ನಮ್ಮ ಬಗ್ಗೆ

ನಮ್ಮ ಬಗ್ಗೆ – About Us

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷ್ಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ

ಸಾಮಾಜಿಕ ಮಾಧ್ಯಮ

ಅನ್ನ ಬ್ರಹ್ಮ ಸ್ವರೂಪಿ. ಯಾವ ಕಾರಣಕ್ಕೂ ಭಗವಂತನಿಗೆ ಅವಮಾನಿಸಬೇಡಿ

ಅನ್ನ ಬ್ರಹ್ಮ ಸ್ವರೂಪಿ. ಯಾವ ಕಾರಣಕ್ಕೂ ಭಗವಂತನಿಗೆ ಅವಮಾನಿಸಬೇಡಿ…!

ನಿಮ್ಮ ಊಟ ಹೀಗಿರಲಿ
*ತಟ್ಟೆಯಲ್ಲಿ ಅನ್ನ ಬಡಿಸಿದ ತಕ್ಷಣ ಊಟ ಪ್ರಾರಂಭಿಸಿ.
*ಯಾವುದೇ ಕಾರಣಕ್ಕೂ ಊಟವನ್ನು ಕಾಯಿಸಬೇಡಿ
*ಊಟಕ್ಕಾಗಿ ನೀವು ಕಾಯ್ದರೆ ಪರವಾಗಿಲ್ಲ.
*ಊಟಕ್ಕೆ ಕುಳಿತಾಗ ಎಂದಿಗೂ ಎಡಗೈಯನ್ನು ನೆಲಕ್ಕೆ ಊರ ಬೇಡಿರಿ.
*ನಿಮಗೆ ಎಷ್ಟು ಅವಶ್ಯವೋ ಅಷ್ಟನ್ನೇ ಹಾಕಿಸಿಕೊಳ್ಳಿ.
*ತಟ್ಟೆಯಲ್ಲಿ ಎಂದಿಗೂ ಅನ್ನವನ್ನು ಚೆಲ್ಲಬೇಡಿ.
*ಊಟ ಮಾಡುವಾಗ ಊಟದ ಕೈಯನ್ನು ಜಾಡಿಸಬೇಡಿರಿ.
*ಊಟ ಮಾಡುವಾಗ ಮಾತನಾಡಬೇಡಿ. ಮಾತನಾಡುವ ಅವಶ್ಯಕತೆಯಿದ್ದರೆ ಅವಶ್ಯಕತೆ ಇದ್ದಷ್ಟೇ ಮಾತನಾಡಿ.
*ನಡುನಡುವೆ ನೀರು ಕುಡಿಯಿರಿ. ಇದು ಆಹಾರದ ಪಚನ ಕ್ರಿಯೆಗೆ ಸಹಕಾರಿ.
*ಅಡುಗೆಯನ್ನು ಅಮ್ಮ-ಅಕ್ಕ-ಹೆಂಡತಿ ಬಹಳಷ್ಟು ಇಷ್ಟಪಟ್ಟು ಶ್ರಮ ವಹಿಸಿ ತಯಾರಿಸಿರುತ್ತಾರೆ ಎಂಬುದನ್ನು ಎಂದಿಗೂ ಮರೆಯಬೇಡಿ. ಅವರಿಗೆ ಅವಮಾನವಾಗು ವಂತೆ ಅಡುಗೆಯ ಬಗ್ಗೆ ವಿಮರ್ಶೆ ಮಾಡಬೇಡಿ.
*ಉಣ್ಣುವಾಗ ತಟ್ಟೆಯ ಕೆಳಗೆ ಅನ್ನವನ್ನು ಚೆಲ್ಲಿಕೊಂಡು ಉಣ್ಣಬೇಡಿ.
*ಆಕಸ್ಮಾತಾಗಿ ತುತ್ತು ಕೆಳಕ್ಕೆ ಬಿದ್ದರೆ ಯಾವುದೇ ಸಂಕೋಚವಿಲ್ಲದೆ ಎತ್ತಿಕೊಂಡು, ಕಣ್ಣಿಗೆ ಒತ್ತಿಕೊಂಡು ಬಾಯಿಗೆ ಹಾಕಿಕೊಳ್ಳಿ.
*ತುತ್ತಿನ ಬಗ್ಗೆ ಅಲಕ್ಷ್ಯ, ತಾತ್ಸಾರ ಮಾಡಿದರೆ ಮುಂದೊಂದು ದಿನ ಒಂದೊಂದು ತುತ್ತಿಗೂ ಪರದಾಡಬೇಕಾದೀತು.
*ಉಣ್ಣುವಾಗ ನಿಮ್ಮ ಎಂಜಿಲನ್ನು ಪಕ್ಕದ ತಟ್ಟೆಗೆ ಹಾಕುವುದು ಅಥವಾ ಅವರಿಂದ ನೀವು ತೆಗೆದುಕೊಳ್ಳುವುದನ್ನು ಮಾಡಬೇಡಿ.
*ಅನ್ನ ಬ್ರಹ್ಮ ಸ್ವರೂಪಿ. ಯಾವ ಕಾರಣಕ್ಕೂ ಭಗವಂತನಿಗೆ ಅವಮಾನಿಸಬೇಡಿ.
ಶ್ರೀಕಾಂತ್ ನಾಯ್ಕ್ ಆಧ್ಯಾತ್ಮಿಕ ಚಿಂತಕರು.

Leave a Reply

Your email address will not be published. Required fields are marked *

Translate »