ನಮ್ಮ ಬಗ್ಗೆ

ನಮ್ಮ ಬಗ್ಗೆ – About Us

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷ್ಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ

ಸಾಮಾಜಿಕ ಮಾಧ್ಯಮ

ಕನ್ನಡ ಗಾದೆಮಾತು ವಿಷಯ – ನಾಣ್ಣುಡಿ – ಲೋಕೋಕ್ತಿ – ಭಾಗ – ೫ Kannada Wisdom


Kannada Gaadegalu | ಕನ್ನಡ ಗಾದೆಗಳು |ಕನ್ನಡ ಜನಪ್ರಿಯ ಗಾದೆಗಳು | Kannada Popular Proverbs | Janapriya Gaadegalu | Kannada Proverbs | ಜನಪ್ರಿಯ ಗಾದೆಗಳು | Kannada Gaade Maathu | kannada gaade maathu | ಕನ್ನಡ ಗಾದೆ ಮಾತು | ಗಾದೆ ವಿಸ್ತರಣೆ | Gaade expand | ಗಾದೆ ಅರ್ಥ ಸಹಿತ | proverbs with meanings

ಕನ್ನಡ ಗಾದೆಮಾತು ವಿಷಯ – ನಾಣ್ಣುಡಿ – ಲೋಕೋಕ್ತಿ – ಭಾಗ – ೫ Kannada Wisdom

ರೇಶ್ಮೆ ಶಾಲಿನಲ್ಲಿ ಸುತ್ತಿದ ಚಪ್ಪಲಿ ಏಟು
ಹಿರಿದು ಪಾಪ ಮಾಡಿ ಗಂಗೆಗೆ ಹರಿದರು
ತಿಳಿದು ಒಡ್ಡೋ ತೀರು ಬಾಣವ
ತರವಲ್ಲದ ಮಾತು ಮರ ಏರಿದರೆ ಆದೀತೇ
ಹಿಟ್ಟು ಹಳಸಿತ್ತು ನಾಯಿಯೂ ಹಸಿದಿತ್ತು
ಪುಣ್ಯ ಉಂಡು (=ಸುಖ ಅನುಭೋಗಿಸಿ) ತೀರಿತು, ಪಾಪ ತಿಂದು (=ಕಷ್ಟ ಅನುಭವಿಸಿ) ತೀರಿತು
ನೂರು ಜನಿವಾರ ಒಟ್ಟಿಗಿರಬಹುದು, ನೂರು ಜಡೆ ಒಟ್ಟಿಗಿರುವುದಿಲ್ಲ.
ಅರಸನ ಕುದರೆ ಲಾಯದಲ್ಲೆ ಮುಪ್ಪಾಯಿತು
ಕಚ್ಚೋ ನಾಯಿ ಬೊಗಳುವುದಿಲ್ಲ
ಕೋತಿ ತಾನೂ ಕೆಡೋದಲ್ದೆ ವನಾನೂ ಕೆಡಿಸ್ತು
ಕೆಡುವ ಕಾಲಕ್ಕೆ ಬುದ್ಧಿ ಇಲ್ಲ ಮರಣ ಕಾಲಕ್ಕೆ ಮದ್ದಿಲ್ಲ
ಇದ್ದೋರು ಮೂರು ಜನರಲ್ಲಿ ಕದ್ದೋರು ಯಾರು ?
ಕಾಲಿನದು ಕಾಲಿಗೆ, ತಲೆಯದು ತಲೆಗೆ.
ಯಾರ ಹೆ೦ಡ್ತಿ ಎಲ್ಲಿಯಾದರೂ ಹೋಗಲಿ ನಮ್ಮ ಹೆ೦ಡ್ತಿ ನಮ್ಮನೇಲಿರಲಿ
ಇದ್ದಿದ್ದು ಇದ್ದ ಹಾಗೆ ಹೇಳಿದ್ರೆ ಎದ್ದು ಬ೦ದು ಎದೆಗೆ ಒದ್ದನ೦ತೆ.
ಬಡವೆ ಸೀರೆ ಉಡದೆ ಮಾಸಿತು
ಒಳ್ಳೆಯ ಕೆಲಸಕ್ಕೆ ವಿಘ್ನ ಹೆಚ್ಚು.
ಸೂಜಿಯಷ್ಟು ಬಾಯಿ ಗುಡಾಣದಷ್ಟು ಹೊಟ್ಟೆ
ಸಾಯೋ ತನಕ ಶನಿ ಕಾಟ ಆದ್ರೆ ಬಾಳೋದು ಯಾವಾಗ
ಹೆಸರು ಸಂಪತ್ತು, ಕೂಳಿಗಿಲ್ಲ ಒಪ್ಪತ್ತು.
ಅಣ್ಣ ಸತ್ತರೆ ಹುಣ್ಣಿಮೆ ನಿಲ್ಲದು
ಆಕಾಶ ನೋಡೋಕೆ ನೂಕಾಟವೇಕೆ?
ಮಾಡೋದು ದುರಾಚಾರ, ಮನೆ ಮುಂದೆ ಬೃಂದಾವನ
ಆಪತ್ತಿಗಾದವನೇ ನೆ೦ಟ.
ಹಂಚು ಕಾಣದ ಮುದುಕಿ ಕಂಚು ಕಂಡರೆ ಮೂರು ಸಲ ಬೆಳಗಿ ನೋಡಿದ್ದಳು
ಬುದ್ಧಿ ಉಳ್ಳವನಿಗೆ ಕರ್ಮ ತಿದ್ದಿ ಕೊಡುತಿತ್ತು
ಹಾಕು ಮಣೆ, ನೂಕು ಮಣೆ, ತಳ್ಳು ಮಣೆ, ಯಾಕ್ಮಣೆ
ಅಧರಕ್ಕೆ ಕಹಿ ಉದರಕ್ಕೆ ಸಿಹಿ
ಲಕ್ಕಿ ಸೊಪ್ಪಾದರೂ ಲೆಕ್ಕದ ಮುದ್ದೆ ಉಣಬೇಕು
ದೀನನ ಬೇಡಿ ಬಳಲಿದರೆ ಆತ ಏನು ಕೊಟ್ಟಾನು?
ಎಡಗಣ್ಣು ಹೊಡೆದರೆ ನಾರಿಗೆ ಶುಭ.
ನೇಮ ಉಳ್ಳವನ ಕಂಡರೆ ಯಮನಿಗೂ ಭಯ
ಗಾಯದ ಮೇಲೆ ಬರೆ ಕೊಟ್ಟಂತೆ
ಕಳ್ಳನ್ನ ನಂಬಿದ್ರೂ ಕುಳ್ಳನ್ನ ನಂಬಬಾರದು
ಕಚ್ಚುವ ನಾಯಿ ಬೊಗಳದು ಬೊಗಳುವ ನಾಯಿ ಕಚ್ಚದು
ಕಳ್ಳನ ಹೆಂಡತಿ ಎಂದಿದ್ದರೂ ಮುಂ..
ರಸಿಕನ ನುಡಿ ತಿಂಗಳ ಬೆಳಕಿನಂತೆ
ಕಜ್ಜಿ ಹೋದರೂ ಕಡಿತ ಹೋಗಲಿಲ್ಲ
ಗುಡ್ಡ ಕಡಿದು ಹಳ್ಳ ತುಂಬಿಸಿ ನೆಲ ಸಮ ಮಾಡಿದ ಹಾಗೆ
ಎಲ್ಲವೂ ತಾನಗ ಬಲ್ಲರೆ ಅದುವೇ ಯೋಗ
ನಾಯಿಗೆ ಹೊಡೆಯಲು ಬಣ್ಣದ ಕೋಲೇ.
ತಿರುಪತಿ ಕ್ಷೌರಿಕರು ತಲೆ ಬೋಳಿಸಿದ ಹಾಗೆ
ಇಂಬರಿತು ಕೊಡುವಳೆ ರಂಭೆ
ತಾ ಮಾಡಿದ್ದು ಉತ್ತಮ, ಮಗ ಮಾಡಿದ್ದು ಮಧ್ಯಮ, ಆಳು ಮಾಡಿದ್ದು ಹಾಳು
ಅಕ್ಕರ ಕಲ್ತು ತನ್ನ ಒಕ್ಕಲನ್ನೇ ತಿನ್ನೊದ್ ಕಲ್ತ
ಸಂತೆಗೂ ಮುಂಚೆ ಗಂಟು ಕಳ್ಳರು ನೆರೆದರಂತೆ
ಅಡಿಕೆ ಕದ್ದ ಮಾನ ಆನೆ ಕೊಟ್ರೂ ಬರೊಲ್ಲ
ತಿಗಳಗಿತ್ತಿಯ ಬಾಯಿ ಕೆಣಕಬೇಡ ಬಗಳೊ ನಾಯಿ ಬಡಿಯಬೇಡ
ಇದೇನು ತೋಟದಪ್ಪನ ಛತ್ರಾನ?
ಹೊಟ್ಟೇಲಿರೋ ಸಿಟ್ಟು ರಟ್ಟೇಲಿಲ್ಲ
ಗಾಳಿ ಬಂದಾಗ ತೂರಿಕೋ
ಕೋತಿ ಮೊಸರನ್ನ ತಿಂದು,ಮೇಕೆ ಬಾಯಿಗೆ ಒರೆಸಿದಂತೆ
ನೀರೆಯ ಓರೆಗಣ್ಣ ನೋಟಕ್ಕೆ ನಾಡೆಲ್ಲ ಇರಿದಾಡಿತು
ಮಾತಿಂದಲೇ ನಗೆನುಡಿ ಮಾತಿಂದಲೇ ಹಗೆಕೊಲೆ
ಆಗುವ (ಅಡುವ) ವರೆಗಿದ್ದು ಆರುವವರೆಗೆ ಇರಲಾರರೇ
ನಿಜ ಆಡಿದರೆ ನಿಷ್ಠೂರ ಇದ್ದದ್ದು ಹೋಯಿತು
ಮುಳುಗುತ್ತಿರುವವನಿಗೆ ಹುಲ್ಲು ಕಡ್ಡಿಯೂ ಆಸರೆ.
ಆಡೋಣ ಬಾ ಕೆಡಿಸೋಣ ಬಾ
ಬೆಕ್ಕಿಗೆ ಬೆಣ್ಣೆ ಕಂಡಿತು ಬಡಿಗೆ ಕಾಣಲಿಲ್ಲ
ಅಕ್ಕಿ ಸರಿಯಾಗ ಬಾರದು ಅಕ್ಕನ ಮಕ್ಕಳು ಬಡವಾಗ ಬಾರದು
ಅಂಗೈ ಹುಣ್ಣಿಗೆ ಕನ್ನಡಿ ಬೇಕೆ?
ಪಕ್ಕದ ಮನೇಗೆ ಬಿದ್ದ ಬೆಂಕಿ ಬಿಸಿ ತನ್ನ ಮನೇಗೆ ಬೀಳೋವರೆಗೂ ತಾಕಲ್ಲ
ಕಣ್ಣಿಗೆ ಒಪ್ಪವಿಲ್ಲದ ಹೆಣ್ಣು ಸಪ್ಪಗೆ ಕಂಡಳು
ತರಹರಿಸಾಳಾರದವಳು ಮರಣಕ್ಕೆ ಪಾತ್ರಳು
ದಾಕ್ಷಿಣ್ಯವ೦ತ ದೇಶಕ್ಕೆ ಹೋದರೆ ದಕ್ಷಿಣೆ ಸಿಕ್ಕೀತೇ!
ಅಕ್ಕಿ ಉಂಡವ ಹಕ್ಕಿ, ಜೋಳ ಉಂಡವ ತೋಳ
ಹೆಂಡ ಕುಡಿದ ಕಪಿಗೆ ಚೇಳು ಕಡಿದ ಹಾಗೆ
ಕೆತ್ತೆಂದರೆ ಕೆತ್ತು ಮೆತ್ತೆಂದರೆ ಮೆತ್ತು
ಛತ್ರದಲ್ಲಿ ಊಟ ಮಠದಲ್ಲಿ ನಿದ್ರೆ
ಹೊತ್ತು ಮೀರಿದ ಮಾತು ತನಗೇ ಕುತ್ತು ತಂತು
ತಾರೇ ಬಡ್ಡೀ ನೀರಾ ಅಂದ್ರೆ ತರುವೆನು ನಿಲ್ಲೊ ತಿರುಕ
ಹಿತ್ತಲ ಗಿಡ ಮದ್ದಲ್ಲ
ಕಡು ಕೋಪ ಬಂದಾಗ ತಡಕೊಂಡವನೇ ಜಾಣ
ಗಾಜಿನ ಮನೇಲಿರೋವ್ರು ಅಕ್ಕಪಕ್ಕದ ಮನೇ ಮೇಲೆ ಕಲ್ಲೆಸೆಯಬಾರದು
ತಪ್ಪು ಹೊರಿಸಿದವನಿಗೆ ಒಪ್ಪುವವನು ಯಾರು
ಅರವತ್ತಕ್ಕೆ ಅರಳು ಮರಳು
ಚಿತ್ತವಿಲ್ಲದವಳ ಒಡಗೂಟ ನಾಯ್ ಹೆಣಾನ ಹತ್ತಿ ತಿನ್ನುವಂತೆ
ಎಳ್ಳಿನಲ್ಲಿ ಎಣ್ಣೆ ಅಡಕ ಹಾಲಿನಲ್ಲಿ ಬೆಣ್ಣೆ ಅಡಕ
ದುಡಿಯೋ ತನಕ ಮಡದಿ.
ಶುಭ ನುಡಿಯೋ ಸೋಮ ಅಂದರೆ ಗೂಬೆ ಕಾಣ್ತಲ್ಲೋ ಮಾಮ ಅಂದ ಹಾಗೆ
ಅಲ್ಲದವನ ಒಡನಾಟ ಮೊಳಕೈಗೆ ಕಲ್ಲು ಬಡಿದಂತೆ
ಆಪತ್ತಿಗೆ ಹರಕೆ, ಸಂಪತ್ತಿಗೆ ಮರವು
ಹೆಣ್ಣಿನ ಬಗೆ/ಮನಸ್ಸ ಬಲ್ಲೋರಿಲ್ಲ
ಭಂಗಿ ರಸ ನೆತ್ತಿಗೇರಿ ಬಿಂಗಿಯಂತಾದ
ಆಡಿ ತಪ್ಪ ಬೇಡ ಓಡಿ ಸಿಕ್ಕ ಬೇಡ
ಮನೆಗೆ ಬೆಂಕಿ ಬಿದ್ದಾಗ ಬಾವಿ ತೋಡಿದರಂತೆ
ಮಾಡೋದೆಲ್ಲ ಅನಾಚಾರ, ಮನೆ ಮುಂದೆ ಬೃಂದಾವನ.
ಮಾಡೋದು ಅನಾಚಾರ ; ಮನೆ ಮುಂದೆ ಬೃಂದಾವನ
ನಾಯಿಯು ನಮ್ಮನ್ನು ಕಚ್ಚಿದರೆ ನಾಯಿಯನ್ನು ಕಚ್ಚಲು ನಮ್ಮಿಂದ ಆಗುವುದೇ?
ಮುಟ್ಟಿದೋರ ಮೇಲೆ ಬಿಟ್ಟೆ ನನ್ನ ಪ್ರಾಣ
ಹೆಣ್ಣಿಗೆ ಹಟವಿರಬಾರದು, ಗಂಡಿಗೆ ಚಟವಿರಬಾರದು.
ಮಂತ್ರ ತಂತ್ರ ದೈವ ಒಲ್ಲದೆ ತನಗೆ ಸ್ವಂತವಲ್ಲ
ಬೆನ್ನಹಿಂದೆ ಬಿದ್ದು (ಓಡಿ)ಬನ್ನ ಪಟ್ಟ
ಹಣವಿಲ್ಲದ ಮನುಷ್ಯ, ರೆಕ್ಕೆ ಇಲ್ಲದ ಪಕ್ಷಿಯಂತೆ.
ಸರಿದರೆ ಒತ್ತಣ್ಣ ಒತ್ತಿದರೆ ಸರಿಯಣ್ಣ
ಆಕೆಗೆ ಬುದ್ಧಿ ಹೇಳಕ್ಕೆ ಆತನ್ನ ಕರೆಸಿದರೆ, ಆತ ಹೆಂಡ್ತಿನ ಬಿಟ್ಟು ಆರು ವರ್ಷ ಆಗಿತ್ತಂತೆ.
ಊರೆಲ್ಲ ದೋಚಿಕೊಂಡು ಹೋದಮೇಲೆ ದೊಡ್ಡಿ (ಕೋಟೆ) ಬಾಗಿಲು ಹಾಕಿದರಂತೆ.
ಬೀಜ ಸಣ್ಣದಾದರೆ ಮರ ಸಣ್ಣದೋ
ಯಾರದೋ ದುಡ್ಡು; ಎಲ್ಲಮ್ಮನ ಜಾತ್ರೆ
ಇಬ್ಬರ ಜಗಳ ಮೂರನೆಯವನಿಗೆ ಲಾಭ
ಹಿಟ್ಟು ಹಳಸಿತ್ತು; ನಾಯಿ ಹಸಿದಿತ್ತು
ಓದಿ ಓದಿ ಮರುಳಾದ ಕೂಚು ಭಟ್ಟ; ಓದದೆ ಅನ್ನ ಕೊಟ್ಟ ನಮ್ಮ ರೈತ
ದಕ್ಷಿಣೆಗೆ ತಕ್ಕ ಪ್ರದಕ್ಷಿಣೆ
ಮಾಡಿದೋರ ಪಾಪ ಆಡಿದೋರ ಬಾಯಲ್ಲಿ
ಬಂಟರ ಅಬ್ಬರ ಸೇವಿನ ಗೊಬ್ಬರ
ತೂಕಡಿಸುವವನಿಗೆ ಹಾಸಿಗೆ ಹಾಸಿ ಕೊಟ್ಟ ಹಾಗೆ
ಲಕ್ಷ್ಮಿ ಚಂಚಲೆ
ಹುಚ್ಚು ಹೊಳೇ ಬರುವಾಗ ಹೂವಿನ ತೋಟ ಇದಿರೇ
ತನ್ನ ತಾನರಿತರೆ ತನ್ನರಿವೆ ಗುರು
ಇತ್ತತ್ತ ಬಾ ಅಂದ್ರೆ ಇದ್ದ ಮನೆ ಕಿತ್ಕೊಂಡರು
ಆಸೆಯೇ ದು:ಖಕ್ಕೆ ಮೂಲ
ಬಂದ ಅಥಿತಿಗೆ ಅನ್ನ ಇಕ್ಕದ ಬದುಕು ಯಾತಕ್ಕು ಬೇಡ
ಬರಿಗೈಯವರ ಬಡಿವಾರ ಬಹಳ.
ಅರವಲ್ಲದ್ದು ಮಾಡಿದರೂ ತರವಲ್ಲದ್ದು ಮಾಡಬಾರದು
ಮೂಕ ಪ್ರಾಣಿಯ ಕೊಲ್ಲದ್ದು ಜೀವಧರ್ಮ
ಶರಣರ ಬದುಕನ್ನು ಅವರ ಮರಣದಲ್ಲಿ ನೋಡು
ಇದ್ದಲ್ಲಿ ಗವುಡ ಹೋದಲ್ಲಿ ಕಿವುಡ
ಎಲ್ಲರಿಗೂ ಹಿಡಿಸುವ ಸಂಪ್ರದಾಯ ಯಾವುದೂ ಇಲ್ಲ.
ಮದುವೆ ಆಗೋ ಗ೦ಡಿಗೆ ಅದೇ ಇಲ್ಲ ಅ೦ದ೦ಗೆ.
ಹಂದಿ ತನ್ನ ಚಂದಕ್ಕೆ ವೃಂದಾವನ ಆಡ್ಕೊಣ್ತು
ನುಡಿಯಿರದವನಿಗೆ ಇಲ್ಲವು ನಾಡೂ
ಹತ್ತರ ಮಾತು ರುಚಿಯಲ್ಲ
ಇಲಿ ಸಿಕ್ಕರೆ ಬೆಕ್ಕು ಆಗುವುದು ಹುಲಿ.
ಅತ್ತೆ ಮಾಡಿದ್ದು ಅಡಕಲಗೂಡಿಗೆ ಸೊಸೆ ಮಾಡಿದ್ದು ಬೆಳಕಿಗೆ
ಇದ್ದವರು ಇದ್ದಹಾಗೆ ಸಿದ್ಧಾ ದೇವಿಗೆ ಸಿಡಿಲು ಬಡೀತು
ದಾನ ದಾನಕ್ಕಿಂತ ನಿದಾನ ದೊಡ್ಡದು
ಹಾರೋ ಹಕ್ಕಿ ಪುಕ್ಕ ಎಣಿಸಿದಂತೆ
ತಲೆ ಸೀಳಿದರೆ ಎರಡಕ್ಷರ ಇಲ್ಲ
ಗಾಜಿನ ಮನೇಲಿರುವರು ಅಕ್ಕ ಪಕ್ಕದ ಮನೆ ಮೇಲೆ ಕಲ್ಲೆಸೆಯಬಾರದು.
ಭಾವಿಗೆ ಬಿದ್ರೆ,ಸಾಲಿಗ್ರಾಮ ಸಿಗ್ತಂತೆ
ಎತ್ತು ಚಲೋದಾದರೆ ಇದ್ದ ಊರಲ್ಲೇ ಗಿರಾಕಿ.
ಆವು ಕಪ್ಪಾದ್ರೆ ಹಾಲು ಕಪ್ಪೇನು
ಹಿಡಿದ ಕೆಲಸ ಕೈ ಹತ್ತಲ್ಲ, ತಿಂದ ಅನ್ನ ಮೈ ಹತ್ತಲ್ಲ
ತಟದಲ್ಲಾಗಲೀ ಮಠದಲ್ಲಾಗಲೀ ಹಟದ ಜಂಗಮನ ಕಾಟ ತಪ್ಪುವುದಿಲ್ಲ
ಮಳೆಗಾಲದೇಲಿ ಚಿಗಿಯೂದಿಲ್ಲ ಬೇಸಿಗೇಲಿ ಒಣಗೂದಿಲ್ಲ
ಮಾತಿಗೆ ಸಿಕ್ಕಿದರೆ ಮಳೆಗೆ ಸಿಕ್ಕಂತೆ.
ತಡವ ಮಾಡುವವನ ಗೊಡವೆ ಬೇಡ
ಹಂಪ್ಯಾಗ ಇರೂದಕ್ಕಿಂತ ತನ್ನ ಕೊಂಪ್ಯಾಗ ಇರೂದ್ ಲೇಸು.
ಇಲಿಯಾಗಿ ನೂರುದಿನ ಬಾಳೋದಕ್ಕಿಂತ ಹುಲಿಯಾಗಿ ಮೂರು ದಿನ ಬಾಳೋದು ಲೇಸು
ಕಂಡವರ ಮಕ್ಕಳನ್ನು ಬಾವಿಯಲ್ಲಿ ದೂಡಿ ಆಳ ನೋಡಿದ ಹಾಗೆ
ಸ್ವಧರ್ಮ ತಪ್ಪುದ್ರೂ ಅಧರ್ಮ ಮಾಡಬಾರ್ದು
ಇರಲಾರದೆ ಇರುವೆ ಬಿಟ್ಟುಕೊಂಡು ಕಿರುಗೂರಿಗೆ ಹೋದರಂತೆ ಕಣಿ ಕೇಳುವುದಕ್ಕೆ
ಬಸುರಲ್ಲಿ ಬಂದ ಕೂಸು ಮುದ್ದು
ತರಗು ತಿನ್ನುವವನ ಮನೆಗೆ ಹಪ್ಪಳಕ್ಕೆ ಹೋದರು
ಕೂಸು ಹುಟ್ಟೋಕೆ ಮುಂಚೆ ಕುಲಾವಿ ಹೊಲಿಸಿದರು
ಬೊಗಳುವ ನಾಯಿ ಕಚ್ಚುವುದಿಲ್ಲ
ಅಬದ್ಧಕ್ಕೆ ಅಪ್ಪಣೆಯೇ ಅಂದ್ರೆ ಬಾಯಿಗೆ ಬಂದಷ್ಟು
ನಿಯತ್ತಿಲ್ಲದೋರಿಗೆ ಬರಕತ್ತಿಲ್ಲ
ಗುಬ್ಬಿಯ ಮೇಲೆ ಬ್ರಹ್ಮಾಸ್ತ್ರ
ಕಾಯ ಕಮಲವೇ ಸೆಜ್ಜೆ ಜೀವ ರತುನವೇ ಜ್ಯೋತಿ
ಜೀನ ಗಳಿಸಿದ ;ಜಾಣ ತಿಂದ
ಹಣ್ಣು ತಿಂದೋನು ನುಣುಚಿ ಕೊಂಡ ಸಿಪ್ಪೆ ತಿಂದೋನು ಸಿಗ್ಹಾಕೊಂಡ
ಎಡದ ನೆತ್ತಿಗೆ ಬಡಿದರೆ ಬಲದ ನೆತ್ತಿಗೆ ತಾಕಿತು
ಹಣ ಅಂದರೆ ಹೆಣಾನೂ ಬಾಯಿ ಬಿಡುತ್ತದೆ
ಕೊಟ್ಟ ಹೆಣ್ಣು ಕುಲದಿಂದ ಹೊರಗೆ
ಆಕಳು ಕಪ್ಪಾದ್ರೆ ಹಾಲು ಕಪ್ಪೇನು
ದನಿಯಿದ್ದವರೂ ಅತ್ತರೂ ಚಂದ ನಕ್ಕರೂ ಚಂದ
ಎಲ್ಲಾರ ಮನೆ ದೋಸೆನೂ ತೂತೆ.
ಉಂಡಿದ್ದು ಹೊಟ್ಟೆಗಾಗಿ, ಮಾಡಿದ್ದು ಬಟ್ಟೆಗಾಗಿ.
ಮೂಗಿಗಿ೦ತ ಮೂಗುತ್ತಿ ಭಾರ.
ಅನ್ನ ಇಕ್ಕಿ ಸಾಕು ಅನ್ನಿಸ ಬಹುದು, ದುಡ್ಡು ಕೊಟ್ಟು ಸಾಕು ಅನ್ನಿಸೋಕಾಗಲ್ಲ
ಸರಿಸರಿಯಾಗಿದ್ರೆ,ಪರಿಪರಿ ನೆಂಟರು
ಸುಡುವ ಮನೆಯ ಗಳ ಹಿರಿದಂತೆ
ತಾನು ತಿಂಬೋದು ಪಲ್ಲೆ ಸೊಪ್ಪು
ಚಿಂತೆ ಇಲ್ಲದವನಿಗೆ ಸಂತೆಲು ನಿದ್ದೆ.
ಲೋಕ ತಿಳೀಬೇಕು ಲೆಕ್ಕ ಕಲೀಬೇಕು.
ಬಹುಮನದ ಹಾದಿ ಕೈಗೊಂಡರೆ ಸುಖವಿಲ್ಲ
ಕೋಡಗ ಲಂಕೆಯ ಸುಡುವಾಗ ರಾವಣ ನಾಡ ಕಾಯ್ದಿದ್ದ
ಕೇಡು ಬರೋ ಕಾಲಕ್ಕೆ ಬುದ್ಧಿಗೇಡು
ಒಂದೊಂದು ಕಾಲಕ್ಕೆ ಒಂದೊಂದು ಪರಿ
ಮುದಿ … ಮಹಾ ಪತಿವ್ರತೆ (ವೃದ್ಧ ನಾರೀ ಪತಿವ್ರತಾ)
ಕಂಡ ಮನೆಗೆ ಕಳ್ಳ ಬಂದ , ಉಂಡ ಮನೆಗೆ ನೆಂಟ ಬಂದ
ತಮ್ಮ ಕಲಹಕ್ಕೆ ಐವರು ಪರರ ಕಲಹಕ್ಕೆ ನೂರಾ ಐವರು
ಹೆಂಡ್ರ ಅವಾಂತರ ತಡಿಲಾರದೆ ಗಂಡ ದೇಶಾಂತರ ಹೋದ
ಮೆತ್ತಗಿದ್ದವರನ್ನು ಮೊಣಕೈಯಲ್ಲಿ ಗುದ್ದಿದರು
ಪ್ರಸ್ತಕ್ಕಿಲ್ಲದ ಮಾತು ಹತ್ತುಸಾವಿರವಿದ್ದೇನು
ಆರು ಕೊಟ್ಟರೆ ಅತ್ತೆ ಕಡೆ, ಮೂರು ಕೊಟ್ಟರೆ ಸೊಸೆ ಕಡೆ.
ಮಂತ್ರಕ್ಕೆ ಮಾವಿನ ಕಾಯಿ ಉದುರುತ್ತದೆಯೆ ?
ತಿಪ್ಪೇ ಮೇಲೇ ಮುಪ್ಪಾದ ಕುಂಬಾರ ತಿಪ್ಪ
ಈರುಳ್ಳಿ, ಬೆಳ್ಳುಳ್ಳಿಯನ್ನು ತಿನ್ನು, ರೋಗವನ್ನು ದೂರವಿಡು.
ಅರ್ತಿಗೆ ಬಳೆ ತೊಟ್ಟು ಕೈ ಕೊಡವಿದರೆ ಹೋದೀತೆ
ಛೀ ಅಂತಾರೆ ಅಂಬ್ಲಿ ಬುತ್ತಿ ಕಟ್ಟು ಅಂದ.
ಅತಿಯಾದರೆ ಅಮೃತವೂ ವಿಷ
ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣ ಸಂಕಟ.
ಇದ್ದೂ ಉಣ್ಣದವನ ಬಾಯಲ್ಲಿ ಕಡೆಗೆ ಮಣ್ಣು ಬಿತ್ತು
ಹೇಳೋದು ಶಾಸ್ತ್ರ,ತಿನ್ನೋದು ಬದನೆಕಾಯಿ
ತತ್ವಮಸಿ ಅಂತ ಅನ್ನೋದ್ ಕಲಿ ಅಂದ್ರೆ ತುತ್ತು ಸವಿ ಅಂತ ಉಣ್ನೋದ್ ಕಲ್ತ
ಕ೦ಡವರ ಮಕ್ಕಳನ್ನು ಭಾವಿಗೆ ತಳ್ಳಿ ಆಳ ನೋಡುವ ಬುದ್ಧಿ.
ಒಕ್ಕುವುದು ರೈತನ ಗುಣ ನೆಕ್ಕುವುದು ನಾಯಿಯ ಗುಣ
ಜಲ ಶೋಧಿಸಿ ನೀರು ತರಬೇಕು , ಕುಲ ಶೋಧಿಸಿ ಹೆಣ್ಣು ತರಬೇಕು .
ಬೆಂಕಿ ಇಲ್ಲದೆ ಹೊಗೆ ಏಳಲ್ಲ
ಶಿವಾ ಅರಿಯದ ಸಾವು ಇಲ್ಲ ಮನ ಅರಿಯದ ಪಾಪ ಇಲ್ಲ
ಪುಣ್ಯದ ಪಾಲು ನನಗಿರಲಿ ಅಂದ
ದಾರಿಯಲ್ಲಿ ಹೋಗುತ್ತಿದ್ದ ಮಾರಿಯನ್ನು ಕರೆದು ಮನೆಗೆ ಸೇರಿಸಿಕೊಂಡಂತೆ
ಬರೋಳನ್ನು ನೆಚ್ಚಿ ಇರೋಳನ್ನು ಬಿಟ್ಟ
ಬರಿಗೆಟ್ಟ ಬದುಕಿಗಿಂತ ಕೊಂದು ತಿನ್ನೊ ಮಾರಿ ಲೇಸು
ತನ್ನ ಸುಖವೇ ಲೋಕದ ಸುಖ, ತನ್ನ ಕಷ್ಟವೇ ಲೋಕದ ಕಷ್ಟ
ಸಾವಿರ ಸುಳ್ಳು ಹೇಲಿ ಒಂದು ಮದುವೆ ಮಾಡು
ನೆಚ್ಚಿನೆಮ್ಮೆ ಕೋಣನನ್ನೀಯಿತು
ಕೆಟ್ಟು ಪಟ್ಟಣ ಸೇರು ಇಟ್ಟು ಹಳ್ಳಿ ಸೇರು
ಅತ್ತೂ ಕರೆದೂ ಔತಣ ಮಾಡಿಸಿಕೊಂಡಂತೆ
ತೊಟ್ಟಿಲನ್ನು ತೂಗುವ ಕೈ ಜಗತ್ತನ್ನೇ ತೂಗಬಲ್ಲುದು
ಶೆಟ್ಟಿ ಸಿಂಗಾರ ಆಗೋದರೊಳಗೆ ಪಟ್ಟಣ ಹಾಳಾಯ್ತು
ಹರೆ ಬಡಿದರೂ ಮದುವೆ ಮೊರ ಬಡಿದರೂ ಮದುವೆ
ಪದದೊಳಿಲ್ಲ ತಾನರ್ಥದೊಳಿಲ್ಲವು
ಮಕ್ಕಳಿಸ್ಕೂಲ್ ಮನೇಲಲ್ವೇ? (ಕೈಲಾಸಂ)
ಹತ್ತು ಕಟ್ಟೋ ಕಡೆ ಒಂದು ಮುತ್ತು ಕಟ್ಟು.
ಅಳಿಲು ಏರಿದರೆ ಅರಳಿಮರ ಅಲ್ಲಾಡೀತೆ ?
ಹುಟ್ಟಿಸಿದ ದೇವರು ಹುಲ್ಲು ಮೇಯಿಸುತ್ತಾನೆಯೆ ?
ಬೆಂಕಿಗೆ ಕರಗದ್ದು ಬಿಸಿಲಿಗೆ ಕರಗೀತೇ
ಹೆಣ್ಣು ಹೊನ್ನು ಮಣ್ಣು ಇನ್ನೊಬರ ಕೈ ಸೇರಿದರೆ ಹೋದಂತೆ
ಮಂಗನ ಕೈಗೆ ಮಾಣಿಕ್ಯ ಕೊಟ್ಟ ಹಾಗೆ
ಮಾನವನಾದ ಮೇಲೆ ಮೂರು ಆಕ್ಷರ ಮೊದಲು ಕಲಿ.
ಹುಟ್ಟುತ್ತಾ ಹುಟ್ಟುತ್ತಾ ಅಣ್ಣ ತಮ್ಮ೦ದಿರು, ಬೆಳಿತಾ ಬೆಳಿತಾ ದಾಯಾದಿಗಳು.
ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ.
ಊರಿಗೆ ದೊರೆ ಆದರೂ ತಾಯಿಗೆ ಮಗನೆ.
ವಿದ್ಯೆ ಇಲ್ಲದವನು ಹದ್ದಿಗಿಂತಲೂ ಕಡೆ
ಹಾಲಿಗೆ ಹುಳಿ ಹಿಂಡಿದರೆ ಮೊಸರು, ಮಣ್ಣಿಗೆ ನೀರು ಹಾಕಿದರೆ ಕೆಸರು.
ನಮ್ಮಬುದ್ಧಿ ಪರರ ಕೈಯಲ್ಲಿದ್ದಂತೆ.
ಆಶ್ಲೇಷ ಮಳೆ , ಈಸಲಾರದ ಹೊಳೆ.
ಸುಳ್ಳನ ಮಾತು ಕೆಸರೊಳಗೆ ಮುಳ್ಳು ತುಳಿದಂತೆ
ಎದೆಎದೆಯನು ಪಿಸು ಮಾತೊಳಗರಳಿಸಿ ಮುದ ಹರಡುವ ಕಲೆ ಋಷಿ ಬಲ್ಲ.
ಸಾವಿರ ಕುದುರೆ ಸರದಾರ, ಮನೆ ಹೆಂಡತಿ ಕಾಸ್ತಾರ
ಕಟ್ಟಿದ ಗೂಟ , ಹಾಕಿದ ಹಲ್ಲು. ಉಂಡರೆ ಉಬ್ಬಸ, ಹಸಿದರೆ ಸಂಕಟ .
ಕೊಡದ ಲೋಭಿ ಮಾತು ಕೊಡಲಿ ಪೆಟ್ಟು
ರಾಗಿ ಇದ್ರೆ ರಾಗ ರಾಗಿ ಇಲ್ದಿದ್ರೆ ರೋಗ
ತಿರುದುಂಬುವುದಕ್ಕೆ ಬೀದಿ ಹಂಚಿಕೊಂಡ ಹಾಗೆ
ಮಾತು ಆಡಿದರೆ ಹೋಯಿತು, ಮುತ್ತು ಒಡೆದರೆ ಹೋಯ್ತು.
ಶಂಖದಿಂದ ಬಿದ್ದರೆ ತೀರ್ಥ
ಕೋಪದಲ್ಲಿ ಕೊಯ್ದ ಮೂಗು ಶಾಂತವಾದ ಮೇಲೆ ಬರುತ್ತದೆಯೆ ?
ಪಾಪಿ ಸಮುದ್ರ ಹೊಕ್ಕರು ಮೊಣಕಾಲುದ್ದ ನೀರು
ಬೀಳು ಭೂಮಿಗೆ ಬೀಜ ದಂಡ
ತಲೆಗೆ ಎಣ್ಣೆ ಇಲ್ಲ ತನು ಮೃಗನಾಭಿ ಬೇಡಿತು
ತಾಯಂತೆ ಕರು ನಾಯಂತೆ ಬಾಲ
ಇದ್ದ ಕಾಲದಲ್ಲಿ ಅಟ್ಟುಣ್ಣ ಬೇಕು
ಸದಾಚಾರಣೆಯ ಉದಾಹರಣೆಯೇ ಉತ್ತಮವಾದ ಉಪದೇಶ.
ಎಲ್ಲ ಕೆಡುಕಿಗೂ ಮೂಲ ಹೊಟ್ಟೆಕಿಚ್ಚು.
ನಾಯಿ ಮೊಲೇಲಿ ಖಂಡುಗ ಹಾಲಿದ್ದರೇನು, ದೇವರಿಗಿಲ್ಲ ದಿಂಡರಿಗಿಲ್ಲ
ಅಡವಿಯ ದೊಣ್ಣೆ ಪರದೇಸಿಯ ತಲೆ
ಮೇಲೆ ಬಸಪ್ಪ ಒಳಗೆ ವಿಷಪ್ಪ
ನಾಯಿ ಬೊಗಳಿದರೆ ದೇವಲೋಕ ಹಾಳಾಗುತ್ತದೆಯೆ ?
ಕೃತಿಯಿಲ್ಲದ ಮಾತು, ಕಸ ಬೆಳೆದ ತೋಟವಿದ್ದಂತೆ.
ದಾರವಿದ್ದರೆ ಮುತ್ತು ಹಾರವೆಂದನಿಸಿತ್ತು
ಏನೂ ಇಲ್ಲದವಗೆ ಭಯವಿಲ್ಲ
ಉಪ್ಪು ತಿಂದ ಮನೆಗೆ ಎರಡು ಬಗೆಯ ಬಂದ
ಒಂದು ಹೊತ್ತು ಉಂಡವ ಯೋಗಿ ಎರಡು ಹೊತ್ತು ಉಂಡವ ಭೋಗಿ ಮೂರು ಹೊತ್ತು ಉಂಡವ ರೋಗಿ ನಾಲ್ಕು ಹೊತ್ತು ಉಂಡವ ಎತ್ತುಕೊಂಡು ಹೋಗಿ
ಬೇಲಿಯೇ ಎದ್ದು ಹೊಲ ಮೇದಂತೆ
ಆತುರಕ್ಕೆ ಅಜ್ಜಿ ಮೈನೆರೆದಳು
ನಿಜ ಆಡಿದರೆ ನಿಷ್ಠೂರ
ಅರೆಗೊಡದ ಅಬ್ಬರವೇ ಬಹಳ.
ಆಷಾಡದ ಗಾಳಿ ಬೀಸಿ ಬೀಸಿ ಬಡಿವಾಗ, ಹೇಸಿ ನನ್ನ ಜೀವ ಹೆಂಗಸಾಗಬಾರದೇ
ಲಕುಮಿ ತೊಲಗಿದ ಬಳಿಕ ಕುಲ ವೀರವಿದ್ದು ಫಲವಿಲ್ಲ
ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದಂತೆ
ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು
ಉಂಡದ್ದೇ ಉಗಾದಿ , ಮಿಂದದ್ದೇ ದೀವಳಿಗೆ , ಹೊಟ್ಟೆಗಿಲ್ಲದ್ದೇ ಏಕಾದಶಿ.
ಬೆಕ್ಕಿಗೆ ಚೆಲ್ಲಾಟ: ಇಲಿಗೆ ಪ್ರಾಣಸಂಕಟ
ಅಳೋ … ಮೇಲೆ ಗಳು ಬಿತ್ತು
ಕೈ ತೋರಿಸಿ ಅವಲಕ್ಷಣ ಅನ್ನಿಸಿಕೊಂಡರಂತೆ
ಸಂಕಟ ಬಂದಾಗ ವೆಂಕಟರಮಣ
ತುಂತುರು ಮಳೆಯಿಂದ ತೂಬು ಒಡೆದೀತೆ?
ಮನೆ ತುಂಬ ಮುತ್ತಿದ್ದರೆ …ಗೂ ಪೋಣಿಸಿಕೊಂಡರಂತೆ
ನೀರಿಳಿಯದ ಗಂಟಲಲ್ಲಿ ಕಡುಬು ತುರುಕಿದಂತೆ
ಕೀಲು ಸಣ್ಣದಾದರೂ ಗಾಲಿ ನಡೆಸುತ್ತದೆ
ಬೆಳ್ಳಗಿರುವುದೆಲ್ಲಾ ಹಾಲಲ್ಲ.
ಗುರುಕೊಟ್ಟ ಜೋಳಿಗೆ ಅಂತ ಗೂಟಕ್ಕೆ ಹಾಕಿದರೆ ಊಟ ಹಾಕೀತೆ?
ಹತ್ತು ಕಟ್ಟುವಲ್ಲಿ ಒಂದು ಮುತ್ತು ಟು.
ಅರೆಪಾವಿನವರ ಅಬ್ಬರ ಬಹಳ
ನಿನ್ನದಲ್ಲ ಸರ್ವ ಆಸ್ತಿ, ಒಳ್ಳೆಯದಲ್ಲ ಗರ್ವ ಜಾಸ್ತಿ.
ಹತ್ತು ಮಕ್ಕಳ ತಾಯಾದರೂ ಸತ್ತ ಮಗನ್ನ ಮರೆಯೊದಿಲ್ಲ
ಇಮ್ಮನದಿಂದ ಸುಮ್ಮನೆ ಕೆಟ್ಟೆ (ಕೇಡು)
ಹತ್ತು ತಿಂಗಂಳ ಪುಟ್ಟ ಹಟ್ಟೆಲ್ಲಾ ಹೆಜ್ಜೆ
ಒಂದು ಬಿಟ್ಟು ಇನ್ನೊಂದು ಕಟ್ಕೊಂಡ್ರಂತೆ
ಬಾಣಲೆಯಿಂದ ಬೆಂಕಿಗೆ
ಹೆಣ್ಣಿನ ಸೊಬಗನು ಕಣ್ಣಾರೆ ಕಂಡು ಬಯಸದ ಅಣ್ಣಗಳು ಅದಾರು
ಯೋಗಿ ತಂದದ್ದು ಯೋಗಿಗೆ, ಭೋಗಿ ತಂದದ್ದು ಭೋಗಿಗೆ
ಬೆಟ್ಟ ಅಗೆದು ಇಲಿ ಹಿಡಿದಂತೆ
ಹುಚ್ಚುಮುಂಡೆ ಮದುವೇಲಿ ಉಂಡವನೇ ಜಾಣ
ಮಾಡಿದ ಕರ್ಮ ಬೆನ್ನಾಡಿ ಬಂತು
ಕಾಲಿನದು ಕಾಲಿಗೆ; ತಲೆಯದು ತಲೆಗೆ
ಹೊನ್ನಿನ ಶೃತಿ ಕೇಳಿ ಎಂಥೆಂಥಾವರೆಲ್ಲ ಭ್ರಮೆಗೆ ಬಿದ್ದರು
ಆನೆ ಬರುವುದಕ್ಕು ಮುನ್ನ ಗಂಟೆ ಸದ್ದು
ಹನಿ ಹನಿ ಸೇರಿದರೆ ಹಳ್ಳ, ತೆನೆ ತೆನೆ ಸೇರಿದರೆ ಬಳ್ಳ.
ಕೊಡಲಾರದ ಹೆಣ್ಣಿಗೆ ತೆರವು ಕೇಳಿದರಂತೆ
ಸಿಟ್ಟು ಬಂದರೆ ಪಡಿ ಹಿಟ್ಟು ಮುಕ್ಕು
ಹೊಟ್ಟೆ ತುಂಬಿದ ಮೇಲೆ ಹಿಟ್ಟೂ ಕಲ್ಲು
ಹಣ ಅಂದ್ರೆ ಹೆಣವೂ ಬಾಯಿ ಬಿಡ್ತದೆ
ಹುಟ್ಟಿದಾಗ ಬಂದದ್ದು ಹೂತಾಗ ಹೋದೀತೇನು
ಪುಣ್ಯ ಉಂಡುತೀರಿತು, ಪಾಪ ತಿಂದು ತೀರಿತು
ಭ೦ಗಿದೇವರಿಗೆ ಹೆ೦ಡುಗುಡುಕ ಪೂಜಾರಿ.
ಹಾರ್‍ಸೋನೋ ತೀರ್‍ಸೋನೋ.
ಅಕ್ಕನ ಹಗೆ ಬಾವನ ನೆಂಟು
ತರಬಲ್ಲವನ ಹೆಂಡತಿ ಅಡಜಾಣೆ
ಸಾವಿರ ಕುದರೆ ಸರದಾರ ಮನೇ ಹೆಣ್ತಿಗೆ ಪಿಂಜಾರ
ಕುರಿ ಕೊಬ್ಬಿದಷ್ಟೂ ಕುರುಬನಿಗೇ ಲಾಭ
ಈಚಲ ಮರದ ಕೆಲಗೆ ಕುಳಿತು ಮಜ್ಜಿಗೆ ಕುಡಿದ ಹಾಗೆ
ತಿಳಿದವ ಮಾಡ್ಯಾನು ನಳಪಾಕವ
ಮೊಂಡ ಮಾವನಿಗೊಬ್ಬ ಭಂಡ ಅಳಿಯ
ದುಡಿದದ್ದು ಉಂಡೆಯೋ ಪಡೆದದ್ದು ಉಂಡೆಯೋ
ಕೋಣೆಯ ಕೂಸು ಕೊಳೆಯಿತು; ಓಣಿಯ ಕೂಸು ಬೆಳೆಯಿತು
ಆಸೆಯಿಲ್ಲದವನು ದೇಶಕ್ಕೆ ಶ್ರೀಮಂತ.
ಹಾಳೂರಿಗೆ ಉಳಿದೋನೇ ಗೌಡ, ಬೆಂಗಳೂರಿಗೆ ಬಂದೋನೇ ಬಹದ್ದೂರ
ಎತ್ತಲೊ ಸಮತೆ ತೊಟ್ಟು ಪದವಿ ಮುಟ್ಟು ಇದ್ದೂ
ಆನೆಯ ಹೊಟ್ಟೆಗೆ ಅಂಬಲಿ ಬಿಟ್ಟ ಹಾಗೆ
ಕೆಲಸವಿಲ್ಲದ ಬಡಗಿ ಮಗುವಿನ ಕು೦ಡೆ ಕೆತ್ತಿದನ೦ತೆ.
ಆಪತ್ತಿಗಾದವನೇ ನೆಂಟ
ತಾನೂ ತಿನ್ನ, ಪರರಿಗೂ ಕೊಡ.
ಸಾದೆತ್ತಿಗೆ ಎರಡು ಹೇರು (ಹೊರೆ)
ಎಂಜಲ ತಿಂದರೂ ಅಂಜದೆ ತಿನ್ನು
(ಅವರು) ಚಾಪೆ ಕೆಳಗೆ ತೂರಿದರೆ (ನೀನು) ರಂಗೋಲಿ ಕೆಳಗೆ ತೂರು.
ತಾಯಂತೆ ಮಕ್ಕಳು ನೂಲಂತೆ ಸ್ಯಾಲೆ
ದೀನನ ಬೇಡಿ ಬಳಲಿದರೆ ಆತ ಏನು ಕೊಟ್ಟಾನು
ಭಂಗಿ ದೇವರಿಗೆ ಹೆಂಡಗುಡುಕ ಪೂಜರಿ
ಸೀರೆ ಗಂಟು ಬಿಚ್ಚೋವಾಗ ದಾರದ ನಂಟು ಯಾರಿಗೆ ಬೇಕು?
ಯೋಗ ಇದ್ದಷ್ಟೇ ಭೋಗ
ಬಿಸಿಯಾದರೆ ಮಾತ್ರ ಬೆಣ್ಣೆ ಕರಗುವುದು.
ಲಾಭವಿಲ್ಲದ ವ್ಯಾಪಾರ ಕತ್ತೆ ಮೈ ಪರಚಿದಂಗೆ
ಆಪತ್ತಿಗಾದವನೇ ನೆಂಟ ಕೆಲಸಕ್ಕಾದವನೇ ಭಂಟ
ಅಯ್ಯಾ ಎಂದರೆ ಸ್ವರ್ಗ; ಎಲವೋ ಎಂದರೆ ನರಕ
ಮಾಡಿದರೆ ಮನೆ ; ಹೂಡಿದರೆ ಒಲೆ
ಪರದಾನಿ ಹೂಸು ಕುಡಿದ
ಹೆಣ್ಣಿನ ತಂದೆ ಹಣ್ಣಾಗ್ತಾನೆ .ಗಂಡಿನ ತಂದೆ ಗುಂಡಾಗ್ತಾನೆ
ಜಗವೆಲ್ಲ ನಾ ಬಲ್ಲೆ ಅನ್ನೊ ಮಾತು ಎಲ್ಲರಿಗು ಸಲ್ಲದು
ಸಲುಗೆ ಕೊಟ್ಟರೆ ಸಾಕೂ ಹೆಗ್ಗಣವೂ ಸಹ ಏರುವುದು ಹೆಗಲಿಗೆ.
ಶಸ್ತ್ರದಿಂದಾದ ಗಾಯ ಮಾಯುತ್ತದೆ, ನಾಲಿಗೆಯಿಂದಾದ ಗಾಯ ಮಾಯುವುದಿಲ್ಲ.
ಕಲ್ಲ ನಾಗರ ಕಂದರೆ ಹಾಲೆರೆವರು ದಿಟ ನಾಗರ ಕಂಡರೆ ಕೊಲ್ಲೆಂಬರು
ಎಣ್ಣೆ ಬರುವಾಗ ಗಾಣ ಮುರೀತು.
ನೋಡಿ ನಡೆದಾಗ ಎಡವೋದು ತಪ್ಪುತ್ತೆ.
ಮನೇಗೆ ಬೆಂಕಿ ಬಿದ್ದಾಗ ಭಾವಿ ತೋಡಕ್ಕೆ ಶುರು ಮಾಡಿದರಂತೆ
ಕೂಟಸ್ಥ ಇಲ್ದೋನ ಓದು ಗಿಳಿ ಕಲ್ತ ಪಾಠದಂತೆ
ಬಡವರ ಮನೆ ಊಟ ಚೆನ್ನ, ದೊಡ್ಡವರ ಮನೆ ನೋಟ ಚೆನ್ನ
ಮುಳ್ಳಿನಿಂದ ಮುಳ್ಳು ತೆಗೆ, ಹಗೆಯಿಂದ ಹಗೆ ತೆಗೆ
ದಾಯವಾಗಿ(=ದಾನವಾಗಿ) ಸಿಕ್ಕಿದರೆ, ನನಗೆ ಒಂದಿರಲಿ ನಮ್ಮಪ್ಪನಿಗೆ ಒಂದಿರಲಿ
ಅಮ್ಮನ ಮನಸ್ಸು ಬೆಲ್ಲದ ಹಾಗೆ, ಮಗಳ ಮನಸ್ಸು ಕಲ್ಲಿನ ಹಾಗೆ
ಬೆರಳು ತೋರಿಸಿದರೆ ಅಂಗೈ ನುಂಗಿದಂತೆ.
ಗೋರ್ಕಲ್ಲ ಮೇಲೆ ಮಳೆಗರೆದಂತೆ
ಸಾವಿರ ಕೊಟ್ಟರೂ ಸವತಿ ಮನೆ ಬೇಡ
ತಾಳಕ್ಕೆ ತಕ್ಕ ಮೇಳ
ಇದ್ದದ್ದನ್ನು ಇದ್ದಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದರಂತೆ
ಬೆಣ್ಣೆಯೊಳಗಿನ ಕೂದಲು ತೆಗೆದಂತೆ
ಮಳೆ ಹುಯ್ದರೆ ಕೇಡಲ್ಲ, ಮಗ ಉ೦ಡರೆ ಕೇಡಲ್ಲ.
ಕ೦ತೆಗೆ ತಕ್ಕ ಬೊ೦ತೆ.
ರಾಮೆಶ್ವರಕ್ಕೆ ಹೋದ್ರೂ ಶನೀಶ್ವರನ ಕಾಟ ತಪ್ಪಲಿಲ್ಲ
ಎ೦ಜಲು ಕೈಯಲ್ಲಿ ಕಾಗೆ ಓಡಿಸದ ಬುದ್ಧಿ.
ಉಂಡ ಮನೆ ಜಂತೆ ಎಣಿಸಬಾರದು
ಬಾಯಿದ್ದೋರು ಬರಗಾಲದಲ್ಲೂ ಬದುಕಿದರು
ಭಟ್ಟನ ಮಗಳಿಗೆ ಹುಟ್ಟಲು ದಿನವಿಲ್ಲ
ಹಾಗಲ ಕಾಯಿಗೆ ಬೇವಿನ ಕಾಯಿ ಸಾಕ್ಷಿ
ತನ್ನ ಮರ್ಯಾದೆ ಕೆಟ್ಟವ ಪರರ ಮರ್ಯಾದೆ ಇಟ್ಟಾನೆ?
ಬಾಳಲಾರದವ ಪಾಠ ಕಲಿತ
ಅಜ್ಜಿಗೆ ಅರಿವೆಯ ಚಿಂತೆ, ಮಗಳಿಗೆ ಗಂಡನ ಚಿಂತೆ, ಮೊಮ್ಮಗಳಿಗೆ ಕಜ್ಜಾಯದ ಚಿಂತೆ
ಕಂಡವರ ಕಂಡು ಕೈಕೊಂಡ ಕೆಲಸ ಕೆಂಡವಾಯ್ತು
ಆಲಸಿ-ಮುಂಡೇದಕ್ಕೆ ಎರಡು ಖರ್ಚು, ಲೋಭಿ-ಮುಂಡೇದಕ್ಕೆ ಮೂರು ಖರ್ಚು
ಕತ್ತಿ ವೈರಿ ಕೈಯಲ್ ಕೊಟ್ಟು ಬೆನ್ನ ಮಾಡಿ ನಿಂತನಂತೆ
ತಾ ಅನ್ನೋದು ನಮ್ಮ ತಲತಲಾಂತರಕ್ಕೂ ಇರಲಿ, ಕೊ ಅನ್ನೋದು ನಮ್ಮ ಕುಲಕೋಟಿಗೂ ಬೇಡ
ತಿರೋಕಲ್ಲು ಗಾಳಿಯಿಂದ ಹಾರುವುದೋ
ಹಾದಿ ಹಣವಡ್ಡ ಹಾದರಗಿತ್ತಿ ಮನೆ ಯಾವುದು.
ಎತ್ತು ಈಯಿತು ಅನ್ದರೆ ಕೊಟ್ಟಿಗೆಗೆ ಕಟ್ಟು ಎನ್ದರಂತೆ
ಮಂದ್ಯಾಗ ಮಚ್ಚೀಲೆ ಹೊಡೆದು ಸಂದ್ಯಾಗ ಕಾಲು ಹಿಡಿದರು
ಹೆಣ್ಣಿಂದ ರಾವಣ ಕೆಟ್ಟ ಮಣ್ಣಿಂದ ಕೌರವ ಕೆಟ್ಟ
ಉಟ್ಟರೆ ತೊಟ್ಟರೆ ಪುಟ್ಟಕ್ಕ ಚೆನ್ನ
ಚೋಟುದ್ದ ಕೂಸಿಗೆ ಗೇಣುದ್ದ ಕುಲಾವಿ.
ಬೇಲಿಯೇ ಎದ್ದು ಹೊಲ ಮೇಯ್ದಂತೆ
ಅಪ್ಪ ಗುಡಿ ಕಟ್ಟಿದರೆ ಮಗ ಕಳಸ ಇಟ್ಟ
ಬೈದು ಹೇಳಿದವರು ಬದುಕಕ್ಕೆ ಹೇಳಿದರು
ಒಂದು ಒಳ್ಳೇ ಮಾತಿಗೆ ಸುಳ್ಳೇ ಪ್ರಧಾನ
ತಿನ್ನಲು, ಉಣ್ಣಲು ಇದ್ದರೆ ಯಾವತ್ತೂ ನೆಂಟರು.
ತಾಯೀನೇ ತಿಂದೋಳು,ಅತ್ತೇನ ಬಿಟ್ಟಾಳೆಯೇ?
ಸೋದರ ಮಾವನ ಚಾಳು ತುಂಡಪುಂಡರ ಪಾಲು
ಕಣ್ಣು ಕಟ್ಟಿ ಕಾಡಲ್ಲಿ ಬಿಟ್ಟ ಹಾಗೆ
ಅಡೆ ಮಡಕೆಯಲ್ಲ ಇಡೆ ಸಟ್ಟುಗವಲ್ಲ
ಆಲಸಿ-ಮುಂಡೇದ್ಕೆ ಎರಡು ಖರ್ಚು, ಲೋಭಿ-ಮುಂಡೇದ್ಕೆ ಮೂರು ಖರ್ಚು
ಅತ್ತೆ ಮೇಲಿನ ಕೋಪ ಕೊತ್ತಿ ಮೇಲೆ
ಹಾಲು ಕುಡಿದ ಮಕ್ಕಳೇ ಬದುಕಲಿಲ್ಲ ವಿಷ ಕುಡಿದ ಮಕ್ಕಳು ಬದುಕ್ಯಾರೆ
ಕೆಲಸವಿಲ್ಲದ ಶಾನುಭೋಗ ಹಳೆ ಲೆಕ್ಕ ನೋಡಿದ ಹಾಗೆ.
ಕೆಟ್ಟ ಮೇಲೆ ಲೊಟ್ಟ
ಕೋತಿ ತಾನು ಮೊಸರನ್ನ ತಿಂದು ಮೇಕೆ ಬಾಯಿಗೆ ಒರೆಸಿತಂತೆ
ತಾಯಿ ಒಂದಾದರೂ ಬಾಯಿ ಬೇರೆ
ತಗ್ಗಿದವ ಎಂದಿಗೂ ನುಗ್ಗಾಗ
ಅಟ್ಟಿಕ್ಕಿದೋಳಿಗಿನ್ನ ಬೊಟ್ಟಿಕ್ಕಿದೋಳು ಹೆಚ್ಚು
ಸತ್ತೋರ ಮಕ್ಕಳು ಇದ್ದೋರ ಕಾಲ್ದಸೀಲಿ
ಏರಿ ಮ್ಯಾಗಿನ ಪಂಜು ನೀರೊಳಗೆ ಉರಿಯಿತು
ಮನೆ, ಮನ ಓಡೆದರೆ ಅಂಟಿಸಲಾಗದ ಕನ್ನಡಿಯಂತೆ.
ಹಿರೇ ಕುದರೆ ಚೇಷ್ಟೆ ತಾನು ಬಾಳಲಾರದೆ ವಿಧಿಯ ಬೈದಂತೆ
ಕುಂತು ತಿಂದರೆ, ಕುಡಿಕೆ ಹೊನ್ನೂ ಸಾಲದು
ಇತ್ತಿತ್ತ ಬಾ ಎಂದರೆ ಹೆಗಲೇರಿ ಕುಳಿತ.
ರೊಂಡಿಗೆ ಏಟು ಬಿದ್ರೆ ಮೊಂಡಿಗೆ ಮುಲಾಮು ಹಚ್ಚಿದರು
ಚಿಂತೆ ಇಲ್ಲದವನಿಗೆ ಸಂತೆಯಲ್ಲೂ ನಿದ್ದೆ ಬಂತು
ತೇಗಿ ತೇಗಿ ಬೀಗಿ ಬಿದ್ದ
ತಂದೆ, ತಾಯಿ ಸತ್ತರೂ ಸೋದರ ಮಾವ ಇರಬೇಕು.
ತಿಳಿದವನಾದರೂ ಮಲಮೂತ್ರ ಬಿಟ್ಟೀತೇ?
ಸಣ್ಣದಿರುವಾಗ ಕತ್ತೆಯೂ ಬಹಳ ಸುಂದರ.
ರತ್ನ ತಗೊಂಡು ಹೋಗಿ ಗಾಜಿನ ತುಂಡಿಗೆ ಹೋಲಿಸಿದರು
ಮುದಿ … ಮಹಾ ಪತಿವ್ರತೆ
ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾಯಿತು.
ತಬ್ಬಲಿ ತಬಕು ಕದ್ದು ಜಗಲೀಲಿ ಸಿಕ್ಕಿಬಿದ್ದ
ಕೋಪ ಬೀವುದೇ ಸಮತೆ
ಸೂಳೆ ಮುಪ್ಪಾಗಿ ಗೊರವಿತ್ತಿಯಾದಳು
ಅಡುಗೆ ಮಾಡಿದವಳಿಗಿ೦ತ ಬಡಿಸಿದವಳೆ ಮೇಲು.
ಆಗೊದೆಲ್ಲ ವೊಳ್ಳೆದಕ್ಕೆ
ಆಡೋದು ಮಡಿ ಉಂಬೋದು ಮೈಲಿಗೆ
ಕಣ್ಣಿಗೂ ಮೂಗಿಗೂ ಮೂರು ಗಾವುದ.
ತಿರುಕನಿಗೆ ಮುರುಕು (ಬೆಡಗು ಕೊಂಕು) ಇದ್ದಾಗ್ಯೂ ತಿರಿದುಂಬುವುದು ತಪ್ಪದು
ಆಳಾಗಬಲ್ಲವನು ಅರಸನಾಗಬಲ್ಲ.
ಹುಟ್ಟು ಗುಣ ಸುಟ್ಟರೂ ಹೊಗೊದಿಲ್ಲ
ಹುಟ್ಟು ಸಾವು ದಿಟವೇ ಆದರೂ ಹೆಜ್ಜೆ ಹೆಜ್ಜೆಗೆ ಅಂಜೂದ್ ತಪ್ಪಲಿಲ್ಲ
ತಾಳಿದವನು ಬಾಳಿಯಾನು
ತಿಂಗಳ ಬೆಳಕಾಗಿ ಬಾಳಿನಲ್ಲಿ ತಂಗಾಳಿ ಹಿಂಗದಿರಲಿ
ನಿತ್ಯ ಹೋದರೆ ನುಚ್ಚಿಗೆ ಸಮ.
ಉಗಿದರೆ ತುಪ್ಪ ಕೆಡುತ್ತದೆ, ನುಂಗಿದರೆ ಗಂಟಲು ಕೆಡುತ್ತದೆ
ಹತ್ತು ಕಟ್ಟುವಲ್ಲಿ ಒಂದು ಮುತ್ತು ಕಟ್ಟು
ಈಸಿ ನೋಡು , ಇದ್ದು ಜೈಸಿ ನೋಡು
ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು.
ಕುರುಡು ಕಣ್ಣಿಗಿಂತ ಮೆಳ್ಳೆ ಗಣ್ಣು ವಾಸಿ
ತನ್ನ ಕಾಲಿಗೆ ತಾನೇ ಶರಣು ಮಾಡಿ ಹರಸಿಕೊಂಡ ಹಾಗೆ
ಕೋತಿಯಂಥೋನು ಕೆಣಕಿದ, ಮೂತಿಗೆ ಹೆಟ್ಟಿಸಿಕೊಂಡು ತಿಣಕಿದ
ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಮುದ್ದೆ ಉಣ್ತಾ ಮಜ್ಜಿಗೆ ಓಡಾಟ
ನಮ್ಮ ದೇವರ ಸತ್ಯ ನಮಗೆ ಗೊತ್ತು.
ಮೂಕವೇದನೆಯು ಸತ್ಯಕ್ಕಿಂತ ಮೇಲು.
ಸಾಲ್ಗಾರ ಸುಮ್ಮನಿದ್ರು ಸಾಕ್ಷಿಗಾರ ಸುಮ್ಮನಿರ.
ಕರ್ಮ ಕಳೆಯುವವರೆಗೆ ಮರ್ಮದಲ್ಲಿರು
ತಾಯಿನ್ನ ನೋಡಿ ಮಗಳನ್ನ ತಕ್ಕೋ ಹಾಲನ್ನ ನೋಡಿ ಎಮ್ಮೇನ್ನ ತಕ್ಕೋ
ತರುಬಿದವಗೂ (=ಅಡ್ಡಕಟ್ಟು, ಹೊಡೆ) ಓಡಿದವಗೂ ಸರಿಪಾಲು ಕಷ್ಟ
ಕರ್ಪೂರವ ತಿಪ್ಪೇಲಿಟ್ರೂ ತನ್ನ ಸುವಾಸನೆ ಬಿಡದು.
ಉಕ್ಕಿದರೆ ಸಾರಲ್ಲ ; ಸೊಕ್ಕಿದರೆ ಹೆಣ್ಣಲ್ಲ.
ಹಿರೀಅಕ್ಕನ ಚಾಳಿ ಮನೆ ಮಕ್ಕಳಿಗೆಲ್ಲಾ
ಹೆತ್ತೋರ್ಗೆ ಹೆಗ್ಗಣ ಮುದ್ದು, ಕಟ್ಗೊಂಡೋರ್ಗೆ ಕೋಡಂಗಿ ಮುದ್ದು.
ತಟ್ಟನೆ ಬಾ ಅಂದ್ರೆ ತುಟಿ ಬಿಟ್ಟನಂತೆ
ಕೋಳಿಯ ಕಾಲಿಗೆ ಗೆಜ್ಜೆ ಕಟ್ಟಿದರೆ ತಿಪ್ಪೆ ಕೆದರುವುದನ್ನು ಬಿಟ್ಟೀತೆ?
ಓದುವಾಗ ಓದು; ಆಡುವಾಗ ಆಡು
ಅಕ್ಕಿ ಮೇಲೆ ಆಸೆ ನೆಂಟರ ಮೇಲೆ ಇಷ್ಟ.
ಉರಿಯೋ ಬೆಂಕಿಗೆ ತುಪ್ಪ ಸುರಿದ ಹಾಗೆ
ಕೊಂದ ಪಾಪ ತಿಂದು ಪರಿಹಾರ (=ಕೊಂದ ಪಾಪ/ಕರ್ಮ ತನಗೆ ಅಂಟಿಕೊಂಡು ಅದನ್ನು ತೊಡೆಯುವುದಕ್ಕೆ ಕಷ್ಟ ಅನುಭವಿಸಬೇಕಾಗುತ್ತದೆ)
ಗೌರಿ ಹಬ್ಬಕ್ಕೆ ಬಂದ ಗತಿಗೆಟ್ಟ ಅಳಿಯ
ಊರು ದೂರಾಯಿತು ಕಾಡು ಹತ್ತರಾಯಿತು
ಮನೆ ಬೆಳಗಲಿ ದೀಪ ಬೇಕು, ಮಾನವ ಬೆಳಗಲು ಅಕ್ಷರ ಬೇಕು.
ತರಗು ತಿಂಬುವುದೇ ಪರಮ ಸುಖ
ರಾವಣಾಸುರನ ಹೊಟ್ಟೆಗೆ ಅರೆ ಕಾಸಿನ ಮಜ್ಜಿಗೆ
ಬಿರಿಯಾ ಉಂಡ ಬ್ರಾಹ್ಮಣ ಭಿಕ್ಷೆ ಬೇಡಿದ
ನೆಲಕ್ಕೆ ಬಿದ್‍ದ್ರೂ ಮೀಸೆ ಮಣ್ಣಾಗಿಲ್ಲ
ಪಿಶಾಚಿ ಬಿಟ್ಟರೂ ನಿಶಾಚರ ಬಿಡ
ಸಿರಿಯಣ್ಣ ಉಳ್ಳನಕ ಹಿರಿಯಣ್ಣ ಇಲ್ಲಾದಗ ನಡಿಯಣ್ಣ
ಕೋತಿ ಕಜ್ಜಾಯ ಹಂಚಿದ ಹಾಗೆ.
ಕದ್ದು ತಿಂದ ಹಣ್ಣು, ಪಕ್ಕದ ಮನೆ ಊಟ ಎಂದೂ ಹೆಚ್ಚು ರುಚಿ
ಸಂತೆ ಸೇರೋಕೆ ಮೊದಲು ಗಂಟು ಕಳ್ಳರು ಸೇರಿದರು
ಯಾರಿಗೂ ತೋರದಂತೆ ದೈವ ತನ್ನೊಳಗೆ ಸಾರಿಹುದು ನಿಜವ
ಉಂಡೂ ಹೋದ; ಕೊಂಡೂ ಹೋದ
ಡಂಬು (=ಬೂಟಾಟಿಕೆ) ನನ್ನ ಕೇಳು, ಡಬ್ಬು ನನ್ನ ಹೆಂಡ್ರನ್ನ ಕೇಳು
ಅಪ್ಪಂತೋನಿಗೆ ಇಪ್ಪತ್ತೊಂದು ಕಾಯಿಲೆ
ಒಗ್ಗಟ್ಟಿಲ್ಲದ ಊರಲ್ಲಿ ಒಪ್ಪತ್ತೂ ಇರಬೇಡ.
ಎದ್ದವನು ಗೆದ್ದಾನು
ಸುಳ್ಳು ದೇವರಿಗೆ ಕಳ್ಳ ಪೂಜಾರಿ.
ಸಂದೀಲಿ ಸಮಾರಾಧನೆ ಮಾಡ್ದಂಗೆ
ದುಷ್ಟರಿಂದ ದೂರವಿರು
ಯಾರ ತೋಟದ ಹುಲ್ಲು ಮೇದಾದ್ರೂ ನಮ್ಮ ಕರು ದೊಡ್ಡದಾಗಲಿ.
ಗಾಳಿ ಬಂದಾಗ ತೂರಿಕೊ, ಧಾರಣೆ ಬಂದಾಗ ಮಾರಿಕೊ
ಹಾಡ್ತಾ ಹಾಡ್ತಾ ರಾಗ , ನರಳ್ತಾ ನರಳ್ತಾ ರೋಗ
ಮಳ್ಳೀ ಮಳ್ಳಿ ಮಂಚಕ್ಕೆ ಎಷ್ಟು ಕಾಲು ಅಂದ್ರೆ, ಮೂರು ಮತ್ತೊಂದು ಅಂದ್ಲಂತೆ
ಸೇರಿಗೆ ಸವ್ವಾಸೇರು
ಅಕ್ಕ ನನ್ನವಳಾದ್ರೆ ಬಾವ ನನ್ನವನೇನು
ಬಾಯಲೆಲ್ಲಾ ವೇದಾಂತ, ಮಾಡುವುದೆಲ್ಲಾ ರಾದ್ಧಾಂತ.
ಕರೆದುಣ್ಣುವ ಕೆಚ್ಚಲನ್ನು ಕೊರೆದುಂಡ ಹಾಗೆ.
ಚಿನ್ನದ ಕಠಾರಿಯಂತ ಹೊಟ್ಟೆ ತಿವಿದುಕೊಳ್ಳಬಹುದೇ?
ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ
ಮನೆಗೆ ಮಾರಿ, ಊರಿಗೆ ಉಪಕಾರಿ.
ಓದೋದು ಕಾಶಿ ಖಂಡ, ತಿನ್ನೋದು ಮಶಿ ಕೆಂಡ
ನಾಯಿ ಬೊಗಳಿದರೆ ದೇವಲೋಕ ಹಾಳೇನು
ಮಾಡಬಾರದ್ದು ಮಾಡಿದರೆ ಆಗಬಾರದ್ದೇ ಆಗುತ್ತೆ
ಕಣ್ಣಾರೆ ಕಂಡರೂ ಪರಾಂಬರಿಸಿ ನೋಡು
ಎಂಟು ವರ್ಷಕ್ಕೆ ನನ್ನ ಮಗ ದಂಟಾದ
ಮರಿ ಮಾಡುವ ಮೊದಲೇ ಮೊಟ್ಟೆಗಳನ್ನು ಎಣಿಸಬೇಡ.
ಅಮ್ಮನವರು ಪಟ್ಟಕ್ಕೆ ಬಂದಾಗ,ಅಯ್ಯನವರು ಚಟ್ಟಕ್ಕೇರಿದರು
ನಯಶಾಲಿ ಆದವನು ಜಯಶಾಲಿ ಆದಾನು
ಆಳು ಮೇಲೆ ಆಳು ಬಿದ್ದು ದೋಣು ಬರಿದಾಯ್ತು
ಹೊಸ ವೈದ್ಯನಿಗಿ೦ತ ಹಳೇ ರೋಗೀನೇ ಮೇಲು.
ಹೆಣ್ಣು ಉರಿಸಿದ ಮನೆಯ ಹೆಗ್ಗಂಬ ಉರಿಯಿತು
ಅಂಗಾಂಗದಲ್ಲಿ ಪಾಪ ಮಡಗಿಕೊಂಡು ಗಂಗೇಲಿ ಮಿಂದು ಬಂದ
ಮಕ ನೋಡಿ ಮಾರು ಹೋದ, ಗುಣ ನೋಡಿ ದೂರ ಹೋದ
ಮಣ್ಣಿನಿಂದ ಮಣ್ಣಿಗೆ
ಒ೦ದು ಕಣ್ಣಿಗೆ ಬೆಣ್ಣೆ, ಇನ್ನೊ೦ದು ಕಣ್ಣಿಗೆ ಸುಣ್ಣ.
ಹೊಸ ಮಂಜು ಹಳೆಯದನ್ನು ಕೊಚ್ಚದಿದ್ದೀತೆ.
ಕಿಡಿಯಿಂದ ಕಾಡ ಸುಡ ಬಹುದು
ಸಂತೇಲಿ ಮನೇ ಮಾಡಿ ಸದ್ದಿಗಂಜೂದೇ
ಲೋಕ ತಿಳಿಯಬೇಕು ಲೆಕ್ಕ ಕಲಿಯಬೇಕು
ಮುಚ್ಚಿ ಹೇಳಿದರೆ ಒಗಟು ಬಿಚ್ಚಿ ಹೇಳಿದರೆ ಒರಟು
ಹೆಸರಿಗೆ ಹೊನ್ನ ಹೆಗ್ಗಡೆ, ಎಸರಿಗೆ ಅಕ್ಕಿ ಇಲ್ಲ
ಕೊನೆಯ ಕೂಸು ಕೊಳೆಯಿತು, ಒನೆಯ ಕೂಸು ಬೆಳೆಯಿತು.
ಬೆಳ್ಳಯ್ಯ ಕಾಕಾ ಅರಿವಯ್ಯ ಮೂಕ
ಅಕ್ಕನ ಹಗೆ ಬಾವನ ನಂಟು
ಹುಟ್ಟಿದ ಮನೆ ಹೋಳಿಹುಣ್ಣಿಮೆ ಕೊಟ್ಟ ಮನೆ ಶಿವರಾತ್ರಿ
ಶಿವರಾತ್ರಿ ಮನೆಗೆ ಏಕಾದಶಿ ಬಂದಂಗೆ
ದುಷ್ಟರ ಸಂಗದಿ ನೆರಳು ಕೊಯ್ಯದೆ ಬಿಡದು ಕೊರಳು.
ಕೈಯ್ಯಲ್ಲೆ ಬೆಣ್ಣೆ ಇಟ್ಟುಕೊಂಡು,ತುಪ್ಪಕ್ಕೆ ಊರೆಲ್ಲ ಅಲೆದರಂತೆ
ಹನಿಹನಿಗೂಡಿದರೆ ಹಳ್ಳ, ತೆನೆತೆನೆಗೂಡಿದರೆ ಬಳ್ಳ.
ಕೋತಿಗೆ ಹೆಂಡ ಕುಡಿಸಿದಂತೆ
ಅಂಬಲಿಗೆ ಗತಿ‌ಇಲ್ಲದವ ಕಟ್ಟಾಣಿ ರಂಬೆಯ ಬಯಸಿದ
ಹಂಚಿದವರಿಗೆ ಹಲ್ಲು ಬಾಯಿ
ಹೆಣ್ಣು ಹಡೆದವರ ಮನೆ ನುಣ್ಣಗೆ ಗಂಡು ಹಡೆದವರ ಮನೆ ತಣ್ಣಗೆ
ಓತಿಕ್ಯಾತಕ್ಕೆ ಬೇಲಿ ಗೂಟ ಸಾಕ್ಷಿ
ಸಿರಿತನ ಇರೂತನ ಪಿರಿಪಿರಿ ಸಿರಿಹೋದ ಮರುದಿನ ಕಿರಿಕಿರಿ
ತತ್ರಬಿತ್ರಿಯ (ತಂತ್ರಗಾರ) ಮುಂದೆ ಕತ್ತೆಯ ಹಾಗೆ ಆದ
ಮಾಳಿಗೆ ಮನೆ ಬೇಕು ಜೋಳಿಗೆ ಹಣ ಬೇಕು ಮಾದೇವನಂಥಾ ಮಗ ಬೇಕು ಗೌರಿಯಂಥಾ ಸೊಸೆ ಬೇಕು
ಕತ್ತೆಗೆ ತಿಪ್ಪೆಯೇ ತವರುಮನೆ.
ಹಗೆಯೋನ ಕೊಲ್ಲಾಕೆ ಹಗಲೇನು ಇರುಳೇನು
ಇದ್ದುದ ಉಣ್ಣದವನ ಬಾಯಾಗೆ ಕಡೆಗೆ ಮಣ್ಣು ಬಿತ್ತು
ಆಳಿದ ದೊರೆ ಹುಸಿದರೆ ಅಲ್ಲಿಂದ ಹೇಳದೆ ಹೋಗಬೇಕು
ಹಸಿದು ಹಲಸಿನ ಹಣ್ಣು ತಿನ್ನು ಉಂಡು ಮಾವಿನ ಹಣ್ಣು ತಿನ್ನು
ಅಪ್ಪನ ಮನೇಲಿ ಸೈ ಅನ್ನಿಸಿಕೊಂಡೋಳು, ಅತ್ತೆ ಮನೇಲೂ ಸೈ ಅನ್ನಿಸಿ ಕೊಳ್ತಾಳೆ
ವಿರೂಪಾಕ್ಷ ಹ೦ಪೆ ಬಿಡ, ವಿಘ್ನೇಶ್ವರ ಕೊ೦ಪೆ ಬಿಡ.
ಕೂತು ತಿನ್ನುವವನಿಗೆ ಕುಡಿಕೆ ಹಣ ಸಾಲದು
ಬಸವನ ಹಿಂದೆ ಬಾಲ,ಸೂಜಿ ಹಿಂದೆ ದಾರ
ತರಗು ತಿಂಬವನಿಗೆ ಒರಗೊಂದು ಕೇಡು
ಕೆಟ್ಟು ಸೈರಿಸಬಲ್ಲೆ ಕೊಟ್ಟು ಸೈರಿಸಲಾರೆ
ಕಟ್ಟೆ ಹಾಕಿ ಅನ್ನ ಉಣ್ಣು
ಸಾವಿರ ಸಲ ಗೋವಿಂದ ಅಂದರು, ಒಬ್ಬ ದಾಸಯ್ಯನಿಗೆ ಭಿಕ್ಷೆ ನೀಡಲಿಲ್ಲ
ಮಾತು ಮನೆ ಮುರಿತು, ತೂತು ಓಲೆ ಕೆಡಿಸಿತು.
ದನ ತಿನ್ನುವವನಿಗೆ ಗೊಬ್ಬರದ ಆಣೆ
ಚಿತ್ತಾ ಮಳೆ ವಿಚಿತ್ರ ಬೆಳೆ!
ಹಾರುವ ಆಳಲ್ಲ, ಬಾಳೆ ದಡಿಯಲ್ಲ
ಮಾತು ಆಡಿದರೆ ಹೋಯಿತು; ಮುತ್ತು ಒಡೆದರೆ ಹೋಯಿತು
ಊಟಕ್ಕಿಲ್ಲದ ಉಪ್ಪಿನಕಾಯಿ ..ಕ್ಕೆ ಸಮಾನ
ಪ್ರದಕ್ಷಿಣೆ ಹಾಕಿದರೆ ಪ್ರಯೋಜನವಿಲ್ಲ, ದಕ್ಷಿಣೆ ಹಾಕಿದರೇಯ ತೀರ್ಥ ಸಿಗೋದು
ಮದ್ದು ಬುದ್ಧಿ ದೈವ ಒಲ್ಲದೆ ತಿದ್ದವು
ನಾಡೆಂದ್ರ ಕಾಡನ್ನ ಸುಡುವಾಗ ದೇವೇಂದ್ರ ಗಾಳೀನ್ನ ನೋಡೊಕೆ ಕಳಿಸಿದ
ನಾಯಿನ ಕರೆದುಕೊಂಡು ಹೋಗಿ ಸಿಂಹಾಸನದ ಮೇಲೆ ಕೂರಿಸಿದ ಹಾಗಾಯ್ತು.
ಉಪ್ಪು ತಿಂದವನು ನೀರು ಕುಡಿಯಲೇ ಬೇಕು
ರಸವಳ್ಳಿ ಹೆಣ್ಣು ಒಲಿವಂತೆ ಮಾಡುವುದು ಎಳ್ಳ ತಿಂದ ಋಣ
ತಾಯಿಯಂತೆ ಮಗಳು ನೂಲಿನಂತೆ ಸೀರೆ
ಬೇಲೀನೆ ಎದ್ದು ಹೊಲ ಮೇಯ್ದ೦ತೆ.
ತನ್ನೂರಲ್ಲಿ ರಂಗ, ಪರೂರಲ್ಲಿ ಮಂಗ
ಕಂತೆಗೆ ತಕ್ಕ ಬೊಂತೆ
ಎದ್ದರೆ ಆಳಲ್ಲ
ಆರು ದೋಸೆ ಕೊಟ್ರೆ ಅತ್ತೆ ಕಡೇ,ಮೂರು ದೋಸೆ ಕೊಟ್ರೆ ಮಾವನ ಕಡೆ
ತಾರಕ್ಕೆ (ಎರಡು ಕಾಸಿನ ನಾಣ್ಯ) ಮೂರು ಸೇರು ಉಪ್ಪಾದರೂ ತರುವುದಕ್ಕೆ ಗತಿ ಬೇಡವೋ
ಉಂಡದ್ದು ಊಟ ಆಗಲಿಲ್ಲ, ಕೊಂಡದ್ದು ಕೂಟ ಆಗಲಿಲ್ಲ
ಇಟ್ಟ ವಿಭೂತಿ ಪಟ್ಟದಂತೆ
ಏರಿದವ ಇಳಿದಾನು
ಡಂಬು ನನ್ನ ಕೇಳು, ಡಬ್ಬು ನನ್ನ ಹೆಂಡ್ರನ್ನ ಕೇಳು
ಹೂವಿನ ಜೊತೆ ದಾರ ಮುಡಿಯೇರಿತು.
ಎಡವಿದ ಕಾಲು ಎಡವುದು ಹೆಚ್ಚು
ಆಸೆ ಹೆಚ್ಚಿತು ಆಯಸ್ಸು ಕಮ್ಮಿ ಆಯಿತು
ಪ್ರಥಮ ಚುಂಬನೇ ದಂತ ಭಗ್ನಮ್
ತಲೆ ಬಲಿಯಿತು ಅಂತ ಕಲ್ಲಿಗೆ ಹಾಯಬಾರದು
ಗಾಣವಾಡದೆ ಎಣ್ಣೆ ಬಂದೀತೇ
ಲೇ ಅನ್ನಲು ಅವಳೇ ಇಲ್ಲ ಮಗನ ಹೆಸರು ಮುದ್ದುರ೦ಗ.
ಬಾಯಿಯಲ್ಲಿ ಬಸಪ್ಪ ಹೊಟ್ಟೆಯಲ್ಲಿ ವಿಷಪ್ಪ.
ಕಬ್ಬು ಡೊಂಕಾದ್ರೆ ಸವಿ ಡೊಂಕೇ
ಕಪ್ಪೆ ತಕ್ಕಡೀಲಿ ಹಾಕಿದ ಹಾಗೆ
ಅಜ್ಜಿ ಸಾಕಿದ ಮಗ ಬೊಜ್ಜಕ್ಕೂ ಬಾರದು
ಕಣ್ಣರಿಯದಿದ್ದರೂ ಕರುಳರಿಯುತ್ತದೆ
ಅರಸು ಒಲಿದರೆ ಸಿರಿ ದೆಸೆಯಾಯ್ತು
ಮನೆ ಕಟ್ಟಿ ನೋಡು, ಮದುವೆ ಮಾಡಿ ನೋಡು.
ಕೂಸು ಹುಟ್ಟುವ ಮುಂಚೆ ಕುಲಾವಿ ಹೋಲಿಸು
ಒಂದು ಕಣ್ಣೀಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ
ಹಣ ಇಲ್ದೋರು ಎದ್ದೂ ಬಿದ್ದಂಗೆ, ಗುಣ ಇಲ್ದೋರು ಇದ್ದೂ ಇಲ್ದಂಗೆ
ಹುಣಿಸೆ ಮರ ಮುದಿಯಾದ್ರೂ ಕಾಯಿ ಹುಳಿ ಹೋಗಲ್ಲ
ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು
ಹುಣಸೆ ಮರ ಮುಪ್ಪಾದರೂ ಹುಳಿ ಮುಪ್ಪಲ್ಲ
ಬಗ್ಗಿದವನಿಗೆ ಒಂದು ಗುದ್ದು ಜಾಸ್ತಿ
ಬಾಳಿ ಬದುಕುವರಿಗೆ ಹಾಳೂರ ಸುದ್ದಿ ಯಾಕೆ
ಅದ್ನೇ ಉಂಡೇನ್ ಅತ್ತೆಮ್ನೋರೇ,ಕದ ತೆಗೀರಿ ಮಾವ್ನೋರೇ ಅಂದ್ರಂತೆ
ಹಾಲಿದ್ದಾಗ ಹಬ್ಬ ;ನೀರಿದ್ದಾಗ ನೇಮ
ಕಾಡಿಗೆ ಗಣ್ಣ ಚೆಲುವೆ ಮನೆಗೆ ಕೇಡು ತಂದಳು
ದುಡ್ಡಿಗೆ ದುಡ್ಡು ಗಂಟು ಹಾಕಿದ್ಯೋ? ಬೆನ್ನಿಗೆ ಹೊಟ್ಟೆ ಅಂಟು ಹಾಕಿದ್ಯೋ?
ನಚ್ಚುವುದು ಬೇರೆ ಹೆಣ್ಣು ಒಬ್ಬನ ಮೆಚ್ಚುವುದು ಬೇರೆ
ಇಬ್ಬರ ನ್ಯಾಯ, ಮೂರನೇಯವನಿಗೆ ಆದಾಯ
ಮುತ್ತು ಹೆಚ್ಚಾಯ್ತು ಅಂತ ಎಲ್ಲೆಲ್ಲಿಗೋ ತೊಟ್ರಂತೆ.
ಕಂಡವರ ಕಂಡು ಕೈಕೊಂಡ ಧರ್ಮ ದಂಗು ಬಡಿಸಿತು
ನದೀನೇ ನೋಡದೆ ಇರೋನು ಸಮುದ್ರ ವರ್ಣನೆ ಮಾಡಿದ ಹಾಗೆ
ಆಚಾರ್ಯರಿಗೆ ಮಂತ್ರಕ್ಕಿಂತ ಉಗುಳು ಜಾಸ್ತಿ
ಚಿನ್ನದ ಚೂರಿ ಎಂದು ಕುತ್ತಿಗೆ ಕುಯಿಸಿಕೊಳ್ಳಬಹುದೇ
ಅಂದು ಬಾ ಅಂದ್ರೆ ಮಿಂದು ಬಂದ
ಕೋಪದಲ್ಲಿ ಕುಯ್ದ ಮೂಗು ಶಾಂತಿಯಲ್ಲಿ ಬಂದೀತೇ
ತಾಳ ತಪ್ಪಿದರೆ ಕುಣಿಯೋದು ತಪ್ಪುವುದಿಲ್ಲ
ಕೋಣನ ಮುಂದೆ ಕಿನ್ನರಿ ಬಾರಿಸಿದಂತೆ
ಆರು ಯತ್ನ ತನ್ನದು, ಏಳನೇದು ದೇವರಿಚ್ಛೆ
ಒಂದು ದುಡ್ಡು ಕೊಡುವೆ ಹಾಡು ದಾಸಯ್ಯ ಎರಡು ದುಡ್ಡು ಕೊಡುವೆ ಬಿಡು ದಾಸಯ್ಯ
ಗಂಡಸು ಕೂತು ಕೆಟ್ಟ ;ಹೆಂಗಸು ತಿರುಗಿ ಕೆಟ್ಟಳು
ತಟ್ಟಿ ಬೈಸಿಕೊಂಡರೂ ತಟ್ಟೇ ಹುಳಿ ಚೆನ್ನಾಗಿದೆ
ಹಾಸಿಗೆ ಇದ್ದಷ್ಟು ಕಾಲು ಚಾಚು
ಸಾಲಗಾರನ ಮನೆಗೆ ಸವುದೆ ಹೊತ್ತರೆ ಮೇಲಣ ಬಡ್ಡಿಗೆ ಸಮವಾಯಿತು
ಹಿರಿಯಕ್ಕನ ಚಾಳಿ ಮನೆಮಕ್ಕಳಿಗೆಲ್ಲ
ಎಲ್ಲರ ಮನೆ ದೋಸೇನೂ ತೂತೇ.
ಜ್ಯೋತಿಯ ನೆಲೆ ಅರಿತವನೇ ಯೋಗಿ
ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು
ಯಾವ ಚಿಂತೇನೂ ಮಾಡದೋನ ಹೆಂಡ್ತಿ ಗಂಡಿದ್ದೂ ಮುಂಡೆ
ಹಾಕ್ಮಣೆ, ನೂಕ್ಮಣೆ, ಯಾಕ್ಮಣೆ
ಪಾಪ ಪ್ರಕಟ ಪುಣ್ಯ ಗೋಪ್ಯ.
ಹೆತ್ತವರಿಗೆ ಅಂಬಲಿ ಬಿಡದಿದ್ದರೂ, ಹಂಬಲ ಬಿಡದಿದ್ದರೆ ಸಾಕು
ಅಲ್ಪರ ಸಂಗ ಅಭಿಮಾನ ಭಂಗ.
ಮುಲಾಜಿಗೆ ಬಸುರಾಗಿ ಹೆರೋಕೆ ತಾವಿಲ್ಲ
ಉಡೋಕೆ ಇಲ್ಲದವ ಮೈಲಿಗೆಗೆ ಹೇಸ, ಉಂಬೋಕೆ ಇಲ್ಲದವ ಎಂಜಲಿಗೆ ಹೇಸ
ಹುಟ್ತಾ ಹುಟ್ತಾ ಅಣ್ಣ ತಮ್ಮಂದಿರು; ಬೆಳೀತಾ ಬೆಳೀತಾ ದಾಯಾದಿಗಳು
ಸಾವಿರ ಸುಳ್ಳು ಹೇಳಿ ಒಂಡು ಮಡುವೆ ಮಾಡು
ಸಮುದ್ರದ ಮದ್ಯೆ ಇದ್ದರೂ ಉಪ್ಪಿಗೆ ಬರವಂತೆ
ಹುಡುಕುತ್ತಿದ್ದ ಬಳ್ಳಿ ಕಾಲಿಗೇ ತೊಡರಿಕೊಂಡಿತು
ಕೈ ಕೆಸರಾದರೆ ಬಾಯಿ ಮೊಸರು.
ತಾನು ನೆಟ್ಟ ಬೀಳು ತನ್ನ ಎದೆಗೆ ಹಬ್ಬಿತು
ತಮ್ಮ ಒಳ್ಳೆಯವನೇ ಸರಿ ಒಮ್ಮಾನಕ್ಕಿಗೆ ಮಾರ್ಗವಿಲ್ಲ
ಆಸೆಗೆ ಮಿತಿಯಿಲ್ಲ, ಆಕಾಶಕ್ಕೆ ಅಳತೆಯಿಲ್ಲ.
ಇಂಗು ತೆಂಗು ಇದ್ದರೆ ಮಂಗಮ್ಮನೂ ಅಡಿಗೆ ಮಾಡ್ತಾಳೆ.
ಎಲ್ಲಾ ಬಣ್ಣ ಮಸಿ ನುಂಗಿತು
ನೆಂಟರೆಲ್ಲ ಖರೆ, ಕಂಟಲೆ ಚೀಲಕ್ಕೆ ಕೈ ಹಾಕಬೇಡ
ಹಲ್ಲುಬಿದ್ದ ಮುದುಕಿ ಎಲ್ಲಿ ಬಿದ್ದರೇನು
ಹಲ್ಲಿದ್ರೆ ಕಡಲೆ ಇಲ್ಲ;ಕಡಲೆ ಇದ್ರೆ ಹಲ್ಲಿಲ್ಲ
ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಿದರಂತೆ
ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದರ೦ತೆ.
ಗಂಡ ಹೆಂಡಿರ ಜಗಳ ಉಂಡು ಮಲಗೋ ತನಕ.
ಬರಗಾಲದಲ್ಲಿ ಅಧಿಕಮಾಸ ಬಂದ ಹಾಗೆ.
ಮಗೂನ ಚಿವುಟೋದು, ತೊಟ್ಟಿಲು ತೂಗೋದು
ಕುಲ ಸೋಸಿ ಹೆಣ್ಣು ತಗೊಂಡು ಬಾ ; ಜಲ ಸೋಸಿ ನೀರು ತಗೊಂಡು ಬಾ
ಮಹಡಿ ಹತ್ತಿದ ಮೇಲೆ ಏಣಿ ಒದ್ದ ಹಾಗೆ.
ಗಿಡವಾಗಿ ಬಗ್ಗದ್ದು, ಮರವಾಗಿ ಬಗ್ಗೀತೇ?
ಹಳೆಯ ಕೋಟು ಧರಿಸಿ, ಹೊಸ ಪುಸ್ತಕ ಕೊಳ್ಳಿ.
ಹಾಲಪ್ಪ ಅಂತ ಹೆಸರಿದ್ದರೂ ಮಜ್ಜಿಗೆಗೆ ಗತಿ ಇಲ್ಲ
ಮಾಡಿದುಣ್ಣೊ ಮಾರಾಯ
ಕುಂಬಾರನ ಮಗಳು ಲಾಭ ಬಂದ ಹೊರತು ಮಡಿಕೆ ಒಡೆಯುವುದಿಲ್ಲ.
ಆಗೋದೆಲ್ಲಾ ಒಳ್ಳೇದಕ್ಕೆ
ಅರ್ಧ ಆದ ಕೆಲಸವನ್ನು ಅರಸನಿಗೂ ತೋರಿಸಬೇಡ
ನೂರು ಜನಿವಾರ ಒಟ್ಟಿಗಿರಬಹುದು; ಮೂರು ಜಡೆ ಒಟ್ಟಿಗಿರುವುದಿಲ್ಲ
ಕಂಗಾಲನ ಮನೀಗೆ ಕಂಗಾಲ ಹೋದರೆ ಗಂಗಾಳ ನೆಕ್ಕು ಅಂದಂತೆ
ಚಿಕ್ಕವ್ವ ಚಿಕ್ಕವ್ವ ಮರಿಬಾಡ್ನೆಸ್ರು: ತಿರುಗ್ ನೋಡುದ್ರೆ ಚೊಳ್ ನೀರು.
ಆದರೆ ಆರಿದ್ರಾ ಇಲ್ವಾದ್ರೆ ದರಿದ್ರ!
ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡಿಕೊಂಡ
ತಲೆ ಗಟ್ಟಿ ಇದೆ ಅಂತ ಕಲ್ಲಿಗೆ ಹಾಯಬಾರದು
ದೇವರು ಒಲಿದರೂ ಪೂಜಾರಿ ಒಲಿಯೊಲ್ಲ.
ಮಾತು ಮನೆ ಕೆಡಿಸಿತು; ತೂತು ಒಲೆ ಕೆಡಿಸಿತು
ಕೂಳಿಗೆ ಕೇಡು ಭೂಮಿಗೆ ಭಾರ
ಶ್ಯಾನುಭೋಗರ ಸ೦ಬಳ ಸ೦ತೋಷ ಕೇಳಬೇಡಾ.
ಬಿಮ್ಮಗಿದ್ದಾಗ ಹಮ್ಮು, ಬಿಮ್ಮು ತಪ್ಪಿದಾಗ ದಮ್ಮು
ಹೃದಯಶೂನ್ಯರ ಒಲವಿಗಿಂತ ಬಲ್ಲವರ ಕದನವೇ ಲೇಸು
ಕುರಿ ಕಾಯೋದಕ್ಕೆ ತೋಳನನ್ನು ಕಳಿಸಿದರಂತೆ
ಜಿನ ಧರ್ಮವೇ ಜೀವಧರ್ಮ
ಅತಿ ಸ್ನೇಹ ಗತಿ ಕೆಡಿಸಿತು
ಬಾಯಾರಿದಾಗ ಬಾವಿ ತೋಡಿದ ಹಾಗೆ.
ಎರಡು ದಾಸರ ನಂಬಿ ಕುರುಡು ದಾಸ ಕೆಟ್ಟ
ಓದಿದ ಓದೆಲ್ಲ ಮೇದ ಕಬ್ಬಿನ ಹಿಪ್ಪೆ,
ಅಪ್ಪ ಮಾಡಿದ ಪುಣ್ಯ ಮಕ್ಕಳ ಕಾಲಕ್ಕೆ.
ಹಾರುವರ ಮೋರೆಯಾದರೂ ನೀರಿನಲ್ಲಿ ತೊಳೆಯದಿದ್ದರೆ ನಾರದೆ ಇದ್ದೀತೆ.
ಮನಸಿದ್ದರೆ ಮಾರ್ಗ.
ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ
ಉಗುರಿನಲ್ಲಿ ಹೋಗೋ ಚಿಗುರಿಗೆ ಕೊಡಲಿ ಏಕೆ ?
ಊರಿಗೆಲ್ಲಾ ಒಬ್ಬಳೇ ಪದ್ಮಾವತಿ
ತನ್ನ ತಾನರಿತರೆ ಸುಜ್ಞ್ನಾನಿ
ತಲೆ ಚೆನ್ನಾಗಿದ್ದರೆ ಮುಂಡಾಸು ನೂರು ಕಟ್ಟಬಹುದು
ಆದ ಕೆಲಸಕ್ಕೆ ಅತ್ತೆಗಳು ಬಂದಂತೆ
ಅತಿ ಸ್ನೇಹ ಗತಿ ಕೇಡು
ಹಲ್ಲಿದ್ದಾಗ ಕಡ್ಲೆ ಇಲ್ಲ; ಕಡ್ಲೆ ಇದ್ದಾಗ ಹಲ್ಲಿಲ್ಲ
ಬಿಳಿ ಆನೆ ಸಾಕಿದ ಹಾಗೆ
ಬೇವು ಕಾಗೆಗೆ ಇಷ್ಟ , ಮಾವು ಕೋಗಿಲೆಗೆ ಇಷ್ಟ
ತನ್ನ ನೆರಳು ತಾ ಕಂಡು ನರಳುವವ ಮರುಳನಲ್ಲವೇ?
ವಿದ್ಯಾವಂತನಾದರೆ ಜಗತ್ತಿನ ಆಡಳಿತವನ್ನೇ ನಡೆಸಬಹುದು.
ಹೆಣು ಮಕ್ಕಳು ಇದ್ದ ಮನೆ ಕನ್ನಡಿಯಂಗೆ
ಅಪಾಯ ತೀರಿತು, ದೇವರನ್ನು ಮರೆತಾಯಿತು.
ರಾಗ ನೆನೆಪಾದಾಗ ತಾಳ ಮರೆತು ಹೋಯಿತಂತೆ
ತೇದು ಇಕ್ಕಿದೋಳಿಗಿಂತ ಸಾದು ಇಕ್ಕಿದೋಳು ಹೆಚ್ಚು
ಅಜ್ಜ! ಮದುವೆ ಅಂದ್ರೆ ನನಗೋ ಅಂದ
ಪ್ರಯತ್ನಕ್ಕೆ ಪರಮೇಶ್ವರನೂ ಸಹಾಯ ಮಾಡುವನು.
ಪಾಲಿಗೆ ಬಂದದ್ದು ಪಂಚಾಮೃತ
ಕತ್ತೆಗೇನು ಗೊತ್ತು ಕಸ್ತೂರಿ ಪರಿಮಳ.
ಕೂಸು ಹುಟ್ಟುವ ಮು೦ಚೆ ಕುಲಾವಿ ಹೊಲಿಸಿದರು .
ಆಟ ಕೆಟ್ಟರೆ ದೀವಟಿಗೆಯವನ ಸುತ್ತ
ತಿಗಳಾ ತಾ ಕೆಡುತ್ತಾ ಏಳು ನೆರೆ ಕೆಡಿಸಿದ
ಕಲ್ಲು ಇದ್ದಾಗ ನಾಯಿ ಇಲ್ಲ ನಾಯಿ ಇದ್ದಾಗ ಕಲ್ಲು ಇಲ್ಲ
ಹೊಳೆ ನೀರಿಗೆ ದೊಣೆನಾಯ್ಕನ ಅಪ್ಪಣೆ ಏಕೆ ?
ತಣ್ಣೀರು ಆದರೂ ಪುಣ್ಯದಿಂದ ದೊರಕಬೇಕು
ಹಕ್ಕಿ ತೆನೆ ತಿಂದು ಹಿಕ್ಕೆ ಇಕ್ಕಿ ಹೋಯ್ತು
ಬಾಯಲ್ಲಿ ಬೆಲ್ಲ ಕರುಳು ಕತ್ತರಿ
ಯಾರದೊ ದುಡ್ಡು ಎಲ್ಲಮ್ಮನ ಜಾತ್ರೆ.
ಸಜ್ಜನರ ಸಂಗ ಹೆಜ್ಜೇನು ಸವಿದಂತೆ
ಒಲ್ಲದ ಗಂಡಗೆ ಬೆಣ್ಣೇಲಿ ಕಲ್ಲು
ಕೆಟ್ಟ ಮೇಲೆ ಬುದ್ಧಿ ಬಂತು, ಅಟ್ಟ ಮೇಲೆ ಒಲೆ ಉರಿಯಿತು
ತಲೇ ಒಡೆದವನೂ ಸಮ ಲೇಪ ಹಚ್ಚಿದವನೂ ಸಮ
ತುಟಿ ಸುಮ್ಮನಿದ್ದರೂ ಹೊಟ್ಟೆ ಸುಮ್ಮನಿರದು
ಇಷ್ಟನ್ನು ಕಂಡೆಯಾ ಕೃಷ್ಣಂಭಟ್ಟಾ ಅಂದರೆ, ಮುಪ್ಪಿನ ಕಾಲಕ್ಕೆ ಮೂರು ಜನ ಹೆಂಡಿರು
ಚಿಂತೆ ಇಲ್ಲದವನಿಗೆ ಸನ್ತೇಲು ನಿದ್ದೆ.
ತಾಯಿದ್ದರೆ ತವರು ಮನೆ ನೀರಿದ್ದರೆ ಕೆರೆ ಬಾವಿ
ಬಾಯಿ ಬಿಟ್ಟರೆ ಬಣ್ಣಗೇಡು
ಕಳ್ಳನ ಹೆಜ್ಜೆ ಕಳ್ಳನೇ ಬಲ್ಲ
ಸತ್ತವರಿಗೆ ಸಂಗವಿಲ್ಲ ಕೆಟ್ಟವರಿಗೆ ನೆಂಟರಿಲ್ಲ
ತಾಳಲಾರದ ವಿರಹ ತಿಣಕಿದರೆ ಹೋದೀತೇ?
ಓದಿದರ ಅರಿವು ಮೇದ ಕಬ್ಬಿನ ರಸ
ಯಾರೂ ಇಲ್ಲದ ಊರಿಗೆ ಹೋಗಿ ನೀರು ಮಜ್ಜಿಗೆ ಬಯಸಿದಂತೆ
ಹಾಕೋದು ಬಿತ್ತೋದು ನನ್ನಿಚ್ಛೆ; ಆಗೋದು ಹೋಗೋದು ದೇವರಿಚ್ಛೆ
ಸಾಲ ಅಂದ್ರೆ ಶೂಲ, ಕಾಲ ಅಂದ್ರೆ ಯಮ
ಆಸೆಯಿ೦ದ ಅಳಿಯ ಬ೦ದ್ರೆ ಮಗಳು ಹೊರಗಾಗಿರೋದೇ?
ಮಾನಿಷ್ಟರು ಮಾನಕ್ಕೆ ಅಂಜಿದರೆ ಮಾನಗೇಡಿ ತನಗೇ ಅಂಜಿದರು ಅಂದನಂತೆ
ಬೆಂದ ಮನೇಲಿ ಹಿರಿದದ್ದೇ ಲಾಭ
ಪಾಪಿ ಚಿರಾಯು
ಹರೆಯಕ್ಕೆ ಬಂದಾಗ ಹಂದಿನೂ ಚಂದ
ಪಾಪಿ ಧನ ಪ್ರಾಯಶ್ಚಿತ್ತಕ್ಕೆ
ತಾಯಿ ಮಾಡಿದ ಹೊಟ್ಟೆ ಊರು ಮಾಡಿದ ಕೊಳಗ
ಕೂತು ಉಣ್ಣೋನಿಗೆ ಕುಡಿಕೆ ಹೊನ್ನು ಸಾಲದು
ಬರೀ ಕೈಗಿಂತ ವಾಸಿ ಹಿತ್ತಾಳೆ ಕಡಗ
ಅಕ್ಕಿ ಅಂದ್ರೆ ಪ್ರಾಣ, ನೆಂಟ್ರು ಅಂದ್ರೆ ಜೀವ
ಹುಣ್ಣಿಮೆ ಬರುವ ತನಕ ಅಮಾಸೆ ನಿಲ್ಲದು, ಅಮಾಸೆ ಬರುವನಕ ಹುಣ್ಣಿಮೆ ನಿಲ್ಲದು
ಎಲ್ಲರ ಮನೆಯ ದೋಸೆಯೂ ತೂತೆ !
ಕಾಮಾಲೆ ಕಣ್ಣಿನವನಿಗೆ ಲೋಕವೆಲ್ಲಾ ಹಳದಿಯಂತೆ
ತವಡು ತಿಂಬುವನಿಗೆ ವಯ್ಯಾರ ಯಾಕೆ
ದೇವರು ವರ ಕೊಟ್ರು ಪೂಜಾರಿ ಕೊಡ.
ರಾತ್ರಿ ಕಂಡ ಬಾವೀಲಿ ಹಗಲು ಬಿದ್ದಂಗೆ
ಬನ್ನ ಪಟ್ಟುಣ್ಣೋ ಬಿಸಿ ಅನ್ನಕ್ಕಿಂತ ತಂಗುಳೇ ಲೇಸು
ನಿನ್ನ ಮನೆ ಎಕ್ಕುಟ್ಟಿ ಹೋಗ
ಹಾರಾಡೋ ಅಪ್ಪುಂಗೆ ತೂರಾಡೋ ಮಗ ಹುಟ್ದಂಗೆ.
ಅಡಿಕೆಗೆ ಹೋದ ಮಾನ ಆನೆ ಕೊಟ್ಟರು ಬರಲ್ಲ.
ಊರು ನೋಡಿ ಬಾ ಅಂದರೆ ತೋರಣ ಕಟ್ಟಿ ಬಂದ.
ಹನುಮಂತಾನೆ ಬಾಲ ಕಡಿತಿರುವಾಗ, ಇವನ್ಯಾವನೋ ಶಾವಿಗೆ ಕೇಳಿದನಂತೆ.
ತೊಳೀಲಿಲ್ಲ ಬಳೀಲಿಲ್ಲ ಮೂಗೇಕೆ ಮಸಿಯಾಯ್ತು
ಒಂಡಂಬಡಿಕೆ ಇಂದ ಆಗದು ದಡಂಬಡಿಕೆ ಇಂದ ಆದೀತೇ
ಲಿಂಗ ಹರಿದ ಮೇಲೆ ಜಂಗಮನ ಹಂಗೇನು
ಬೆ೦ಕಿಯಿಲ್ಲದೆ ಹೊಗೆಯಾಡುವುದಿಲ್ಲ.
ಸಿದ್ದಿಗಿಂತ ಬಲವಿಲ್ಲ ಬುದ್ಧಿಗಿಂತ ಹಿರಿದಿಲ್ಲ
ಕಳ್ಳನ ಕೈಯಲ್ಲಿ ಕೀಲಿಕೈ ಕೊಟ್ಟಂತೆ
ಚಿತ್ತದ ಕಳವಳ ನಿಲ್ಲಿಸಿದವರೇ ಉತ್ತಮರು
ಮನೇಲಿ ಇಲಿ,ಬೀದೀಲಿ ಹುಲಿ
ಕೊಟ್ಟೋನು ಕೋಡಂಗಿ, ಇಸ್ಕೊಂಡೋನು ಈರಭದ್ರ
ರಾಮ ರಾಜ್ಯ ಬಂದರೂ ರಾಗಿ ಬೀಸೋದು ತಪ್ಪಲಿಲ್ಲ
ಎಲ್ಲಾ ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ
ಆದ್ರೆ ಒಂದು ಅಡಿಕೆ ಮರ, ಹೋದ್ರೆ ಒಂದು ಗೋಟಡಿಕೆ
ಹಾರದ ಕೋತಿಗೆ ಮುಪ್ಪಾಗ ಬೆಲ್ಲ ತಿನ್ನಿಸಿದರಂತೆ
ಎಲ್ಲರೂ ನಗ್ತಾರೆ ಅ೦ಥ ಕಿವುಡ ತಾನೂ ನಕ್ಕ.
ಹೆಂದತಿಯಿಲ್ಲದ ಮನೆ ದೇವರಿಲ್ಲದ ಗುಡಿ
ಒನಕೆ ಮುಂಡು ಚಿಗುರಿದಂತೆ
ಅಕ್ಕಿ ಮೇಲೆ ಆಸೆ, ನೆಂಟರ ಮೆಲೆ ಪ್ರೀತಿ
ಹೊಟ್ಟೆ ತುಂಬಿದ ಮೇಲೆ ಹುಗ್ಗಿ ಮುಳ್ಳು ಮುಳ್ಳು
ತಾರತಮ್ಯ ಅರಿಯದವ ದೊರೆಯಲ್ಲ ಮಾತು ಮೀರಿದವ ಸೇವಕನಲ್ಲ
ಹೋದ ಪುಟ್ಟ ಬಂದ ಪುಟ್ಟ
ನಾನು ಅಗೆಯುವಲ್ಲಿ ಕಲ್ಲು, ಅಜ್ಜ ಅಗೆಯುವಲ್ಲಿ ಮಣ್ಣು.
ಹಿರೀಮಗ ಆಗಬೇಡ,ಹಿತ್ತಿಲ ಕದ ಆಗಬೇಡ
ಊಟಕ್ಕೇಳೋ ಗು೦ಡ ಅ೦ದ್ರೆ ಯಾವಕ್ಕಿ ಬೇಯಿಸಿದ್ದೀ ಅ೦ದ.
ತುತ್ತು ತೂಕ ಕೆಡಿಸಿತು, ಕುತ್ತು ಜೀವ ಕೆಡಿಸಿತು
ನಿನ್ನಲ್ಲಿ ನೀ ಹುಡುಕು, ಅರಿಷಡ್ವರ್ಗಗಳ ಹೊರ ಹಾಕು.
ಭೋಗಿ ಭೋಗದಲ್ಲಿ ನೆರೆದು ರೋಗಿಯಾದ, ಯೋಗಿ ಯೋಗದಲ್ಲಿ ನೆರೆದು ಯೋಗವಾದ
ಮರಗಿಣಿಯ ಕೂಡೆ ಆಡಿ ಅರಗಿಣಿ ಕೇಟ್ಟಿತು.
ಕದ್ದ ರೊಟ್ಟಿ ಬೇರೆ ದೇವರ ಪ್ರಸಾದ ಬೇರೆ.
ಹೊಳೆಯುವುದೆಲ್ಲಾ ಚಿನ್ನವಲ್ಲ.
ದೈವ ಒಲ್ಲದೆ ಆಗೋದಿಲ್ಲ ದೈವ ಒಲಿದರೆ ಹೋಗೋದಿಲ್ಲ
ಉಂಬೋಕೆ ಉಡೋಕೆ ಅಣ್ಣಪ್ಪ ಕೆಲಸಕ್ಕಷ್ಟೇ ಇಲ್ಲಪ್ಪ
ದುರ್ಭಿಕ್ಷದಲ್ಲಿ ಅಧಿಕ ಮಾಸ ಬಂದಂತೆ
ತರಲಿಲ್ಲ ಬರಲಿಲ್ಲ ಬರ ಹ್ಯಾಗೆ ಹಿಂಗೀತು
ಹಿತವಿಲ್ಲದ ಗಂಡ ಹಿಂದಿದ್ದರೇನು ಮುಂದಿದ್ದರೇನು
ಜೋಡಿದ್ದರೆ ನಾಡು ತಿರುಗಬಹುದು.
ಜನ ಮರುಳೋ ಜಾತ್ರೆ ಮರುಳೋ
ಹುಟ್ಟಿದ ಮಗು ತರುವುದು ತೊಟ್ಟಲಿಗೆ ನಗು.
ಆತುರಗಾರನಿಗೆ ಬುದ್ಧಿ ಮಟ್ಟ
ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡಂತೆ.
ಕಾರ್ಯವಾಸಿ ಕತ್ತೆ ಕಾಲು ಕಟ್ಟು
ಖಂಡಿತ ವಾದಿ,ಲೋಕ ವಿರೋಧಿ
ಹತ್ತು ಮಂದಿ ಹುಲ್ಲು ಕಡ್ಡಿ ಒಬ್ಬನ ತಲೆ ಭಾರ
ಬಾಯಿಯಲ್ಲಿ ಬೆಲ್ಲ ಎದೆಯಲ್ಲಿ ನೀಚತನ.
ತಿರುಳು ತಿಂದರೂ ಮರುಳು ಹೋಗಲಿಲ್ಲ
ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ
ಮೀಸೆ ಬ೦ದವಗೆ ದೇಶ ಕಾಣದು, ಮೊಲೆ ಬ೦ದವಳಿಗೆ ನೆಲ ಕಾಣದು.
ಹೊಟ್ಟೆ ತುಂಬಿದೋರಿಗೆ ಹುಡುಗಾಟ, ಹೊಟ್ಟೆಗಿಲ್ಲದೋರಿಗೆ ಮಿಡುಕಾಟ
ತಾಮ್ರದ ಕಾಸು ತಾಯಿ ಮಕ್ಕಳನ್ನು ಬೇರೆ ಮಾಡ್‌ತಂತೆ
ಬಿದ್ದಲ್ಲಿ ಸೋತಲ್ಲಿ ಹೊದಿದ್ದ ಬುದ್ಧಿ ತಪ್ಪಿತು
ಇಲಿ ಹೆಚ್ಚಿದವೆಂದು, ಮನೆಗೆ ಉರಿ ಇಡ ಬಾರದು
ಮುದ್ದು ಮುದ್ದು ತೊಗಲೆ ಬಿದ್ದು ಬಿದ್ದು ನಗಲೆ
ಕಾಲ ತಪ್ಪಿದ ಬಳಿಕ ನೂರು ಮಾಡಿದರು ಹಾಳು
ಹ೦ಗಿನರಮನೆಗಿ೦ತ ಗುಡಿಸಲೇ ಮೇಲು.
ಮಾಘ ಕಾವ್ಯ ಮಗನಿಗೆ ಬೇಡ
ಬಾಯ್ ತೆವಲು ತೀರಿಸಿಕೊಳ್ಳೋಕೆ ಎಲೆ ಅಡಿಕೆ ಬೇಕು, ಮೈ ತೆವಲು ತೀರಿಸಿಕೊಳ್ಳೋಕೆ ಒಡಂಬಡಿಕೆ ಬೇಕು
ನಾಯಿ ಬಾಲಕ್ಕೆ ದೆಬ್ಬೆ ಕಟ್ಟಿದ ಹಾಗೆ
ತಲೆಗೆ ಬಿದ್ದ ನೀರು ಕಾಲಿಗೆ ಬೀಳದೆ ಇರುತ್ತದೆಯೇ?
ದಾನ ಮಾಡೋಕೆ ಕನಲುವ ಮಾನವ ದಂಡ ಚಕಾರ ಎತ್ತದೆ ತೆರುವ
ಮುಲಾಜಿಗೆ ಬಸುರಾಗಿ ಹೇರೋಕೆ ತಾವಿಲ್ಲ
ದಯವಿಲ್ಲದ ಧರ್ಮವಿಲ್ಲ.
ಶೆಟ್ಟಿ ಸುಂಗಾರ ಆಗೋದರೊಳಗೆ ಪಟ್ಟಣ ಹಾಳಾಯ್ತು
ನಿನ್ನ ಬಾಯಾಗೆ ಹುಳ ಬೀಳ
ಮುಳುಗುತ್ತಿರುವವನಿಗೆ ಹುಲ್ಲು ಕಡ್ಡಿಯೂ ಆಸರೆ
ಅವರವರ ತಲೆಗೆ ಅವರವರದೇ ಕೈ
ದುರುಳನಿಂದಲೇ ದುರುಳುತನ.
ದೈವ ಅನ್ನೋದ ಮತ್ತೆಲ್ಲೂ ನೊಡದೆ ತಾನಿದ್ದ ಒತ್ತಿಲೇ ನೋಡು
ಒಪ್ಪೊತ್ತು ಕೂಳು ತಪ್ಪಿ ಕಣ್ಣು ಕಾಣಾಕ್ಕಿಲ್ಲ ಕಿವಿ ಕೇಳಾಕ್ಕಿಲ್ಲ
ಚೇಳಿಗೆ ಪಾರುಪತ್ಯ ಕೊಟ್ಟ ಹಾಗೆ
ನೆಗಡಿಯಾಯ್ತೆಂದು ಮೂಗು ಕೂಯಿಕೊಂಡರಂತೆ
ಹಾಲಿಲ್ಲ ಬಟ್ಟಲಿಲ್ಲ ಗುಟುಕ್ ಅಂದ
ಟೊಳ್ಳು ಮಾತು ಸುಳ್ಳಿಗಿಂತ ಕಡೆ.
ಸಾಯ್ತಿನಿ ಸಾಯ್ತಿನಿ ಅಂತ ಸಾವಿರ ಕೋಳಿ ತಿಂದನಂತೆ
ಹೋದೆಯಾ ಪಿಶಾಚಿ ಅಂದರೆ ಬಂದೆ ಗವಾಕ್ಷೀಲಿ ಅಂದಂತೆ
ಕಾಡಿಗೆ ಹೋಗೋ ವಯಸ್ಸಿನಲ್ಲಿ ಬ್ರಾಹ್ಮಣ ಓಂ ಕಲಿತ
ತಿಪ್ಪೆಯ ಮೇಲೆ ಕುಂಡ್ರುವವಗೆ ತಕ್ಯೆ ಯಾತಕ್ಕೆ
ಹುಟ್ಟು ಗುಣ ಸುಟ್ಟರೂ ಹೋಗಲ್ಲ
ಊರು ಸೂರೆ ಹೋದ ಮೇಲೆ ಕೋಟೆ ಬಾಗಿಲು ಹಾಕಿದರಂತೆ
ಬಿಮ್ಮಗೆ ಒಗೆಯಬೇಡ ಬಿಸಲಿಗೆ ಹಾಕ ಬೇಡ ಬೇಕಾದಷ್ಟು ದಿನ ಬಾಳೇನು.
ಮಳೇ ನೀರ ಬಿಟ್ಟು ಮಂಜಿನ ನೀರಿಗೆ ಕೈ ಒಡ್ಡಿದಂತೆ
ಅತ್ತೆಗೊಂದು ಕಾಲ, ಸೊಸೆಗೊಂದು ಕಾಲ.
ಮಾತಿಗೆ ಮಾತುಗಳ ಓತು ಸಾಸಿರ ಉಂಟು
ಇಟ್ಟುಕೊಂಡಾಕಿ ಇರೂತನ ಕಟ್ಟಿಕೊಂಡಾಕಿ ಕಡೀತನ
ಕಳ್ಳನ ನಂಬಿದರೂ ಕುಳ್ಳನ್ನ ನಂಬಬೇಡ
ಡಾವರ ಹತ್ತಿದಾಗ ದೇವರ ಧ್ಯಾನ
ಕಂಡದ್ದನ್ನು ಕಂಡಹಾಗೆ ಹೇಳಿದರೆ ಕೆಂಡದಂಥಾ ಕೋಪವಂತೆ
ಬಾಳಿಕೆಗೆಟ್ಟು ಬೆಸಲಾದ ಚೇಳಿನಂತಾದ ಹುಟ್ಟು ಸಾವು ದಿಟವೇ ಆದರೂ ಹೆಜ್ಜೆ ಹೆಜ್ಜೆಗೆ ಅಂಜೂದ್ ತಪ್ಪಲಿಲ್ಲ
ಸಾವಿರ ಸುಳ್ಳು ಹೇಳಿ ಒಂಡು ಮದುವೆ ಮಾಡು
ತೋಟದ ಕಬ್ಬಿಗಿಂತ, ಪೋಟೆಯ ಜೇನಿಗಿಂತ, ಬಲ್ಲವಳ ಕೂಟ ಲೇಸು
ಸಾಲಗಾರ ಸುಮ್ಮನಿದ್ದರೂ ಸಾಕ್ಷಿದಾರ ಸುಮ್ಮನಿರ
ಇಚ್ಚೆಯ ಅರಿತು ಕೊಟ್ಟ ನುಚ್ಚೊಂದು ಮಾಣಿಕ್ಯ
ತಿಪ್ಪೇ ಮ್ಯಾಲೆ ಮಲಗಿ ಉಪ್ಪರಿಗೆ ಕನಸು ಕಂಡ ಹಾಗೆ
ಹಾಳೂರಿಗೆ ಉಳಿದವನೇ ಗೌಡ
ಎರಡೂ ಕೈ ತಟ್ಟಿದರೆ ಸದ್ದು
ಹುಯ್ಯಂತ ಕೊಡ ಬೇಡ ಸುಮ್ಮನೆ ಕೂರಲು ಬೇಡ
ಊರಿಗೆ ಊರ ಚಿಂತೆಯಾದರೆ ಅಜ್ಜಿಗೆ ಅರಿವೆ ಚಿಂತೆಯತೆ
ಜನಕ್ಕಂಜದಿದ್ದರೂ ಮನಕ್ಕಂಜಬೇಕು
ತರತರವಾಗಿ ಹೇಳಿದ್ದು ಮರೆತರೆ ಮರಕ್ಕಿಂತಾ ಕಡೆ
ಕಾಸಿಗೆ ತಕ್ಕ ಕಜ್ಜಾಯ.
ಇಲಿಯ ವ್ಯಾಜ್ಯಕ್ಕೆ ಬೆಕ್ಕು ಸಾಕ್ಷಿ
ತನ್ನ ತಾ ಬಲ್ಲವನೆ ಬಲ್ಲವ
ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ
ಹಣ್ಣೆಲೆ ಉದುರುವಾಗ ಚಿಗುರೆಲೆ ನಗುತಿತ್ತು
ಕಳ್ಳನ ಕಾವಲಿಟ್ಟ ಹಾಗೆ
ವಿಧಿ ಮುನಿದರೆ ಸರಿ ಬೆಸವಾಯ್ತು
ಮಾಟ ಮಾಡಿದೋನ ಮನೆ ಹಾಳು.
ಅಲ್ಪ ವಿದ್ಯಾ ಮಹಾಗರ್ವಿ
ಮನೇಲಿ ಇಲಿ, ಬೀದೀಲಿ ಹುಲಿ.
ಹೆಣ್ಣು ಚಂದ ಕಣ್ಣು ಕುಲ್ಡು ಅಂದಂಗೆ
ಹಿರೀ‌ಅಕ್ಕನ ಚಾಳಿ ಮನೆ ಮಕ್ಕಳಿಗೆಲ್ಲಾ
ಬುದ್ಧಿ ಇದ್ದವನಲ್ಲಿ ಶ್ರದ್ಧೆ, ನಿದ್ದೆ ಬಾರದವನಲ್ಲಿ ವಿದ್ಯೆ.
ಹಣ ಇದ್ದೋರಿಗೆ ಏನೆಲ್ಲ, ಗುಣ ಇದ್ದೋರಿಗೆ ಏನಿಲ್ಲ
ತುಂಬಿದ ಕೊಡ ತುಳುಕುವುದಿಲ್ಲ
ಕೈ ಕೆಸರಾದ್ರೆ ಬಾಯಿ ಮೊಸರು
ನಗುವ ಹೆಂಗಸು, ಅಳುವ ಗಂಡಸು ಇಬ್ಬರನ್ನೂ ನಂಬಬಾರದು
ಕೋಪ ಪಾಪ ತಂತು ಪಾಪ ತಾಪ ತಂತು
ಇಲಿ ಬೇಟೆಗೆ ತಮಟೆ ಬಡಿದಂಗೆ.
ನರಿ ಕೂಗು ಗಿರಿ ಮುಟ್ಟುತ್ಯೇ ?
ಉತ್ತಮನು ಎತ್ತ ಹೋದರೂ ಶುಭವೇ
ತಪ್ಪಲೇಲಿ ಇದ್ದದ್ದು ಹೋದರೆ ಕಪಾಲದಲ್ಲಿ ಇದ್ದದ್ದು ಹೋದೀತೇ
ಸು೦ದರ ಪುರುಷನೆಲ್ಲೆ ಸುಪಣಾತಿ ಅ೦ದ್ರೆ ಸೂಳೆ ಮನೇಲಿ ಸುಖನಿದ್ರೇಲವ್ರೆ ಎ೦ದಳು.
ಶಿವಾ ಅರಿಯದ ಸಾವು ಇಲ್ಲ ಮನಾ ಅರಿಯದ ಪಾಪ ಇಲ್ಲ
ಸಮಯಕ್ಕಾದವನೆ ನೆಂಟ ಕೆಲಸಕ್ಕಾದವನೆ ಬಂಟ
ಕರಣಗಳ ತಡೆದು ನಿಲಬಾರದು
ಆಸೆಗೆ ಕೊನೆಯಿಲ್ಲ
ಅಕ್ಷರ ಕಲಿಯುವುದಕ್ಕೆ ಬೇಧಭಾವ ಬೇಡ.
ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ ?
ದಿಕ್ಕು ದಿಕ್ಕಿಗೆ ಹೋದರೂ ದುಕ್ಕ ತಪ್ಪದು
ಗ೦ಡ ಪಟ್ಟೆ ಸೀರೆ ತರುತ್ತಾನೆ೦ದು ಇದ್ದ ಬಟ್ಟೆ ಸುಟ್ಟಳ೦ತೆ.
ಆಟಕ್ಕುಂಟು,ಲೆಕ್ಕಕ್ಕಿಲ್ಲ
ಮೇಲೆ ಬಿದ್ದ ಸೂಳೆ ಮೂರು ಕಾಸಿಗೂ ಬೇಡ.
ಹಂಪಿಗೆ ಹೋಗುವುದಕ್ಕಿಂತ ಕೊಂಪೆಯಲ್ಲಿರುವುದೇ ಲೇಸು.
ಹುತ್ತ ಬಡಿದರೆ ಹಾವು ಸಾಯುವುದೇ
ಹಾದಿ ತಪ್ಪಿದವನಿಗೆ ಹದಿನೆಂಟು ಹಾದಿ
ಓಡಿ ಹೋಗೊಳು ಮೊಸರಿಗೆ ಹೆಪ್ಪು ಹಾಕ್ತಾಳ
ಆಗೋ ಪೂಜೆ ಆಗುತ್ತಿರಲಿ ಊದೋ ಶಂಖ ಊದಿ ಬಿಡುವ
ಬಯಕೆಗೆ ಬಡವರಿಲ್ಲ
ಇತ್ತಿತ್ತ ಬಾ ಅಂದ್ರೆ ಇದ್ದ ಮನೇನೂ ಕಿತ್ತುಕೊಂಡ
ಸದಾಶಿವನಿಗೆ ಅದೇ ಧ್ಯಾನ
ತಾರಕ್ಕೊಂದು ಸೀರೆಯಾದರೂ ನಾಯಿ ತಿಕ ಬೆತ್ತಲೆ
ತಿರುಕನ ಬಳಿಗೆ ತಿರುಕ ಹೋದರೆ ಮರುಕ ತಾ ಬರುವುದೇ?
ಮಂಡಕ್ಕಿ ತಿಂದ ಮಗ ಮದ್ದಾನೆ ತರುಬಿದ ಮೃಷ್ಟಾನ್ನ ತಿಂದ ಮಗ ನೊಣ ಝಾಡಿಸಿದ
ಮಳೆಗಾಲದ ಮಳೆ ನಂಬಲಾಗದು ; ಮನೆ ಹೆಂಡ್ತಿ ನಗೆ ನಂಬಲಾಗದು.
ತೀರಕ್ಕೆ ಬಂದ ಮೇಲೆ ತೆರೆಯ ಭಯವೇ
ಆರಕ್ಕೇರಲಿಲ್ಲ, ಮೂರಕ್ಕೀಳಿಯಲಿಲ್ಲ.
ರವಿ ಕಾಣದ್ದನ್ನು ಕವಿ ಕಂಡ
ದೇವರು ವರ ಕೊಟ್ಟರು ಪೂಜಾರಿ ಕೊಡೆಬೇಕಲ್ಲ.
ಮುದುಕೀ ನಿನ್ನಾಟ ಮುಂದೈತಿ
ಬಾಡಿಗೆ ಎತ್ತೆಂದು ಬಡಿದು ಬಡಿದು ಹೂಡಬೇಕೆ
ಸೆಟ್ಟಿ ಸಾಲ ಸತ್ತ ಮೇಲೆ ತಿಳೀತು
ಮಲ್ಲಿಗೆ ವನದಲ್ಲಿ ತುರುಬಿಲ್ಲದಾಕೆ ಸುಳಿದಂತೆ
ಅನ್ಯಾಯದಿಂದ ಗಳಿಸಿದ್ದು ಅಸಡ್ಡಾಳಾಗಿ ಹೋಯ್ತು
ಕಷ್ಟದಂತೆ ಫಲ, ಮನದಂತೆ ಮಹಾದೇವ.
ಕೊಂಕಿಗೆ ಕೊಂಕೇ ಮದ್ದು
ವೇದ ಸುಳ್ಳಾದರು ಗಾದೆ ಸುಳ್ಳಾಗದು.
ಆನೆಯಂಥದೂ ಮುಗ್ಗರಿಸ್ತದೆ
ತಮ್ಮ ನಮ್ಮವನಾದರೂ ನಾದಿನಿ ನಮ್ಮವಳಲ್ಲ
ಸತ್ತ ಮೇಲಿನ ಸೊರ್ಗಕ್ಕಿಂತ ಇದ್ದ ನರಲೋಕ ವಾಸಿ
ಹಾವೂ ಸಾಯಲಿಲ್ಲ ಕೋಲು ಮುರೀಲಿಲ್ಲ
ಕೈಗೆ ಬಂದ ತುತ್ತು ಬಾಯಿಗೆ ಇಲ್ಲ
ದರಿದ್ರ ಏಳಗೊಡುವುದಿಲ್ಲ, ಆಲಸ್ಯ ಉಣಗೊಡುವುದಿಲ್ಲ.
ದಡ್ಡನಿಗೆ ಹಗಲು ಕಳೆಯುವುದಿಲ್ಲ, ಒಳ್ಳೆಯವನಿಗೆ ರಾತ್ರಿ ಸಾಲುವುದಿಲ್ಲ.
ಅಗಸನ ಬಡಿವಾರವೆಲ್ಲ ಹೆರರ ಬಟ್ಟೆ ಮೇಲೆ
ಎಲ್ಲಾ ಜಾಣ; ತುಸ ಕೋಣ
ಇಂದಿನ ಸೋಲು ನಾಳಿನ ಗೆಲುವು.
ಬಡವರ ಕಣ್ಣೀರಿಗೆ ಕರುಣೆ ಬಂದೀತೆ ಬೆಣ್ಣೆಗೆ?
ಹೋಗುವುದು ಮೂಡಿದ ಹೊತ್ತು, ಹೋಗೋದಿಲ್ಲ ಆಡಿದ ಮಾತು.
ಅಲ್ಲುಂಟೆ, ಇಲ್ಲುಂಟೆ, ಕಲ್ಲಲ್ಲುಂಟೆ, ಶಿವದಾನ.
ಕೈಲಾದವರು ಮಾಡುತ್ತಾರೆ ಕೈಲಾಗದವರು ಆಡುತ್ತಾರೆ
ತಾನೊಲಿದ ಮಂಕು ಮಾಣಿಕ್ಯ
ದಾಕ್ಷಿಣ್ಯಕ್ಕೆ ಬಸಿರಾಗೋದು
ಸಾಲ ಕೊಳ್ಳುವಾಗ ಹಾಲು ಕುಡಿದಂತೆ, ಸಾಲ ತಿರುಗಿ ಕೊಡುವಾಗ ಕಿಬ್ಬದಿ ಕೀಲು ಮುರಿದಂತೆ
ಬಿಸಿ ತುಪ್ಪ; ನುಂಗೋದಕ್ಕೂ ಆಗೊಲ್ಲ; ಉಗುಳೋದಕ್ಕೂ ಆಗೊಲ್ಲ
ಕೈ ಕೆಸರಾದರೆ ಬಾಯಿ ಮೊಸರು
ಮು೦ಡೆಯ ಮದುವೆಯಲ್ಲಿ ಉ೦ಡೋನೆ ಜಾಣ.
ಒಲುಮೆಗೆ ನೋಟ ಬೇಟವೇ ಮೊದಲು
ಭಕ್ತಿ ಉಳ್ಳಾತಗೆ ಮುಕ್ತಿ ,ಶಕ್ತಿ ಉಳ್ಳಾತಗೆ ಭುಕ್ತಿ
ಒಪ್ಪದಾ ಮಾತಾಡಿ ಕೋಪಕ್ಕೆ ತುತ್ತಾದ
ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ.
ಹಂಚು ಕಾಣದ ಕೈ ಕಂಚು ಕಾಣ್ತು
ಹಳ್ಳೀ ದೇವರ ತಲೆ ಒಡೆದು, ದಿಲ್ಲೀ ದೇವರ ಹೊಟ್ಟೆ ಹೊರೆದ ಹಾಗೆ
ಹುಳ್ಳಿಕಾಳೂ ತಿನ್ನೊ ಮುಕ್ಕ ಒಬ್ಬಟ್ಟಿನ ಹೂರ್ಣ ಕೇಳಿದಂಗೆ
ಕೈಗೆಟುಕದ ದ್ರಾಕ್ಷಿ ಹುಳಿ
ಉಂಬಾಗ ಉಡುವಾಗ ಊರೆಲ್ಲ ನೆಂಟರು
ತರಗೆಲೆ ಅಡಿಕೆ ತಿರಿದು ತಿನ್ನಬೇಕೆ
ಹತ್ತೋಕ್ ಮೊದ್ಲು ಕುದರೆ ನೋಡು, ಬಿತ್ತೊಕ್ ಮೊದ್ಲು ಹೊಲ ನೋಡು.
ತಬ್ಬಲಿ ದೇವರಿಗೆ ತಂಗಳ ನೈವೇದ್ಯ
ಆಡೋಕಾಗಲ್ಲ,ಅನುಭವಿಸಕ್ಕಾಗಲ್ಲ
ಹಸನಾದ ಮಾತಿಗೆ ಜೀವ ಬೆಸನಾಯ್ತು
ರಾಗಿಕಲ್ಲು ತಿರುಗುವಾಗ ರಾಜ್ಯವೆಲ್ಲಾ ನೆಂಟರು
ಹಿಟ್ಟೂ ಹಳಸಿತ್ತು ನಾಯಿಯೂ ಹಸಿದಿತ್ತು
ಬಾಲ ಸುಟ್ಟ ಬೆಕ್ಕಿನ ಹಾಗೆ
ಹೊರೆ ಹೊತ್ತುಕೊಂಡು ಗ್ರಹಗತಿ ಕೇಳ್ದಂದೆ
ಕಪ್ಪರ ತಿಪ್ಪೇಲಿಟ್ಟರೆ ತನ್ನ ವಾಸನೆ ಬಿಟ್ಟೀತೇ
ಪೇಚಾಟದಲ್ಲಿ ಬಿದ್ದವನಿಗೆ ಪೀಕಲಾಟವೇ ಗತಿ.
ಹೊಳೆಯುವುದೆಲ್ಲಾ ಚಿನ್ನವಲ್ಲ
ಎಂಟು ಹೊನ್ನು ಘನವಾದ ನಂಟು ತಂತು
ನಡತೆ ಕಲಿಯೋದು ಏರುಬಂಡೆ ನಡತೆ ಕೆಡೋದು ಜಾರುಬಂಡೆ
ಮರ ನೆಟ್ಟು ಪಾಪವನ್ನು ಕಳೆದುಕೋ.
ಹೆಂಡತಿಯಿಲ್ಲದ ಮನೆ ತಂತಿಯಿಲ್ಲದ ವೀಣೆ
ಹಲವು ದೇವರ ಮಾಡಿ ಹಾರುವಯ್ಯ ಕೆಟ್ಟ
ಹಿಡಿ ಘಟವ ನೆಚ್ಚದಿರು ದಿಟವೇ ಪುಣ್ಯದ ಪುಂಜ ಸಟೆಯೇ ಪಾಪದ ಬೀಜ
ಗಿಣಿ ಸಾಕಿ ಗಿಡುಗನ ಕೈಗೆ ಕೊಟ್ಟರು.
ಕುದಿಯುವುದರೊಳಗಾಗಿ ಮೂರು ಸಾರಿ ಹಳಸಿದಂತೆ
ಆನೆ ಮೆಟ್ಟಿದ್ದೇ ಸಂದು, ಸೆಟ್ಟಿ ಕಟ್ಟಿದ್ದೇ ಪಟ್ಟಣ
ತಾನೂ ಕುಡಿಯ ಕುಡಿಯಲೀಸ
ಕೆಟ್ಟು ಬದುಕಬಹುದು ಬದುಕಿ ಕೆಡಬಾರದು
ಹಾರ‍್ಸೋನೋ ತೀರ‍್ಸೋನೋ.
ಚಂದುಳ್ಳಿಯೋರೆಲ್ಲ ನನ್ನೇ ನೋಡ್ತಾರೆ ಮತ್ತೊಸಿ ಉಯ್ಯತ್ತೆ ಕೈಯೆಣ್ಣೆಯ ಅಂದ್ಲು.
ನಡೆವರ್ ಎಡವದೇ ಕುಳಿತವರ್ ಎಡವುವರೇ
ಸಮುದ್ರದ ನೆಂಟಸ್ತನ ; ಉಪ್ಪಿಗೆ ಬಡತನ
ಹಸಿದ ಹೊಟ್ಟೆ ತೋರಿಸಿದರೆ ಮಸೆದ ಕತ್ತಿ ತೋರಿಸಿದರು
ತೂತು ಗತ್ತಲೇಲಿ ತಾತನ ಮದುವೆ
ಹೆಂಡ್ರನ್ನ ಸಸಾರ (=ತಾತ್ಸಾರ) ಮಾಡಿದ್ರೆ ಸಂಸಾರ ನಿಸ್ಸಾರವಾಗ್ತದೆ
ಎತ್ತು ಏರಿಗೆಳೀತು, ಕೋಣ ನೀರಿಗೆಳೀತು.
ಹೊತ್ತು ಕಳೆದರೆ ಮತ್ತೆ ಬಾರದು
ಹೋದಾ ಪುಟ್ಟಾ, ಬಂದಾ ಪುಟ್ಟಾ, ಪುಟ್ಟನ ಕಾಲಿಗೆ ನೀರಿಲ್ಲ
ತಲೇ ಕೂದಲಿಲ್ಲದವಳು ತುರುಬು ಬಯಸಿದಳಂತೆ
ಸೊಪ್ಪುಸೆದೆ ತಿನ್ನೋರ ಒಪ್ಪ ನೋಡು, ತುಪ್ಪತೊಗೆ ತಿನ್ನೋರ ರಂಪ ನೋಡು
ಮಾತಿಂದಲೇ ಉಪಚಾರ ಮಾತಿಂದಲೇ ಅಪಚಾರ
ಹಿರೀಮಗ ಆಗಬೇಡ, ಹಿತ್ತಿಲ ಕದ ಆಗಬೇಡ
ಒಲ್ಲದ ಗಂಡನಿಗೆ ಮೊಸರಲ್ಲೂ ಕಲ್ಲು
ಉದ್ಯೋಗವೇ ಗಂಡಸಿಗೆ ಲಕ್ಷಣ
ಆಕಳಿದ್ದವನಿಗೆ ವ್ಯಾಕುಲವಿಲ್ಲ. ಅಕ್ಕಿ ತಿ೦ದವರಿಗೆ ಅನ್ನಿಲ್ಲ,
ಹೆತ್ತವರಿಗೆ ಹೆಗ್ಗಣ ಮುದ್ದು.
ಊರಿಗೆ ದಾರೀಯ ಯಾರು ತೋರಿದರೇನು
ಹೊತ್ತಿಗಿಲ್ಲದ ಗಾದೆ, ಊಟಕ್ಕಿಲ್ಲದ ಉಪ್ಪಿನಕಾಯಿಯಂತೆ.
ಜಾತಿ ಜಾತಿಗೆ ವೈರಿ, ನಾಯಿ ನಾಯಿಗೆ ವೈರಿ.
ಇಲ್ಲದ ಬದುಕು ಮಾಡಿ ಇಲಿಗೆ ಚಣ್ಣ ಹೊಲಿಸಿದರು
ಸೂಳೆ ಕೈಯಲ್ಲಿ ಜೋಳ ಕುಟ್ಟಿಸಿದ ಹಾಗೆ
ಹೆಡ್ಡಾಳಾದ್ರೂ ದೊಡ್ಡಾಳು ಮೇಲು
ಹತ್ತರೊಟ್ಟಿಗೆ ಹನ್ನೊಂದು ಜಾತ್ರೆಯೊಟ್ಟಿಗೆ ಗೋವಿಂದು
ಆಡಿಕೊಳ್ಳೋರ ಮುಂದೆ ಎಡವಿ ಬಿದ್ದ ಹಾಗೆ
ಮಂದ್ಯಾಗ ಮಚ್ಚೀಲೆ ಹೊಡೆದು ಸಂದ್ಯಾಗ ಕಾಲು ಹಿಡಿದರು.
ದುಡ್ಡನ್ನು ಕಾದಿಟ್ಟುಕೊಳ್ಳದವನು ಹಣವಂತನು ಹೇಗೆ ಆದಾನು?
ತನ್ನ ತಾನರಿತವಗೇ ತ್ರಿಭುವನ ತನ್ನೊಳಗೆ ಕಂಡಿತ್ತು
ಬಂಡಾಟದ ನಡೆ ಚೆಂದ ಮಿಂಡಾಟದ ನುಡಿ ಚೆಂದ
ಗಂಡ ಹೆಂಡಿರ ಜಗಳ ಉಂಡು ಮಲಗುವ ತನಕ
ಅಜ್ಜಿಗೆ ಅರಿವೆ ಚಿ೦ತೆ, ಮಗಳಿಗೆ ಗ೦ಡನ ಚಿ೦ತೆ.
ಹುಚ್ಚು ಬಿಟ್ಟ ಹೊರತು ಮದುವೆ ಆಗೋಲ್ಲ; ಮದುವೆ ಆದ ಹೊರತು ಹುಚ್ಚು ಬಿಡಲ್ಲ
ಹೇಳಿಕೆ ಮಾತು ಕೇಳಿ ಹೆಂಡ್ರನ್ನ ಬಿಟ್ಟ
ಹೆಂಡತಿಯಿಲ್ಲದ ಮನೆ ತಂತಿಯಿಲ್ಲದ ವೀಣೆ.
ಹೌದಪ್ಪನ ಮನೇಲಿ ಹೌದಪ್ಪ, ಇಲ್ಲಪ್ಪನ ಮನೇಲಿ ಇಲ್ಲಪ್ಪ
ಅಷ್ಟು ಕಂಡ್ಯ ಅಮಾಸೆ ಕಂಡ್ಯ ; ಹೊಟ್ಟೆ ನೋವಲ್ಲಿ ಕಂಡ್ಯ ಹಾಲು ಅನ್ನವ
ತಕ್ಕಡಿ ಸ್ವರೂಪ ತಕ್ಕವನೇ ಬಲ್ಲ
ಎಲ್ಲರೂ ಪಾಲಕೀಲಿ ಕೂತರೆ ಹೊರೋರು ಯಾರು
ಚೀಲಿ ಮಕ್ಕಳು ಒಲೆ ಮುಂದೆ, ಚಿನಾಲಿ ಮಕ್ಕಳು ಊರ ಮುಂದೆ.
ಊರು ಬಾವಿಗೆ ಬಿದ್ದರೂ, ಊರ ಬಾಯಿಗೆ ಬೀಳಬಾರದು
ಹಂಗಿನ ಅರಮನೆಗಿಂತಾ ಗುಡಿಸಿಲೇ ಮೇಲು
ಗುಡಿಸಿದ ಮೇಲೆ ಕಸ ಇರಬಾರದು . .ಬಡಿಸಿದ ಮೇಲೆ ಹಸಿವಿರಬಾರದು
ಊರೆಲ್ಲ ಸೂರೆ ಆದ ಮೇಲೆ ಬಾಗಿಲ ಮುಚ್ಚಿದರು
ಮದುವೆಯಾಗೋ ಗುಂಡ ಅಂದ್ರೆ ನೀನೇ ನನ್ನ ಹೆಂಡ್ತಿ ಅಂದ
ಕಾಸಿಗೆ ತಕ್ಕ ಕಜ್ಜಾಯ
ಉರಿಯೋ ಬೆಂಕೀಲಿ ಎಣ್ಣೆ ಹೊಯಿದ ಹಾಗೆ
ಎತ್ತ ಹೋದರೂ ಬಿಡದು ಒತ್ತಿ ಕಾಡುವ ವಿಧಿ
ಪಾಪ ಅಂದ್ರೆ ಕರ್ಮ ಬರ್ತದೆ
ತೋಳ ಹಳ್ಳಕ್ಕೆ ಬಿದ್ದರೆ ಆಳಿಗೊಂದು ಕಲ್ಲು
ಇತರರ ಕಣ್ಣಿನ ಕಸ ಕಾಣುವುದು, ತನ್ನ ಕಣ್ಣಿನ ಕಸ ಕಾಣುವುದಿಲ್ಲ.
ಹಾಲು ಮಾರಿದ್ದು ಹಾಲಿಗೆ ನೀರು ಮಾರಿದ್ದು ನೀರಿಗೆ
ಡಾವರ ಹತ್ತಿದಾಗ ದೇವರ ಧ್ಯಾನ
ಅಡುಗೆ ಮಾಡಿದವಳಿಗಿಂತ ಬಡಿಸಿದವಳೇ ಮೇಲು
ಮೂರ್ತಿ ಚಿಕ್ಕದಾದ್ರು ಕೀರ್ತಿ ದೊಡ್ಡದು
ವಿನಾಶ ಕಾಲಕ್ಕೆ ವಿಪರೀತ ಬುದ್ಧಿ
ಹಳೆ ಮನೆಗೆ ಹೆಗ್ಗಣ ಸೇರಿಕೊಂಡಂಗೆ
ಹಣ ಎರವಲು ತಂದು ಮಣ ಉರುವಲು ಕೊಂಡ
ಮಣದಷ್ಟು ಮಾತಿಗಿಂತ ಕಣದಷ್ಟು ಕೆಲಸ ಲೇಸು.
ಹಾವು ಸಾಯಬಾರದು, ಕೋಲು ಮುರೀಬಾರದು.
ಬೀದೀಲಿ ಹೋಗೋ ಮಾರೀನ ಮನೆ ಹೊಕ್ಕು ಹೋಗು ಅಂದಂತಾಯ್ತು
ರಂಭೆಯಂಥ ಹೆಣ್ತೀನ ಬಿಟ್ಟು ದೊಂಬಿತಿಯ ಹಿಂದೆ ಹೋದ
ಸಮಯಕ್ಕೆ ಬಾರದ ಬುದ್ಧಿ ಸಾವಿರ ಇದ್ದರೂ ಲದ್ಧಿ
ಯಜಮಾನಿಲ್ಲದ ಮನೆ ಮೇಟಿ ಇಲ್ಲದ ಕಣ ಎರಡೂ ಒಂದೆ
ನರಿ ಕೂಗು ಗಿರಿ ಮುಟ್ಟುತ್ತದೆಯೆ ?
ತಲೇ ಕೂದಲು ನೆರೆಯಾದ ಮೇಲೆ ತಬ್ಬಿಕೊಂಡ ತಬ್ಬಲಿ ಮುರವ (=ತಿರುಕ)
ಎತ್ತು ಮಾರಿದವಗೆ ಹಗ್ಗದ ಆಸೆಯೇ
ಧರ್ಮಕ್ಕೆ ದಟ್ಟಿ ಕೊಟ್ಟರೆ ಹಿತ್ತಲಿಗೆ ಹೋಗಿ ಮೊಳ ಹಾಕಿದರು
ಮುತ್ತು ಒಡೆದರೆ ಹೋಯ್ತು, ಮಾತು ಆಡಿದರೆ ಹೋಯ್ತು
ವಿಶ್ವಾಸಿ ನೀನಾಗು, ಘಾತುಕಕ್ಕೆ ಬಗ್ಗದೆ ಮುನ್ನುಗ್ಗು.
ದಡ್ಡ ಮನುಷ್ಯ ನೆಲಕ್ಕೆ ಭಾರ, ಅನ್ನಕ್ಕೆ ಖಾರ.
ಸತ್ಯಕ್ಕೆ ಸಾವಿಲ್ಲ; ಸುಳ್ಳಿಗೆ ಸುಖವಿಲ್ಲ
ಶಂಖದಿಂದ ಬಂದರೇ ತೀರ್ಥ
ಕೇಡು ಬರೋ ಕಾಲಕ್ಕೆ ನಂಟೆಲ್ಲ ಹಗೆಯಾಯ್ತು
ಕೆಟ್ಟ ಮೇಲೆ ಬುದ್ಧಿ ಬಂತು
ಬಾಯಿ ಬಂಗಾರ, ಮನ ಅಂಗಾರ.
ಯಾರೂ ಇಲ್ಲದ ಮನೆಗೆ ನಾನು ಜೋಗಪ್ಪ ಅಂದ
ತಿರಿತಿರಿಗಿ ತಿಮ್ಮಪ್ಪನ ಹತ್ತರ ಹೋದರೆ ತಿರಿದುಂಬೋದು ತಪ್ಪೀತೇ?
ಕೊಟ್ಟೆ ಅಂತ ಹೇಳಿ ಕೊಡದವನ ಮಾತು ಬೆನ್ನಿಗೆ ಚೂರಿ ಇರಿದಂತೆ
ಆರಕ್ಕೆ ಹೆಚ್ಚಿಲ್ಲ; ಮೂರಕ್ಕೆ ಕಡಿಮೆಯಿಲ್ಲ
ಹೊತ್ತಿರುವಾಗಲೇ ಗೊತ್ತು ಸೇರಬೇಕು
ತಲೇ ಕೂದಲಿದ್ದರೆ ಎತ್ತ ಬೇಕಾದರು ತುರುಬು ಹಾಕಿಕೊಳ್ಳಬಹುದು
ಇದ್ದದ್ದು ಹೇಳಿದರೆ ಹದ್ದಿನಂತ ಮೋರೆ ಆಯಿತು
ಹಾರೋ ಹಕ್ಕಿಗೆ ಹಾದರ ಕಟ್ಟಿದರು.
ದೀಪಕ್ಕೆ ಎಣ್ಣೆಯ ಹುಯ್ಯ್ ಅಂತ ಸುರಿಯುತ್ತಾರೇ
ತುಂಬಿದ ಕೊಡ ತುಳುಕುವುದಿಲ್ಲ
ನಾಯಿಗೆ ಹೊಡೆಯಲು ಬಣ್ಣದ ಕೋಲೇ.
ಬಣ ಬಣ ಬೆಳಕು ಹರಿದಾಗ ಕತ್ತಲು ಎತ್ತಲೊ

  ಸಾವಿರಾರು ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ - ೧೧

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೧ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೨ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೩ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೪ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೫ ಕ್ಕೆ ಇಲ್ಲಿ ಕ್ಲಿಕ್ ಮಾಡಿ

  ಏಕಾದಶಿಗಳ ಹೆಸರುಗಳು ಮತ್ತು ಫಲ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೬ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೭ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೮ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೯ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೧೦ ಕ್ಕೆ ಇಲ್ಲಿ ಕ್ಲಿಕ್ ಮಾಡಿ

  ಕನ್ನಡ ಜನಪ್ರಿಯ ಗಾದೆಗಳು ಭಾಗ - ೯ Kannada Famous Proverbs

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೧೧ ಕ್ಕೆ ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

Translate »