹೋಯ್ತು
ಈಸಿ ನೋಡು , ಇದ್ದು ಜೈಸಿ ನೋಡು
ಆಟ ಕೆಟ್ಟರೆ ದೀವಟಿಗೆಯವನ ಸುತ್ತ
ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ.
ಸಾಲ ಕೊಳ್ಳುವಾಗ ಒಂದುರಾಗ, ಸಾಲ ಹೊಳ್ಳಿ ಕೊಡುವಾಗ ನಾನಾರಾಗ
ನಚ್ಚುವುದು ಬೇರೆ ಹೆಣ್ಣು ಒಬ್ಬನ ಮೆಚ್ಚುವುದು ಬೇರೆ
ಹೊರಗೆ ಝಗ ಝಗ, ಒಳಗೆ ಭಗ ಭಗ.
ರಾಜ ಇರೋತನಕ ರಾಣಿ ಭೋಗ
ಉಂಡ ಮನೆ ಜಂತೆ ಎಣಿಸಬಾರದು
ಗಿಣಿ ಸಾಕಿ ಗಿಡುಗನ ಕೈಗೆ ಕೊಟ್ಟರ೦ತೆ.
ಮಾತಿಗೆ ಸಿಕ್ಕಿದರೆ ಮಳೆಗೆ ಸಿಕ್ಕಂತೆ.
ಹಾಲಿದ್ದಾಗ ಹಬ್ಬ ಮಾಡು ಹಲ್ಲಿದ್ದಾಗ ಕಡಲೆ ತಿನ್ನು
ಹದ ಬಂದಾಗ ಅರಗಬೇಕು ಬೆದೆ ಬಂದಾಗ ಬಿತ್ತಬೇಕು
ಉಚ್ಚೇಲಿ ಮೀನು ಹಿಡಿಯೋ ಜಾತಿ.
ಅರೆಪಾವಿನವರ ಅಬ್ಬರ ಬಹಳ
ಸಾಲ ಅಂದ್ರೆ ಶೂಲ, ಕಾಲ ಅಂದ್ರೆ ಯಮ
ಮರದಂತೆ ಮಕ್ಕಳು
ಮಾತು ಆಡಿದರೆ ಹೋಯಿತು; ಮುತ್ತು ಒಡೆದರೆ ಹೋಯಿತು
ಊರು ಅಂದ ಮೇಲೆ ಹೊಲಗೇರಿ ಇಲ್ಲದೆ ಇರುತ್ತದೆಯೇ?
ಊಟ ಬಲ್ಲವನಿಗೆ ರೋಗವಿಲ್ಲ, ಮಾತು ಬಲ್ಲವನಿಗೆ ಜಗಳವಿಲ್ಲ
ಸರಿಸುಮಾರಾಗಿ ಸಮಾನಾರ್ಥಕ ಗಾದೆಗಳು
ವೇದ ಸುಳ್ಳಾದರು ಗಾದೆ ಸುಳ್ಳಾಗದು.
ತಾನು ಗರತಿ ಆದರೆ ಸೂಳೆಗೇರೀಲಿ ಮನೆ ಕಟ್ಟು
ತಾಳ ತಪ್ಪಿದ ಬಾಳು, ತಾಳಲಾರದ ಗೋಳು
ಮಿಂದು ಮೈಲಿಗೆ ಉಡೊದಾದ್ರೆ ಜಳಕದ ದಂದುಗವೇಕೆ
ನಯಶಾಲಿ ಆದವನು ಜಯಶಾಲಿ ಆದಾನು
ಕುಂಬಾರಂಗೆ ವರುಷ; ದೊಣ್ಣೆಗೆ ನಿಮಿಷ
ಇಕ್ಕೇರಿ ತನಕ ಬಳಗ, ಮಾನ ಮುಚ್ಚಲಿಕ್ಕೆ ಅರಿವೆ ಇಲ್ಲ
ಸೆಗಣಿ ಮೇಲೆ ಕಲ್ಲು ಹಾಕಿ, ಮುಖಕ್ಕೆ ಸಿಡಿಸಿಕೊಂಡಂತೆ.
ನಾಯಿನ ಕರೆದುಕೊಂಡು ಹೋಗಿ ಸಿಂಹಾಸಾನದ ಮೇಲೆ ಕೂರಿಸಿದ ಹಾಗಯ್ತು.
ಕಟ್ಟಿದ ಕೆರೆಗೆ ಕೋಡಿ ತಪ್ಪಲ್ಲ, ಹುಟ್ಟಿದ ಮನೆಗೆ ಬೇರೆ(ಪಾಲಗುವುದು) ತಪ್ಪಲ್ಲ
ಹಿಮಾಲಯದಲ್ಲಿ ಹಿಮ ಹೆಚ್ಚಂತೆ, ವೀರಭದ್ರನಲ್ಲಿ ಅವತಾರ ಹೆಚ್ಚಂತೆ.
ಧರ್ಮಕ್ಕೆ ದಟ್ಟಿ ಕೊಟ್ಟರೆ ಹಿತ್ತಲಿಗೆ ಹೋಗಿ ಮೊಳ ಹಾಕಿದರು
ಏರಿದವ ಇಳಿದಾನು
ಅಪ್ಪಂಥೋನಿಗೆ ಇಪ್ಪಂತ್ತೊಂದು ಕಾಯಿಲೆ
ಒಲುಮೆಗೆ ನೋಟಬೇಟವೇ ಮೊದಲು
ಕುರಿ ಕೊಬ್ಬಿದಷ್ಟೂ ಕುರುಬನಿಗೇ ಲಾಭ
ಒಂಡಂಬಡಿಕೆ ಇಂದ ಆಗದು ದಡಂಬಡಿಕೆ ಇಂದ ಆದೀತೇ
ತಾಯಿಗೆ ಸೇರದ್ದು ನಾಯಿಗೂ ಸೇರದು
ಬೆಕ್ಕು ಕಣ್ಣು ಮುಚ್ಚಿಕೊಂಡು ಹಾಲು ಕುಡಿದಂತೆ
ಕೊಲ್ಲದಿರುವುದೇ ಧರ್ಮ ಬಲ್ಲವರಿಗೆ ಅದೇ ಸಮ್ಮತ
ಹಗಲು ಅರಸನ ಕಾಟ ಇರುಳು ದೆವ್ವದ ಕಾಟ
ಕಾಯಕವೇ ಕೈಲಾಸ
ಪುರಾಣ ಹೇಳೊಕೆ; ಬದನೆಕಾಯಿ ತಿನ್ನೋಕೆ
ಯಾವ ಕಾಲ ತಪ್ಪಿದರೂ ಸಾವು ಕಾಲ ತಪ್ಪದು
ರೊಂಡಿಗೆ ಏಟು ಬಿದ್ರೆ ಮೊಂಡಿಗೆ ಮುಲಾಮು ಹಚ್ಚಿದರು
ಸಾಮವೇದದ ಗಾನ ಭೂಮಿ ದಾನದ ಫಲವ ಜಂಬೂದ್ವೀಪದವರೇ ಬಲ್ಲರು
ಮೊಟ್ಟೆ ತಿ೦ದವರಿಗೆ ಮರಿ ಇಲ್ಲ.
ನಗುವ ಹೆಂಗಸು, ಅಳುವ ಗಂಡಸು ಇಬ್ಬರನ್ನೂ ನಂಬಬಾರದು
ಕಂಡೋರ ಮನೆ ರೊಟ್ಟಿಗೆ ಗಿಣ್ಣು ಹಾಲು ಕಾಯಿಸಿದರಂತೆ
ಅಂಕೆ ಇಲ್ಲದ ಚತುರೆ, ಲಗಾಮು ಇಲ್ಲದ ಕುದುರೆ
ಓದಿದ ಓದೆಲ್ಲ ಮೇದ ಕಬ್ಬಿನ ಹಿಪ್ಪೆ, ಓದಿದರ ಅರಿವು ಮೇದ ಕಬ್ಬಿನ ರಸ
ಹಗೆಯೋನ ಕೊಲ್ಲಾಕೆ ಹಗಲೇನು ಇರುಳೇನು
ಜ್ಯೋತಿಯ ನೆಲೆ ಅರಿತವನೇ ಯೋಗಿ
ಪಾಂಡವರು ಪಗಡೆಯಾಡಿ ಕೆಟ್ಟರು ; ಹೆಣ್ಣುಮಕ್ಕಳು ಕವಡೆಯಾಡಿ ಕೆಟ್ಟರು
ಸೊಕ್ಕುವುದು ಕೆಕ್ಕರಿಸಿ ನೋಡುವುದು ಸೇರಕ್ಕಿಯ ಗುಣ
ಕಳ್ಳನಿಗೊಂದು ಪಿಳ್ಳೆ ನೆವ
ಯೋಗಿಗೆ ರಾಗ ಇರಬಾರದು ಭೋಗಿಗೆ ರೋಗ ಇರಬಾರದು
ಹೆತ್ತೋರ್ಗೆ ಹೆಗ್ಗಣ ಮುದ್ದು, ಕಟ್ಗೊಂಡೋರ್ಗೆ ಕೋಡಂಗಿ ಮುದ್ದು.
ಸಿಟ್ಟು ಬಂದರೆ ಪಡಿ ಹಿಟ್ಟು ಮುಕ್ಕು.
ಯೋಗಿ ತಂದದ್ದು ಯೋಗಿಗೆ, ಭೋಗಿ ತಂದದ್ದು ಭೋಗಿಗೆ
ಬೆಕ್ಕಿನ ಕನಸಿನಲ್ಲಿ ಬರೀ ಇಲಿಗಳೇ
ರಸಿಕನ ನುಡಿ ತಿಂಗಳ ಬೆಳಕಿನಂತೆ
ಹಿತ್ತಿಲ ಗಿಡ ಮದ್ದಲ್ಲ
ಎದೆಎದೆಯನು ಪಿಸು ಮಾತೊಳಗರಳಿಸಿ
ಎದ್ದರೆ ಆಳಲ್ಲ
ಹಾಲು ಕುಡಿದು ಹಾಗಲಕಾಯಿ ತಿಂದಂತೆ.
ಕೊಣನಿಗೆ ಕೊಸೆಯೋ ಸಂಕಟ, ಎಮ್ಮೆಗೆ ಈಯೋ ಸಂಕಟ
ತಟದಲ್ಲಾಗಲೀ ಮಠದಲ್ಲಾಗಲೀ ಹಟದ ಜಂಗಮನ ಕಾಟ ತಪ್ಪುವುದಿಲ್ಲ
ತೀರದಲ್ಲಿರುವ ಮರಕ್ಕೆ ನೀರು ಯಾತಕ್ಕೆ
ರಾಗ ನೆನೆಪಾದಾಗ ತಾಳ ಮರೆತು ಹೋಯಿತಂತೆ
ನಿಷ್ಠೆ ಇದ್ದಲ್ಲಿ ದೈವ ಕಲ್ಲುಗುಂಡೊಳಗೆ ಅಡಗಿತ್ತು
ಶೀಲವಂತರ ಓಣೀಲಿ ಕೋಳಿ ಮಾಯ ಆದವಂತೆ
ಜಟ್ಟಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ
ಆರಕ್ಕೇರಲ್ಲ, ಮೂರಕ್ಕಿಳಿಯಲ್ಲ
ಅಳೀಮಯ್ಯ ನಾಚ್ಕಂಡ್ ನಾಚ್ಕಂಡು ನಾಲ್ಕು ಮುದ್ದೆ ತಿಂದ್ನಂತೆ, ಸೇರಲ್ಲ ಸೇರಲ್ಲ ಅಂತ ಸೇರಕ್ಕಿ ತಿಂದ್ನಂತೆ.
ಓಡಿ ಹೋಗೊಳು ಮೊಸರಿಗೆ ಹೆಪ್ಪು ಹಾಕ್ತಾಳ
ಕೋಪದಲ್ಲಿ ಕೊಯ್ದ ಮೂಗು ಶಾಂತವಾದ ಮೇಲೆ ಬರುತ್ತದೆಯೆ ?
ತಲೆ ಚೆನ್ನಾಗಿದ್ದರೆ ಮುಂಡಾಸು ನೂರು ಕಟ್ಟಬಹುದು
ಊರೆಲ್ಲ ದೋಚಿಕೊಂಡು ಹೋದಮೇಲೆ ದೊಡ್ಡಿ (ಕೋಟೆ) ಬಾಗಿಲು ಹಾಕಿದರಂತೆ.
ಹಾಡಿದ್ದೇ ಹಾಡಿದ ಕಿಸಬಾಯಿ ದಾಸ
ಸಾವಿರ ವರ್ಷ ಸಾಮು ಮಾಡಿ ಸಾಯೋ ಮುದುಕಿ ಸೊಂಟ ಮುರಿದ
ಸಿರಿಯಣ್ಣ ಉಳ್ಳನಕ ಹಿರಿಯಣ್ಣ ಇಲ್ಲಾದಗ ನಡಿಯಣ್ಣ
ದಿಟವೇ ಪುಣ್ಯದ ಪುಂಜ ಸಟೆಯೇ ಪಾಪದ ಬೀಜ
ಲಂಚ ಕೊಟ್ಟು ಮಂಚ ಏರು ವಂಚನೆ ಮಾಡಿ ಕೈಲಾಸ ಏರು
ಕುದುರೆ ಕಂಡರೆ ಕಾಲುನೋವು
ಒಪ್ಪೊತ್ತು೦ಡವ ಯೋಗಿ, ಎರಡೂತ್ತು೦ಡವ ಭೋಗಿ, ಮೂರೊತ್ತು೦ಡವ ರೋಗಿ, ನಾಲ್ಕೊತ್ತು೦ಡವನ ಹೊತ್ಕೊ೦ಡ್ಹೋಗಿ.
ಕದ ತಿನ್ನೋವನಿಗೆ ಹಪ್ಪಳ ಈಡಲ್ಲ
ತಳಿಗೆ ಚಂಬು ಹೋದ ಮೇಲೆ ಮಳಿಗೇ ಬಾಗಿಲು ಮುಚ್ಚಿದ ಹಾಗೆ
ಮಾತು ಮನೆ ಮುರೀತು, ತೂತು ಒಲೆ ಕೆಡಿಸ್ತು
ಹೇಳಿಕೆ ಮಾತು ಕೇಳಿ ಹೆಂಡ್ರನ್ನ ಬಿಟ್ಟ
ತಾರತಮ್ಯ ಅರಿಯದವ ದೊರೆಯಲ್ಲ ಮಾತು ಮೀರಿದವ ಸೇವಕನಲ್ಲ
ಉಕ್ಕಿದರೆ ಸಾರಲ್ಲ ; ಸೊಕ್ಕಿದರೆ ಹೆಣ್ಣಲ್ಲ.
ತಾಳೆ ಹೂವು ಶಿವನಿಗೆ ಆಗದು ಸಂಪಿಗೆಯ ಹೂ ಸಾಲಿಗ್ರಾಮಕೆ ಆಗದು
ತೇಗಿ ತೇಗಿ ಬೀಗಿ ಬಿದ್ದ
ಇರುವೆಗೆ ಇರುವೆ ಮೈ ಭಾರ,ಆನೆಗೆ ಆನೆ ಮೈ ಭಾರ
ತಾನು ಕೋತಿಯಾಗಿ ರತಿಯನ್ನು ಬಯಸುವುದೇ?
ಬರಿಗೈಯವರ ಬಡಿವಾರ ಬಹಳ.
ಕೊಟ್ಟದ್ದು ತನಗೆ; ಬಚ್ಚಿಟ್ಟದ್ದು ಪರರಿಗೆ
(ನೀನು)ಮೊಳ ಬಿಟ್ಟರೆ,(ನಾನು) ಮಾರು ಬಿಡುತ್ತೇನೆ
ತಾನು ಸಾಯಬೇಕು ಸ್ವರ್ಗಾ ಪಡೆಯಬೇಕು
ಕಂಡವರ ಕಂಡು ಕೈಕೊಂಡ ಧರ್ಮ ದಂಗು ಬಡಿಸಿತು
ಇದ್ದದ್ದು ಹೇಳಿದರೆ ಹದ್ದಿನಂತ ಮೋರೆ ಆಯಿತು
ಗಂಡಸರ ಕೈಯಲ್ಲಿ ಕೂಸು ನಿಲ್ಲದು ಹೆಂಗಸರ ಕೈಯಲ್ಲಿ ಮಾತು ನಿಲ್ಲದು
ಸಂದೀಲಿ ಸಮಾರಾಧನೆ ಮಾಡ್ದಂಗೆ
ಇದ್ದುದ ಉಣ್ಣದವನ ಬಾಯಾಗೆ ಕಡೆಗೆ ಮಣ್ಣು ಬಿತ್ತು
ಗಂಡ ಹೆಂಡಿರ ಜಗಳ ಉಂಡು ಮಲಗೋ ತನಕ.
ಬೆಲ್ಲ ಇದ್ದಲ್ಲಿ ನೊಣ ತಿರುಗಾಡಿದಂತೆ.
ತಿರುದುಂಬುವುದಕ್ಕೆ ಬೀದಿ ಹಂಚಿಕೊಂಡ ಹಾಗೆ
ಸಾವಿರ ಸಲ ಗೋವಿಂದ ಅಂದರು, ಒಬ್ಬ ದಾಸಯ್ಯನಿಗೆ ಭಿಕ್ಷೆ ನೀಡಲಿಲ್ಲ
ಉತ್ತುಬಿತ್ತಿದ ಭತ್ತವಾದರೂ ಮಳೆಯಿಲ್ಲದೆ ಮೊಳೆಯದು
ಇಲ್ಲದ ಬದುಕು ಮಾಡಿ ಇಲಿಗೆ ಚಣ್ಣ ಹೊಲಿಸಿದರು
ಹದರಿದವರ ಮೇಲೆ ಕಪ್ಪೆ ಎಸೆದರು
ಓದಿ ಓದಿ ಮರುಳಾದ ಕೂಚು ಭಟ್ಟ
ಉಂಬಾಗ ಉಡುವಾಗ ಊರೆಲ್ಲ ನೆಂಟರು
ದುಷ್ಟರಿಂದ ದೂರವಿರು
ಜಿನ ಧರ್ಮವೇ ಜೀವಧರ್ಮ
ಹೆಣ್ಣು ಹುಟ್ಟಿದರೊಂದು ಹುಣ್ಣು ಹುಟ್ಟಿದ ಹಾಗೆ
ತಿವಾಸಿ ಯಾತಕ್ಕೆ ತಿಪ್ಪೇ ಮೇಲಣವಗೆ
ಮನೆಮನೆ ಮುದ್ದೆ ಮಾರಿಗುಡಿ ನಿದ್ದೆ
ಹೆತ್ತ ಅಮ್ಮನ್ನ ತಿನ್ನೋಳು ಅತ್ತೆಯಮ್ಮನ್ನ ಬಿಟ್ಟಾಳ
ಮುದ್ದೆ ಉಣ್ತಾ ಮಜ್ಜಿಗೆ ಓಡಾಟ
ಹೆಣ್ಣು ಚಂದ ಕಣ್ಣು ಕುರುಡು ಅಂದಂಗೆ
ಕಂಡವರ ಮಕ್ಕಳನ್ನು ಬಾವಿಯಲ್ಲಿ ದೂಡಿ ಆಳ ನೋಡಿದ ಹಾಗೆ
ಮುದುಕೀ ನಿನ್ನಾಟ ಮುಂದೈತಿ
ತಮ್ಮ ಸಂಗಡ ತಂಗಿಯ ಗಂಡ ದೂರು ಹೇಳಿದರೆ ನಿನಗೇನಪ್ಪ
ರೋಹಿಣಿ ಮಳೆ ಓಣಿಯೆಲ್ಲಾ ಕೆಸರು.
ಇದ್ದವರು ಇದ್ದಹಾಗೆ ಸಿದ್ಧಾ ದೇವಿಗೆ ಸಿಡಿಲು ಬಡೀತು
ಲಿಂಗ ಹರಿದ ಮೇಲೆ ಜಂಗಮನ ಹಂಗೇನು
ಸಾವಿರ ಕೊಟ್ಟರೂ ಸವತಿ ಮನೆ ಬೇಡ
ಜೀನ ಗಳಿಸಿದ ;ಜಾಣ ತಿಂದ
ಗಾಣಿಗಿತ್ತಿ ಅಯ್ಯೋ ಅಂದರೆ ನೆತ್ತಿ ತಂಪಾದೀತೇ?
ಕಳೆದುಕೊಂಡ ವಸ್ತುವನ್ನು ಕಳೆದುಹೋದ ಜಾಗದಲ್ಲೇ ಹುಡುಕು
ಕಳ್ಳನ ಮನಸ್ಸು ಹುಳ್ಳಗೆ
ಕಿಡಿ ಇಲ್ಲದೆ ಬೆಂಕಿಯಿಲ್ಲ ;ಕಾರಣ ಇಲ್ಲದೆ ಜಗಳವಿಲ್ಲ
ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು
ಗಣೇಶನ್ನ ಮಾಡು ಅಂದ್ರೆ ಅವರ ಅಪ್ಪನ ಮಾಡಿದನಂತೆ.
ಎತ್ತು ಈಯಿತು ಅನ್ದರೆ ಕೊಟ್ಟಿಗೆಗೆ ಕಟ್ಟು ಎನ್ದರಂತೆ
ಬೆಳ್ಳಯ್ಯ ಕಾಕಾ ಅರಿವಯ್ಯ ಮೂಕ
ಇಲಿ ಸಿಕ್ಕರೆ ಬೆಕ್ಕು ಆಗುವುದು ಹುಲಿ.
ಆನೆ ದಾನ ಮಾಡಿದವನು ಸರಪಣಿಗೆ ಜಗಳಾಡುವನೆ ?
ಮೂರು ಕಾಸಿನ ಮಾಂಸವಿಲ್ಲದಿದ್ದರೂ, ಮಾತು ಮಾತ್ರ ಜೋರು.
ವಿನಾಶ ಕಾಲಕ್ಕೆ ವಿಪರೀತ ಬುದ್ಧಿ
ಊರಿಗೆ ಉಪಕಾರಿ, ಮನೆಗೆ ಮಾರಿ
ಅವರು ಚಾಪೆ ಕೆಳಗೆ ತೂರಿದರೆ ನೀನು ರಂಗೋಲಿ ಕೆಳಗೆ ತೂರು
ಬಾಲ್ಯವಿಲ್ಲದೆ ಯೌವ್ವನವಿಲ್ಲ, ಯೌವ್ವನವಿಲ್ಲದೆ ಮುಪ್ಪಿಲ್ಲ.
ತಕ್ಕವನಲ್ಲಿ ಹೊಕ್ಕಿದ್ದರೆ ತಕ್ಕಷ್ಟಾದರೂ ಸಿಕ್ಕುವುದು
ಬೆರಳು ತೋರಿಸಿದರೆ ಅಂಗೈ ನುಂಗಿದಂತೆ.
ಯಾರ ಹೆ೦ಡ್ತಿ ಎಲ್ಲಿಯಾದರೂ ಹೋಗಲಿ ನಮ್ಮ ಹೆ೦ಡ್ತಿ ನಮ್ಮನೇಲಿರಲಿ
ನಾ ಬಲ್ಲೆ ಅನ್ನೊ ಮಾತು ಎಲ್ಲರಿಗು ಸಲ್ಲದು
ಚಂಡಾಲ ದೇವರಿಗೆ ಚಪ್ಪಲಿ ಸೇವೆ
ಧರ್ಮಕ್ಕೆ ಕೊಟ್ಟ ಆಕಳ ಹಲ್ಲು ಎಣಿಸಿದರು
ಕೋಪ ಬೀವುದೇ ಸಮತೆ
ಕಾಡಿಗೆ ಹೋಗೋ ವಯಸ್ಸಿನಲ್ಲಿ ಬ್ರಾಹ್ಮಣ ಓಂ ಕಲಿತ
ಇಕ್ಕಲಾರದ ಕೈ ಎಂಜಲು
ಹಣ ಹಾದರ ಬಿತ್ತು ಹೊನ್ನು ತೊನ್ನು ಮುತ್ತು.
ಲಾಭ ನೋಡಿ ಬಾಳೆ ಹಣ್ಣು ತಿಂದಂತೆ.
ಅಕ್ಕರ ಕಲ್ತು ತನ್ನ ಒಕ್ಕಲನ್ನೇ ತಿನ್ನೊದ್ ಕಲ್ತ
ಬೀದೀಲಿ ಹೋಗೋ ಮಾರೀನ ಮನೆಗೆ ಕರೆದಂತೆ
ಇಲಿಯ ವ್ಯಾಜ್ಯಕ್ಕೆ ಬೆಕ್ಕು ಸಾಕ್ಷಿ
ಯಜಮಾನಿಲ್ಲದ ಮನೆ ಮೇಟಿ ಇಲ್ಲದ ಕಣ ಎರಡೂ ಒಂದೆ
ಉಪ್ಪು ತಿಂದವನು ನೀರು ಕುಡಿಯಲೇ ಬೇಕು
ಹೆಂಡ್ರ ಅವಾಂತರ ತಡಿಲಾರದೆ ಗಂಡ ದೇಶಾಂತರ ಹೋದ
ಚರ್ಮ ಸುಕ್ಕಾದ್ರೆ ಮುಪ್ಪು, ಕರ್ಮ ಮುಕ್ಕಾದ್ರೆ ಮುಕ್ತಿ
ಹಂಪಿಗೆ ಹೋಗುವುದಕ್ಕಿಂತ ಕೊಂಪೆಯಲ್ಲಿರುವುದೇ ಲೇಸು.
ಹಗೆ ಬಿತ್ತಿ ಬೆಂಕಿ(ಹೊಗೆ) ಬೆಳೆದ
ನೇರಲೆ ಹಣ್ಣು ಬಲು ಕಪ್ಪು ತಿಂದು ನೋಡಿದರೆ ಬಲು ಸವಿ
ಹತ್ತು ಕಟ್ಟುವಲ್ಲಿ ಒಂದು ಮುತ್ತು ಕಟ್ಟು
ಹಗೆ ಬಿತ್ತಿ ಬೆಂಕಿ ಬೆಳೆದ
ಕೆಲಸವಿಲ್ಲದ ಆಚಾರಿ ಮಗನ ತಲೆ ಕೆತ್ತಿದನಂತೆ
ತಟ್ಟನೆ ಬಾ ಅಂದ್ರೆ ತುಟಿ ಬಿಟ್ಟನಂತೆ
ಇತ್ತತ್ತ ಬಾ ಅಂದ್ರೆ ಇದ್ದ ಮನೆ ಕಿತ್ಕೊಂಡರು
ಇಕ್ಕಟ್ಟಾದರೂ ತನ್ನ ಗುಡಿಲೇ ಚಂದ
ಹೊಸ ಮಂಜು ಹಳೆಯದನ್ನು ಕೊಚ್ಚದಿದ್ದೀತೆ.
ಕಡು ಕೋಪ ಬಂದಾಗ ತಡಕೊಂಡವನೇ ಜಾಣ
ಬಾಳೆಗೊಂದು ಗೊನೆ, ಬಾಳಿಗೊಂದು ಮಾತು.
ತಾಳಲಾರದ ವಿರಹ ತಿಣಕಿದರೆ ಹೋದೀತೇ?
ಊಟ ತನ್ನಿಚ್ಚೆ, ನೋಟ ಪರರಿಚ್ಚೆ
ಹರೆ ಬಡಿದರೂ ಮದುವೆ ಮೊರ ಬಡಿದರೂ ಮದುವೆ
ಏನೂ ಇಲ್ಲದವಗೆ ಭಯವಿಲ್ಲ
ಹಾಳೂರಿಗೆ ಉಳಿದವನೇ ಗೌಡ
ಎತ್ತು ಹೊರಬಲ್ಲ ಭಾರವನ್ನು ಕರು ಹೊರಬಲ್ಲುದೆ ?
ಸಮುದ್ರದ ನೆಂಟಸ್ತನ ಉಪ್ಪಿಗೆ ಬಡತನ
ಊರಿಗೆ ಬಂದ ನೀರೆ ನೀರಿಗೆ ಬಾರದಿರುತ್ತಾಳೆಯೇ?
ಅಳಿಯ ಅಲ್ಲ, ಮಗಳ ಗಂಡ
ಇದ್ದಲ್ಲಿ ಗವುಡ ಹೋದಲ್ಲಿ ಕಿವುಡ
ಶಿವರಾತ್ರಿ ಮನೆಗೆ ಏಕಾದಶಿ ಬಂದಂಗೆ
ನಿದ್ದೆಗೆ ಮದ್ದಿಲ್ಲ, ವಜ್ರಕ್ಕೆ ಬೆಲೆಯಿಲ್ಲ.
ತಣ್ಣಗಿದ್ದರೆ ಮಣ್ಣಾದರೂ ಅಸಾಧ್ಯ
ಮಾತಿಂದಲೇ ನಗೆನುಡಿ ಮಾತಿಂದಲೇ ಹಗೆ
ಹೆತ್ತವರು ಹೆಸರಿಕ್ಕ ಬೇಕು
ಏರಿ ಮ್ಯಾಗಿನ ಪಂಜು ನೀರೊಳಗೆ ಉರಿಯಿತು
ಅತ್ತೆ ಸತ್ತ ಮೇಲಿನ ಸೊರ್ಗಕ್ಕಿಂತ ಇದ್ದ ನರಲೋಕ ವಾಸಿ
ಎಂಟು ವರ್ಷಕ್ಕೆ ನನ್ನ ಮಗ ದಂಟಾದ
ಎಲ್ಲಾ ಜಾಣ, ತುಸು ಕೋಣ.
ಆಗೋದೆಲ್ಲಾ ಒಳ್ಳೇದಕ್ಕೆ
ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡಿಕೊಂಡ
ಏತಿ ಅಂದರೆ ಪ್ರೇತಿ .
ಮನೆಗೆ ಮಾರಿ, ಪರರಿಗೆ ಉಪಕಾರಿ
ಕಣ ಕಾಯಬಹುದು, ಹೆಣ ಕಾಯಾಕೆ (ಬೇಸರದಿಂದ ಹೊತ್ತು ಕಳೆಯಲಿಕ್ಕೆ) ಆಗೊದಿಲ್ಲ
ಹಟದಿಂದ ಹೆಣ್ಣು ಕೆಟ್ಟಳು ಚಟದಿಂದ ಗಂಡು ಕೆಟ್ಟ
ಆಗರಕ್ಕೆ ಹೋಗಿ ನನ್ನ ಗಂಡ ಗೂಬೆ ತಂದ
ಆರಕ್ಕೇರಲಿಲ್ಲ, ಮೂರಕ್ಕೀಳಿಯಲಿಲ್ಲ.
ಉಡೋಕಿಲ್ಲದಿದ್ದರೂ ಪಟ್ಟೆ ಸೀರೆ ಉಟ್ಟರು
ನಾಯಿ ಬಾಲ ಡೊಂಕು
ಕಾಸಿಗೊಂದು,ಕೊಸರಿಗೆರಡು
ಉರಗಕ್ಕೆ ಹಾಲೆರೆದರೆ ಅದು ತನ್ನ ಗರಳ್ವ ಬಿಡಬಲ್ಲುದೇ
ಒಂದಕ್ಕೆರಡು ದಂಡ,ಹೆಂಡಕ್ಕೆ ರಾಗಿ ದಂಡ
ಸಾಯೋ ಮುಂದೆ ಸಕ್ಕರೆ ತುಪ್ಪ ತಿನಿಸಿದರಂತೆ
ಒಬ್ಬರ ಕೂಳು ಇನ್ನೊಬ್ಬರ ಕುತ್ತು.
ಬಲ್ಲವನೇ ಬಲ್ಲ ಬೆಲ್ಲದ ರುಚಿಯ.
ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು
ತಳವಾರನಿಗೆ ಪಟ್ಟ ಕಟ್ಟಿದರೆ ಕುಳವಾರು ಹೋದೀತೋ?
ತನ್ನೂರಲಿ ರಂಗ, ಪರೂರಲಿ ಮಂಗ
ಕಲ್ಲ ನಾಗರ ಕಂಡರೆ ಹಾಲೆರೆವರು ದಿಟ ನಾಗರ ಕಂಡರೆ ಕೊಲ್ಲೆಂಬರು ಉಂಬುವ ಜಂಗಮ ಬಂದರೆ ನಡೆಯೆಂಬರು, ಉಣ್ಣದ ಲಿಂಗಕ್ಕೆ ಬೋನ ಹಿಡಿಯೆಂಬರು
ಹುಳ್ಳಿಕಾಳೂ ತಿನ್ನೊ ಮುಕ್ಕ ಒಬ್ಬಟ್ಟಿನ ಹೂರ್ಣ ಕೇಳಿದಂಗೆ
ಹರಿದಿದ್ದೇ ಹಳ್ಳ ನಿಂತಿದ್ದೇ ತೀರ್ಥ
ತಾಟುಗಾರ (ಗರ್ವದ ಮನುಷ್ಯ) ಆಟಕ್ಕೆ ಹೋಗಿ ಮೋಟಗಾರನಾಗಿ (ತನ್ನಿಂದಲೇ ತಾ ಮೂರ್ಕನಾಗುವುದು) ಬಿದ್ದ
ಹೆಣ್ಣಿಗೆ ಹೆಣ್ಣೇ ವೈರಿ
ಉರುಳುವ ಕಲ್ಲಿಗೆ ಏನೂ ಅಂಟುವುದಿಲ್ಲ.
ಒಕ್ಕಣ್ಣರ ನಾಡಿಗೆ ಹೋದ್ರೆ ಒಂದು ಕಣ್ಣು ಮುಚ್ಚಿ ನಡೆಯಬೇಕು
ಹೆಣ್ಣಿನ ತಂದೆ ಹಣ್ಣಾಗ್ತಾನೆ .ಗಂಡಿನ ತಂದೆ ಗುಂಡಾಗ್ತಾನೆ
ಛತ್ರದಲ್ಲಿ ಭೋಜನ , ಮಠದಲ್ಲಿ ನಿದ್ದೆ .
ಖಂಡಿತ ವಾದಿ,ಲೋಕ ವಿರೋಧಿ
ಕೋಟಿ ಕೊಟ್ಟರೂ ಕೂಟ ಕರ್ಮಿಯ ದುಂದುಗವೇ ಬೇಡ
ಬುದ್ಧಿ ಉಳ್ಳವನಿಗೆ ಕರ್ಮ ತಿದ್ದಿ ಕೊಡುತಿತ್ತು
ಊರೆಲ್ಲ ದೋಚಿಕೊಂಡು ಹೋದಮೇಲೆ ದೊಡ್ಡಿ ಬಾಗಿಲು ಹಾಕಿದರಂತೆ.
ಭಲೆ ಜಟ್ಟಿ ಅಂದ್ರೆ ಕೆಮ್ಮಣ್ಣು ಮುಕ್ಕಿದ.
ಹೊಳೆಗೆ ಸುರಿದರೂ ಅಳೆದು ಸುರಿ
ಉಂಬೋಕೆ ಉಡೋಕೆ ಅಣ್ಣಪ್ಪ ಕೆಲಸಕ್ಕಷ್ಟೇ ಇಲ್ಲಪ್ಪ
ಮುದ್ದು ಮುದ್ದು ತೊಗಲೆ ಬಿದ್ದು ಬಿದ್ದು ನಗಲೆ
ತಿರುಳು ತಿಂದರೂ ಮರುಳು ಹೋಗಲಿಲ್ಲ
ಮಾಡಬಾರದ್ದು ಮಾಡಿದರೆ, ಆಗಬಾರದ್ದು ಆಗತ್ತೆ
ಕಾಗೆಯ ಕೈಯಲ್ಲಿ ಕೊಟ್ಟರೆ ಕಾರಭಾರ, ಅದು ಮಾಡುವುದೇ ಉಪಕಾರ?
ಚಿತ್ತಾರದ ಅಂದವನ್ನು ಮಸಿ ನುಂಗಿತು
ಜನ ಮರುಳೋ ಜಾತ್ರೆ ಮರುಳೋ
ತಾಪತ್ರಯದವನಿಗೆ ತಾಪೆ/ಚಾಪೆ ಯಾಕೆ
ಮಗೂನೂ ಚಿವುಟಿ ತೊಟ್ಟಿಲು ತೂಗಿದ ಹಾಗೆ.
ಕತೆ ಹೇಳೋಕೆ ಹ್ಞುಂ-ಗುಟ್ಟೋರಿರಬೇಕು, ನೆಟ್ಟಗೆ ಬಾಳೋಕೆ ಛೀ-ಗುಟ್ಟೋರಿರಬೇಕು
ತಲೆ ಗಟ್ಟಿ ಅಂತ ಕಲ್ಲ ಹಾಯಬಾರದು
ನುಡಿಯೊಳು ಕ೦ಪಿಡುವುದು ಬದುಕು ನುಡಿಯಿರದವನಿಗೆ ಇಲ್ಲವು ನಾಡೂ ನುಡಿಯಲಿ ಸಲ್ಲನದಾವುದಕೂ.
ಬೀಳು ಭೂಮಿಗೆ ಬೀಜ ದಂಡ
ಹೊತ್ತು ಮೀರಿದ ಮಾತು ತನಗೇ ಕುತ್ತು ತಂತು
ಬೆಳ್ಳಗಿರೋದೆಲ್ಲ ಹಾಲಲ್ಲ, ಹೊಳೆಯೋದೆಲ್ಲ ಚಿನ್ನ ಅಲ್ಲ.
ಆದರೆ ಒಂದಡಿಕೆ ಮರ, ಹೋದರೆ ಒಂದು ಗೋಟು.
ಗುರುವಿಗೇ ತಿರುಮಂತ್ರ
ಎಂಜಲು ಕೈಯಲ್ಲಿ ಕಾಗೆ ಓಡಿಸದ ಬುದ್ಧಿ
ಕನ್ನಡಿ ಒಳಗಿನ ಗಂಟು ಕೈಗೆ ದಕ್ಕೀತೆ ?
ಶಿಸ್ತುಗಾರ ಪುಟ್ಟಶಾಮಿ
ರಸ ಬೆಳೆದು ಕಸ ತಿನ್ನಬೇಡ, ಹಸ ಕಟ್ಟಿ ಮೊಸರಿಗೆ ಪರದಾಡಬೇಡ
ಹಿಟ್ಟು ಹಳಸಿತ್ತು ನಾಯೂ ಹಸಿದಿತ್ತು
ತನ್ನ ಬೆನ್ನು ತಾನೇ ತಟ್ಟಿಕೊಂಡ ಹಾಗೆ
ಹುಟ್ಟಿದ ಮಗು ತರುವುದು ತೊಟ್ಟಲಿಗೆ ನಗು.
ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ
ಆಚಾರ್ಯರಿಗೆ ಮಂತ್ರಕ್ಕಿಂತ ಉಗುಳು ಜಾಸ್ತಿ
ತೊಟ್ಟಿಲನ್ನು ತೂಗುವ ಕೈ ಜಗತ್ತನ್ನೇ ತೂಗಬಲ್ಲುದು
ಲೋಕ ತಿಳಿಯಬೇಕು ಲೆಕ್ಕ ಕಲಿಯಬೇಕು
ತಾಳಿದವನು ಬಾಳಿಯಾನು
ಕಣ್ಣಿಗೆ ಕಂಡದ್ದೆಲ್ಲಾ ನುಣ್ಣಗಿರುವುದಿಲ್ಲ.
ಅತ್ತೂ ಕರೆದೂ ಔತಣ ಹೇಳಿಸಿಕೊಂಡರು
ಮಕ್ಕಳಿಲ್ಲದ ಮನೆಯಲ್ಲಿ ಅಜ್ಜ ಅಂಬೆಗಾಲಿಟ್ಟ
ಸಾವಿರ ಸುಳ್ಳು ಹೇಳಿ ಒಂಡು ಮಡುವೆ ಮಾಡು
ದಾನವಾಗಿ ಸಿಕ್ಕಿದರೆ, ನನಗೆ ಒಂದಿರಲಿ ನಮ್ಮಪ್ಪನಿಗೆ ಒಂದಿರಲಿ
ನರಿಗೆ ಹೇಳಿದರೆ ನರಿ ತನ್ನ ಬಾಲಕ್ಕೆ ಹೇಳಿತಂತೆ
ಬಡವನಿಗೆ ಉಳಿದಷ್ಟೆ ಅಭಿಮಾನ
ತಿರಿತಿರಿಗಿ ತಿಮ್ಮಪ್ಪನ ಹತ್ತರ ಹೋದರೆ ತಿರಿದುಂಬೋದು ತಪ್ಪೀತೇ?
ಎಲ್ಲರು ಆಸೆ ಬಿಟ್ಟರೆ ಇಲ್ಲಿಯೇ ಕೈಲಾಸ, ಎಲ್ಲವ ಬಯಸಿ ಭ್ರಮಿಸಿದರೆ ಇಲ್ಲಿಯೇ ನರಕ
ಆಪತ್ತಿಗೆ ಹರಕೆ, ಸಂಪತ್ತಿಗೆ ಮರವು
ಎಣ್ಣೆ ತಣ್ಣಗಾದರೆ ಬೆಣ್ಣೆಯ ಹಾಗೆ ಇದ್ದೀತೆ?
ಬಡವೆ ಸೀರೆ ಉಡದೆ ಮಾಸಿತು
ಕೋಪದಲ್ಲಿ ಕುಯ್ದ ಮೂಗು ಶಾಂತವಾದಾಗ ಬಂದೀತೇ
ಕಲ್ಲಾದರು ಕರಗಬಹುದು, ಕಪಟಿಯ ಮನಸ್ಸು ಕರಗದು.
ಮಂತ್ರ ತಂತ್ರ ದೈವ ಒಲ್ಲದೆ ತನಗೆ ಸ್ವಂತವಲ್ಲ
ಸಂತೆ ಕಟ್ಟೋಕು ಮೊದಲೇ ಸೇರಿದರು ಗಂಟು ಕಳ್ಳರು
ಮಾಡಿದ್ದುಣ್ಣೋ ಮಾರಾಯ
ಹೇಮಗೇಡಿ ನೇಮ ಬೆಳಗಿದ
ಸಮುದ್ರ ದಾಟಿದವನಿಗೆ ಹಸುವಿನ ಹೆಜ್ಜೆ ದೊಡ್ಡದೆ
ಬರಗಾಲದಲ್ಲಿ ಅಧಿಕ ಮಾಸ.
ರಾಮ ಅನ್ನೋ ಕಾಲದಲ್ಲಿ ರಾವಣ ಬುದ್ಧಿ
ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಮುದ್ದೆ ಉಣ್ತಾ ಮಜ್ಜಿಗೆ ಓಡಾಟ
ಕೈಯಲ್ಲಿ ಶರಣಾರ್ಥಿ, ಕಂಕುಳಲ್ಲಿ ದೊಣ್ಣೆ
ಭಟ್ಟನ ಮಗಳಿಗೆ ಹುಟ್ಟಲು ದಿನವಿಲ್ಲ
ನಿನ್ನಲ್ಲಿ ನೀ ಹುಡುಕು, ಅರಿಷಡ್ವರ್ಗಗಳ ಹೊರ ಹಾಕು.
ಮುಟ್ಟಿದೋರ ಮೇಲೆ ಬಿಟ್ಟೆ ನನ್ನ ಪ್ರಾಣ
ಹಂಗಿನರಮನೆಗಿಂತ ಕುಂದಣದ ಗುಡಿ ಲೇಸು
ಆರು ಕೊಟ್ಟರೆ ಅತ್ತೆ ಕಡೆ, ಮೂರು ಕೊಟ್ಟರೆ ಸೊಸೆ ಕಡೆ.

  ಶ್ರೀ ಸೂರ್ಯಾಷ್ಟಕಮ್ ಸ್ತೋತ್ರ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೧ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೨ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೩ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೪ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೫ ಕ್ಕೆ ಇಲ್ಲಿ ಕ್ಲಿಕ್ ಮಾಡಿ

  ಗಾದೆ - ಉಪ್ಪು ತಿಂದ ಮೇಲೆ ನೀರು ಕುಡಿಯಲೇ ಬೇಕು 

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೬ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೭ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೮ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೯ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೧೦ ಕ್ಕೆ ಇಲ್ಲಿ ಕ್ಲಿಕ್ ಮಾಡಿ

  ನಾನ್ಯಾರು - ಕನ್ನಡ ಒಗಟುಗಳು

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೧೧ ಕ್ಕೆ ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

Translate »